AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo: ಕೇಂದ್ರ ಸರ್ಕಾರಕ್ಕೆ ಉಪವಾಸ ಸತ್ಯಾಗ್ರಹದ ಎಚ್ಚರಿಕೆ ನೀಡಿದ ಪಂಜಾಬ್ ರೈತರು

ಪಟ್ಟು ಬಿಡದೆ ಪ್ರತಿಭಟನೆ ಮುಂದುವರೆಸಿರುವ ಪಂಜಾಬ್ ರೈತರು ಡಿಸೆಂಬರ್ 14ರಿಂದ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ವಿಧಿಸಿದ್ದಾರೆ. ಇತ್ತ ಮೋದಿಯನ್ನು ವಿರೋಧಿಸುವವರು ರಾಷ್ಟ್ರ ವಿರೋಧಿಗಳಲ್ಲ ಎಂದು ಕಾಂಗ್ರೆಸ್ ಹರಿಹಾಯ್ದಿದೆ.

Delhi Chalo: ಕೇಂದ್ರ ಸರ್ಕಾರಕ್ಕೆ ಉಪವಾಸ ಸತ್ಯಾಗ್ರಹದ ಎಚ್ಚರಿಕೆ ನೀಡಿದ ಪಂಜಾಬ್ ರೈತರು
ರೈತ ಮುಖಂಡರ ಜೊತೆ ಸಭೆ ನಡೆಸಿದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ (ಸಂಗ್ರಹ ಚಿತ್ರ)
guruganesh bhat
|

Updated on:Dec 13, 2020 | 6:17 PM

Share

ದೆಹಲಿ: ಪಟ್ಟು ಬಿಡದೆ ಪ್ರತಿಭಟನೆ ಮುಂದುವರೆಸಿರುವ ಪಂಜಾಬ್ ರೈತರು ಡಿಸೆಂಬರ್ 14ರಿಂದ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರ ಜೊತೆ ಇನ್ನೊಂದು ಸುತ್ತಿನ ಸಭೆ ನಡೆಸಿದ ರೈತ ಒಕ್ಕೂಟಗಳ ನಾಯಕರು ಈ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ನಾಳೆ ರಾಜಸ್ಥಾನದ ಶಹಜಹಾನ್​ಪುರದಿಂದ ಸಾವಿರಾರು ರೈತರು ಮೆರವಣಿಗೆಗಳಲ್ಲಿ ರಾಷ್ಟ್ರ ರಾಜಧಾನಿಯತ್ತ ಹೆಜ್ಜೆಹಾಕಲಿದ್ದಾರೆ. ಟ್ರ್ಯಾಕ್ಟರ್​, ಟ್ರಾಲಿಗಳಲ್ಲಿ ಹೊರಟಿರುವ ರೈತರು, ದೆಹಲಿ-ಜೈಪುರ ಮುಖ್ಯ ಹೆದ್ದಾರಿ  ಬಂದ್​ ಮಾಡುವ ಸಾಧ್ಯತೆಯಿದೆ.

ಮೋದಿ ವಿರೋಧಿಗಳು ರಾಷ್ಟ್ರವಿರೋಧಿಗಳಲ್ಲ ಎಂದ ಕಾಂಗ್ರೆಸ್ ಮೋದಿ ವಿರೋಧಿಗಳನ್ನು ಮಾವೋವಾದಿ, ರಾಷ್ಟ್ರವಿರೋಧಿಗಳೆಂದು ಬಿಂಬಿಸಲಾಗುತ್ತಿದೆ ಎಂದು ಕಾಂಗ್ರೆಸ್ ಮತ್ತೊಮ್ಮೆ ದೂರಿದೆ. ಮಾವೋವಾದಿ, ಎಡಪಂಥೀಯ ಮತ್ತು ಸಮಾಜ ಘಾತುಕ ಶಕ್ತಿಗಳು ದೆಹಲಿ ಚಲೋವನ್ನು ಬಳಸಿಕೊಳ್ಳುತ್ತಿವೆ ಎಂಬ ನರೇಂದ್ರ ಸಿಂಗ್ ತೋಮರ್ ಹೇಳಿಕೆಗೆ ಈ ಮೂಲಕ ಕಾಂಗ್ರೆಸ್ ತಿರುಗೇಟು ನೀಡಿದೆ. .

ಕೃಷಿ ಸಚಿವರನ್ನು ಭೇಟಿಯಾದ ಹರಿಯಾಣ ಉಪ ಮುಖ್ಯಮಂತ್ರಿ ದುಷ್ಯಂತ್ ಚೌಟಾಲಾ ಕೇಂದ್ರ ಕೃಷಿ ಸಚಿವರನ್ನು ಹರಿಯಾಣ ಉಪ ಮುಖ್ಯಮಂತ್ರಿ ದುಷ್ಯಂತ್ ಚೌಟಾಲಾ ಭೇಟಿಯಾಗಿ ಚರ್ಚಿಸಿದ್ದಾರೆ. 20ರಿಂದ 24 ಘಂಟೆಗಳಲ್ಲಿ ಒಂದು ನಿರ್ಧಾರ ಹೊರಹೊಮ್ಮುವ ಸಾಧ್ಯತೆಯಿದೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಕೃಷಿ ಕಾಯ್ದೆ ಮಂಡನೆಯಾಗುವಾಗ ನಾನು ಸಂಸತ್ತಿನಲ್ಲಿರಲಿಲ್ಲ: ಹನುಮಾನ್ ಬೇನಿವಾಲ್ ನೂತನ ಕೃಷಿ ಕಾಯ್ದೆಗಳಿಗೆ ವಿರೋಧ ವ್ಯಕ್ತಪಡಿಸುತ್ತಲೇ ಬಂದಿರುವ ಎನ್​ಡಿಎ ಅಂಗಪಕ್ಷ ರಾಷ್ಟ್ರೀಯ ಲೋಕತಾಂತ್ರಿಕ ಪಾರ್ಟಿಯ ಮುಖಂಡ ಹನುಮಾನ್ ಬೇನಿವಾಲ್ ಮತ್ತೊಮ್ಮೆ ಗುಡುಗಿದ್ದಾರೆ. ಕೃಷಿ ಕಾಯ್ದೆ ಮಂಡನೆಯಾಗುವಾಗ ನಾನು ಲೋಕಸಭೆಯಲ್ಲಿರಲಿಲ್ಲ. ಹಾಗೇನಾದರೂ ಇದ್ದರೆ, ಅಂದೇ, ಶಿರೋಮಣಿ ಅಕಾಲಿದಳದಂತೆಯೇ ಎನ್​ಡಿಎಯಿಂದ ಹೊರಬರುತ್ತಿದ್ದೆ ಎಂದು ಗುಡುಗಿದ್ದಾರೆ.

Delhi Chalo: ಪಂಜಾಬ್​ನಿಂದ ಹೊರಟಿವೆ 1300 ಟ್ರ್ಯಾಕ್ಟರ್​ಗಳು, ಪ್ರತಿಭಟನೆಯ ಕಾವಿಗೆ ಟೋಲ್​ಗಳು ಮುಕ್ತ ಮುಕ್ತ ಮುಕ್ತ..

Published On - 7:42 pm, Sat, 12 December 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ