AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಿಯಾಣ ಸರ್ಕಾರ ನಡೆಸುವ RD ಧ್ವಜಾರೋಹಣಕ್ಕೆ.. ಟ್ರ್ಯಾಕ್ಟರ್ ಪರೇಡ್​ ಭಯ

ಸಾವಿರಾರು ಟ್ರ್ಯಾಕ್ಟರ್​ಗಳೊಂದಿಗೆ ದೆಹಲಿಯಲ್ಲಿ ಟ್ರ್ಯಾಕ್ಟರ್​ ಪರೇಡ್ ನಡೆಸುವುದರೊಂದಿಗೆ, ಹರಿಯಾಣದ ಪ್ರಮುಖ ಸ್ಥಳಗಳಲ್ಲೂ ಮೆರವಣಿಗೆ ನಡೆಸಲು ರೈತರು ತಯಾರಿ ನಡೆಸುತ್ತಿದ್ದಾರೆ. ರೈತರ ಜತೆಗೆ ಕಾಂಗ್ರೆಸ್ ಮತ್ತು ಇಂಡಿಯನ್ ನ್ಯಾಷನಲ್ ಲೋಕದಳ್ ಪಕ್ಷಗಳು ಸಹ ವಿವಿಧೆಡೆ ಮೆರವಣಿಗೆ ನಡೆಸಲಿವೆ.

ಹರಿಯಾಣ ಸರ್ಕಾರ ನಡೆಸುವ RD ಧ್ವಜಾರೋಹಣಕ್ಕೆ.. ಟ್ರ್ಯಾಕ್ಟರ್ ಪರೇಡ್​ ಭಯ
ಟ್ರ್ಯಾಕ್ಟರ್ ಏರಿ ಕುಳಿತಿರುವ ಮಹಿಳೆಯರು (ಸಾಂಕೇತಿಕ ಚಿತ್ರ)
guruganesh bhat
| Edited By: |

Updated on:Jan 15, 2021 | 3:56 PM

Share

ದೆಹಲಿ: ಗಣರಾಜ್ಯೋತ್ಸವದಂದು ಧ್ವಜಾರೋಹಣ ನಡೆಸಲು ಹರಿಯಾಣದ ಮುಖ್ಯಮಂತ್ರಿ ಮನೋಹರ್​ಲಾಲ್ ಖಟ್ಟರ್ ಮತ್ತು ಉಪ ಮುಖ್ಯಮಂತ್ರಿ ದುಷ್ಯಂತ್ ಚೌತಾಲಾಗೆ ಅವಕಾಶ ನೀಡಬಾರದು ಎಂದು ವಿವಿಧ ರೈತ ಸಂಘಗಳು ಮನವಿ ಮಾಡಿವೆ. ಈ ಬಾರಿಯ 72ನೇ ಗಣರಾಜ್ಯೋತ್ಸವದಂದು ಹರಿಯಾಣ ಸರ್ಕಾರದ ಸಚಿವರು ನಡೆಸಲಿರುವ ಧ್ವಜಾರೋಹಣಕ್ಕೆ ಭಂಗ ತರುವ ಸಾಧ್ಯತೆಗಳು ದಟ್ಟವಾಗಿದೆ.

ಸಾವಿರಾರು ಟ್ರ್ಯಾಕ್ಟರ್​ಗಳೊಂದಿಗೆ ದೆಹಲಿಯಲ್ಲಿ ಟ್ರ್ಯಾಕ್ಟರ್​ ಪರೇಡ್ ನಡೆಸುವುದರೊಂದಿಗೆ, ಹರಿಯಾಣದ ಪ್ರಮುಖ ಸ್ಥಳಗಳಲ್ಲೂ ಮೆರವಣಿಗೆ ನಡೆಸಲು ರೈತರು ತಯಾರಿ ನಡೆಸುತ್ತಿದ್ದಾರೆ. ರೈತರ ಜತೆಗೆ ಕಾಂಗ್ರೆಸ್ ಮತ್ತು ಇಂಡಿಯನ್ ನ್ಯಾಷನಲ್ ಲೋಕದಳ ಪಕ್ಷಗಳು ಸಹ ವಿವಿಧೆಡೆ ಮೆರವಣಿಗೆ ನಡೆಸಲಿವೆ.

ಗಣರಾಜ್ಯೋತ್ಸವದಂದು ಧ್ವಜಾರೋಹಣಕ್ಕೆ ಯಾವುದೇ ಅಡ್ಡಿಯಾಗದಂತೆ ತಡೆಯಲು ಪೊಲೀಸರು ಯೋಜನೆ ರೂಪಿಸಿದ್ದಾರೆ. ಹರಿಯಾಣ ಸರ್ಕಾರ ಸಚಿವರು ನಡೆಸಲಿರುವ ಧ್ವಜಾರೋಹಣಕ್ಕೆ ಭಂಗ ತರಲು ರೈತ ಹೋರಾಟಗಾರರು ಯೋಜನೆ ರೂಪಿಸಿದ ಕುರಿತು ಪೊಲೀಸರಿಗೆ ಮಾಹಿತಿ ದೊರೆತಿದ್ದು, ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ತಡೆಯಲು ಎಲ್ಲ ರೀತಿಯ ಮುಂಜಾಗ್ರತೆ  ಕ್ರಮಗಳನ್ನು ರೂಪಿಸುತ್ತಿದ್ದಾರೆ.

ಕಾಂಗ್ರೆಸ್​ನಿಂದಲೂ ಮೆರವಣಿಗೆ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್​ ಮುಖಂಡರು ಕಿಸಾನ್ ಅಧಿಕಾರ್ ದಿವಸ್​ ಪ್ರಯುಕ್ತ ದೆಹಲಿ ಮತ್ತು ಉತ್ತರ ಪ್ರದೇಶಗಳಲ್ಲಿ ಮೆರವಣಿಗೆ ನಡೆಸಲಿದ್ದಾರೆ.

ಟ್ರ್ಯಾಕ್ಟರ್​ ಪೆರೇಡ್​ಗೆ​ ಹರಿಯಾಣ ಯುವತಿಯರ ಸಿದ್ಧತೆ; ಗಣರಾಜ್ಯೋತ್ಸವದಂದು ಇವರೂ ದೆಹಲಿಗೆ ಧಾವಿಸಲಿದ್ದಾರೆ

Published On - 11:37 am, Fri, 15 January 21

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್