AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಮ್ಮೆ ಹಾಲು ಕರೆಯಲು ಬಿಡುತ್ತಿಲ್ಲ ಎಂದು ಪೊಲೀಸ್ ಠಾಣೆಗೆ ದೂರು ನೀಡಿದ ರೈತ!

ನಾಯಗಾಂವ್ ಪೊಲೀಸ್ ಠಾಣೆಯಲ್ಲಿ ಶನಿವಾರ ದೂರು ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದ ಎಮ್ಮೆ ಹಾಲು ಕರೆಯಲು ಅನುವು ಮಾಡಿಕೊಡುತ್ತಿಲ್ಲ ಎಂದು ಅವರು ದೂರು ನೀಡಿರುವ ಬಗ್ಗೆ ಪೊಲೀಸ್ ಅಧಿಕಾರಿ ಅರವಿಂದ್ ಶಾ ಪಿಟಿಐಗೆ ಹೇಳಿಕೆ ನೀಡಿದ್ದಾರೆ.

ಎಮ್ಮೆ ಹಾಲು ಕರೆಯಲು ಬಿಡುತ್ತಿಲ್ಲ ಎಂದು ಪೊಲೀಸ್ ಠಾಣೆಗೆ ದೂರು ನೀಡಿದ ರೈತ!
ಎಮ್ಮೆ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Nov 14, 2021 | 10:24 PM

Share

ಭೋಪಾಲ್: ಮಧ್ಯ ಪ್ರದೇಶದ ಭಿಂದ್ ಜಿಲ್ಲೆಯ ರೈತರು ಪೊಲೀಸ್ ಠಾಣೆಗೆ ತೆರಳಿ ನೀಡಿದ ದೂರೊಂದು ಬಹಳ ಸದ್ದು ಮಾಡಿದೆ. ಜನರ ಕುತೂಹಲ ಕೆರಳಿಸಿದೆ. ಇಲ್ಲಿನ ರೈತರು ಅಂಥದ್ದೇನು ಮಾಡಿದರು ಅಂತೀರಾ? ರೈತ ಒಬ್ಬರು ತಮ್ಮ ಎಮ್ಮೆಯನ್ನೂ ಕೂಡಿಕೊಂಡು ಪೊಲೀಸ್ ಠಾಣೆಗೆ ತೆರಳಿ ಆ ಎಮ್ಮೆಯ ವಿರುದ್ಧವೇ ದೂರು ಕೊಟ್ಟಿದ್ದಾರೆ. ಆ ಎಮ್ಮೆ ಹಾಲು ಕರೆಯಲು ಅವಕಾಶ ಮಾಡಿಕೊಟ್ಟಿಲ್ಲ ಎಂಬ ಕಾರಣ ಹೇಳಿ ಎಮ್ಮೆ ವಿರುದ್ಧ ದೂರು ನೀಡಿದ್ದಾರೆ. ಎಮ್ಮೆಯ ಮೇಲೆ ಮಾಟ ಮಂತ್ರ ಪ್ರಯೋಗಿಸಲಾಗಿದೆ ಎಂಬ ಬಗ್ಗೆಯೂ ಅವರು ದೂರು ಕೊಟ್ಟಿದ್ದಾರೆ.

ಇಲ್ಲಿನ ನಾಯಗಾಂವ್ ಎಂಬ ಹಳ್ಳಿಯ ಪೊಲೀಸರ ಬಳಿ ಆತ ರೈತ ಎಮ್ಮೆಯ ಜೊತೆಗೆ ದೂರು ನೀಡುತ್ತಿರುವುದು ಹಾಗೂ ಪೊಲೀಸರ ಸಹಾಯ ಕೇಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರೈತರನ್ನು ಬಾಬುಲಾಲ್ ಜಾತವ್ (45) ಎಂದು ಗುರುತಿಸಲಾಗಿದೆ. ಅವರು ನಾಯಗಾಂವ್ ಪೊಲೀಸ್ ಠಾಣೆಯಲ್ಲಿ ಶನಿವಾರ ದೂರು ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದ ಎಮ್ಮೆ ಹಾಲು ಕರೆಯಲು ಅನುವು ಮಾಡಿಕೊಡುತ್ತಿಲ್ಲ ಎಂದು ಅವರು ದೂರು ನೀಡಿರುವ ಬಗ್ಗೆ ಪೊಲೀಸ್ ಅಧಿಕಾರಿ ಅರವಿಂದ್ ಶಾ ಪಿಟಿಐಗೆ ಹೇಳಿಕೆ ನೀಡಿದ್ದಾರೆ.

ದೂರಿನಲ್ಲಿ ಆ ಎಮ್ಮೆಯ ಮೇಲೆ ಮಾಟ ಮಂತ್ರ ಪ್ರಯೋಗಿಸಲಾಗಿದೆ ಎಂದು ಹೇಳಿರುವ ಬಗ್ಗೆ ಕೂಡ ಉಲ್ಲೇಖಿಸಲಾಗಿದೆ. ಕೆಲವು ಗ್ರಾಮಸ್ಥರ ಹೇಳಿಕೆಯಂತೆ ಎಮ್ಮೆಯ ಮೇಲೆ ವಶೀಕರಣ ಮಂತ್ರ ಪ್ರಯೋಗ ಮಾಡಲಾಗಿದೆ. ಹೀಗೆ ದೂರು ನೀಡಿ ನಾಲ್ಕು ಗಂಟೆ ಬಳಿಕ ಆ ರೈತ ಮತ್ತೆ ಪೊಲೀಸ್ ಠಾಣೆಯ ಮುಂದೆ ಹಾಜರಾಗಿದ್ದಾರೆ. ಆಗಲೂ ಎಮ್ಮೆಯನ್ನು ಕೂಡಿಕೊಂಡು ಅವರು ಠಾಣೆಗೆ ಬಂದಿದ್ದಾರೆ. ಈ ಬಗ್ಗೆಯೂ ಪೊಲೀಸರು ಹೇಳಿಕೆ ಕೊಟ್ಟಿದ್ದಾರೆ.

ಸಹಾಯ ಕೇಳಿ, ದೂರು ನೀಡಲು ಬಂದಿದ್ದ ರೈತರಿಗೆ ಹಳ್ಳಿಯ ಪಶು ವೈದ್ಯರ ಬಳಿ ತೆರಳಲು ಹೇಳಿದ್ದೆವು ಎಂದು ಪೊಲೀಸರು ತಿಳಿಸಿದ್ದಾರೆ. ಆ ಬಳಿಕ, ರೈತ ತನ್ನ ಎಮ್ಮೆಯ ಜೊತೆಗೆ ಮತ್ತೆ ಠಾಣೆಗೆ ಬಂದಿದ್ದಾರೆ. ಎಮ್ಮೆಯು ಹಾಲು ಕೊಡಲು ಅನುಕೂಲ ಮಾಡಿಕೊಟ್ಟಿದೆ ಎಂದು ಹೇಳಿ ಅವರು ಪೊಲೀಸರಿಗೆ ಧನ್ಯವಾದ ತಿಳಿಸಿದ್ದಾರೆ. ಹೀಗೆ ಪ್ರಕರಣ ಸುಖಾಂತ್ಯ ಕಂಡಿದೆ.

ಇದನ್ನೂ ಓದಿ: ನಮ್ಮ ಎಮ್ಮೆ-ನಮ್ಮ ಹೆಮ್ಮೆ! ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ, ಧಾರವಾಡಿ ಎಮ್ಮೆಗೆ ಕಡೆಗೂ ಸಿಕ್ಕಿತು ರಾಷ್ಟ್ರೀಯ ಮಾನ್ಯತೆ

ಇದನ್ನೂ ಓದಿ: ಕಲಬುರಗಿ: ದನದ ಚರ್ಮ ಸಾಗಾಟ ಮಾಡುತ್ತಿದ್ದ ಲಾರಿ ಜಪ್ತಿ; 9 ಟನ್ ಗೋವು, ಎಮ್ಮೆ, ಕುರಿಗಳ ಚರ್ಮ ವಶ

Follow Us
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು