AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಿಯಾಣ ಸರ್ಕಾರ ನಡೆಸುವ RD ಧ್ವಜಾರೋಹಣಕ್ಕೆ.. ಟ್ರ್ಯಾಕ್ಟರ್ ಪರೇಡ್​ ಭಯ

ಸಾವಿರಾರು ಟ್ರ್ಯಾಕ್ಟರ್​ಗಳೊಂದಿಗೆ ದೆಹಲಿಯಲ್ಲಿ ಟ್ರ್ಯಾಕ್ಟರ್​ ಪರೇಡ್ ನಡೆಸುವುದರೊಂದಿಗೆ, ಹರಿಯಾಣದ ಪ್ರಮುಖ ಸ್ಥಳಗಳಲ್ಲೂ ಮೆರವಣಿಗೆ ನಡೆಸಲು ರೈತರು ತಯಾರಿ ನಡೆಸುತ್ತಿದ್ದಾರೆ. ರೈತರ ಜತೆಗೆ ಕಾಂಗ್ರೆಸ್ ಮತ್ತು ಇಂಡಿಯನ್ ನ್ಯಾಷನಲ್ ಲೋಕದಳ್ ಪಕ್ಷಗಳು ಸಹ ವಿವಿಧೆಡೆ ಮೆರವಣಿಗೆ ನಡೆಸಲಿವೆ.

ಹರಿಯಾಣ ಸರ್ಕಾರ ನಡೆಸುವ RD ಧ್ವಜಾರೋಹಣಕ್ಕೆ.. ಟ್ರ್ಯಾಕ್ಟರ್ ಪರೇಡ್​ ಭಯ
ಟ್ರ್ಯಾಕ್ಟರ್ ಏರಿ ಕುಳಿತಿರುವ ಮಹಿಳೆಯರು (ಸಾಂಕೇತಿಕ ಚಿತ್ರ)
guruganesh bhat
| Edited By: |

Updated on:Jan 15, 2021 | 3:56 PM

Share

ದೆಹಲಿ: ಗಣರಾಜ್ಯೋತ್ಸವದಂದು ಧ್ವಜಾರೋಹಣ ನಡೆಸಲು ಹರಿಯಾಣದ ಮುಖ್ಯಮಂತ್ರಿ ಮನೋಹರ್​ಲಾಲ್ ಖಟ್ಟರ್ ಮತ್ತು ಉಪ ಮುಖ್ಯಮಂತ್ರಿ ದುಷ್ಯಂತ್ ಚೌತಾಲಾಗೆ ಅವಕಾಶ ನೀಡಬಾರದು ಎಂದು ವಿವಿಧ ರೈತ ಸಂಘಗಳು ಮನವಿ ಮಾಡಿವೆ. ಈ ಬಾರಿಯ 72ನೇ ಗಣರಾಜ್ಯೋತ್ಸವದಂದು ಹರಿಯಾಣ ಸರ್ಕಾರದ ಸಚಿವರು ನಡೆಸಲಿರುವ ಧ್ವಜಾರೋಹಣಕ್ಕೆ ಭಂಗ ತರುವ ಸಾಧ್ಯತೆಗಳು ದಟ್ಟವಾಗಿದೆ.

ಸಾವಿರಾರು ಟ್ರ್ಯಾಕ್ಟರ್​ಗಳೊಂದಿಗೆ ದೆಹಲಿಯಲ್ಲಿ ಟ್ರ್ಯಾಕ್ಟರ್​ ಪರೇಡ್ ನಡೆಸುವುದರೊಂದಿಗೆ, ಹರಿಯಾಣದ ಪ್ರಮುಖ ಸ್ಥಳಗಳಲ್ಲೂ ಮೆರವಣಿಗೆ ನಡೆಸಲು ರೈತರು ತಯಾರಿ ನಡೆಸುತ್ತಿದ್ದಾರೆ. ರೈತರ ಜತೆಗೆ ಕಾಂಗ್ರೆಸ್ ಮತ್ತು ಇಂಡಿಯನ್ ನ್ಯಾಷನಲ್ ಲೋಕದಳ ಪಕ್ಷಗಳು ಸಹ ವಿವಿಧೆಡೆ ಮೆರವಣಿಗೆ ನಡೆಸಲಿವೆ.

ಗಣರಾಜ್ಯೋತ್ಸವದಂದು ಧ್ವಜಾರೋಹಣಕ್ಕೆ ಯಾವುದೇ ಅಡ್ಡಿಯಾಗದಂತೆ ತಡೆಯಲು ಪೊಲೀಸರು ಯೋಜನೆ ರೂಪಿಸಿದ್ದಾರೆ. ಹರಿಯಾಣ ಸರ್ಕಾರ ಸಚಿವರು ನಡೆಸಲಿರುವ ಧ್ವಜಾರೋಹಣಕ್ಕೆ ಭಂಗ ತರಲು ರೈತ ಹೋರಾಟಗಾರರು ಯೋಜನೆ ರೂಪಿಸಿದ ಕುರಿತು ಪೊಲೀಸರಿಗೆ ಮಾಹಿತಿ ದೊರೆತಿದ್ದು, ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ತಡೆಯಲು ಎಲ್ಲ ರೀತಿಯ ಮುಂಜಾಗ್ರತೆ  ಕ್ರಮಗಳನ್ನು ರೂಪಿಸುತ್ತಿದ್ದಾರೆ.

ಕಾಂಗ್ರೆಸ್​ನಿಂದಲೂ ಮೆರವಣಿಗೆ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್​ ಮುಖಂಡರು ಕಿಸಾನ್ ಅಧಿಕಾರ್ ದಿವಸ್​ ಪ್ರಯುಕ್ತ ದೆಹಲಿ ಮತ್ತು ಉತ್ತರ ಪ್ರದೇಶಗಳಲ್ಲಿ ಮೆರವಣಿಗೆ ನಡೆಸಲಿದ್ದಾರೆ.

ಟ್ರ್ಯಾಕ್ಟರ್​ ಪೆರೇಡ್​ಗೆ​ ಹರಿಯಾಣ ಯುವತಿಯರ ಸಿದ್ಧತೆ; ಗಣರಾಜ್ಯೋತ್ಸವದಂದು ಇವರೂ ದೆಹಲಿಗೆ ಧಾವಿಸಲಿದ್ದಾರೆ

Published On - 11:37 am, Fri, 15 January 21

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ