AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ.26ರಂದು ರಾಜ್ಯಪಾಲರುಗಳ ನಿವಾಸದ ಎದುರು ಧರಣಿ ನಡೆಸಲು ರೈತಸಂಘಟನೆಗಳ ನಿರ್ಧಾರ; ಕಪ್ಪುಬಾವುಟ ಪ್ರದರ್ಶನ

ಸುಮಾರು 40 ರೈತಸಂಘಟನೆಗಳನ್ನೊಳಗೊಂಡ ಸಂಯುಕ್ತ ಕಿಸಾನ್​ ಮೋರ್ಚಾ ಈ ಬಗ್ಗೆ ಹೇಳಿಕೆ ನೀಡಿದ್ದು, ಜೂ.26ರ ಪ್ರತಿಭಟನೆಯಂದು ಕಪ್ಪು ಬಾವುಟ ಪ್ರದರ್ಶನ ಮಾಡುವುದಾಗಿ ಹೇಳಿಕೊಂಡಿದೆ. ಹಾಗೇ, ರಾಷ್ಟ್ರಪತಿ ರಾಮನಾಥ ಕೋವಿಂದ್​ ಅವರಿಗೆ ಜ್ಞಾಪಕ ಪತ್ರವನ್ನೂ ಕಳಿಸಲಿದೆ.

ಜೂ.26ರಂದು ರಾಜ್ಯಪಾಲರುಗಳ ನಿವಾಸದ ಎದುರು ಧರಣಿ ನಡೆಸಲು ರೈತಸಂಘಟನೆಗಳ ನಿರ್ಧಾರ; ಕಪ್ಪುಬಾವುಟ ಪ್ರದರ್ಶನ
ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde|

Updated on: Jun 12, 2021 | 10:02 AM

Share

ದೆಹಲಿ: ದೇಶದಲ್ಲಿ ಒಂದೆಡೆ ಕೊರೊನಾ ವೈರಸ್​ ಪ್ರಮಾಣ ಸ್ವಲ್ಪ ಮಟ್ಟಿಗೆ ತಗ್ಗುತ್ತಿದೆ. ಹಾಗೇ ಇನ್ನೊಂದೆಡೆ ದೆಹಲಿ ಗಡಿಗಳಲ್ಲಿ ರೈತರು ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆಯನ್ನು ತೀವ್ರಗೊಳಿಸುತ್ತಿದ್ದಾರೆ. ಕೇಂದ್ರಸರ್ಕಾರ ಜಾರಿಗೊಳಿಸಿರುವ ಮೂರು ನೂತನ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ಶುರು ಮಾಡಿ, ಏಳು ತಿಂಗಳಾದ ಹಿನ್ನೆಲೆಯಲ್ಲಿ, ಜೂ.26ರಂದು ಎಲ್ಲ ರಾಜ್ಯಗಳ ರಾಜ್ಯಪಾಲರ ನಿವಾಸದ ಎದುರು ಧರಣಿ ನಡೆಸುವುದಾಗಿ ರೈತಸಂಘಟನೆಗಳು ಘೋಷಣೆ ಮಾಡಿವೆ.

ಸುಮಾರು 40 ರೈತಸಂಘಟನೆಗಳನ್ನೊಳಗೊಂಡ ಸಂಯುಕ್ತ ಕಿಸಾನ್​ ಮೋರ್ಚಾ ಈ ಬಗ್ಗೆ ಹೇಳಿಕೆ ನೀಡಿದ್ದು, ಜೂ.26ರ ಪ್ರತಿಭಟನೆಯಂದು ಕಪ್ಪು ಬಾವುಟ ಪ್ರದರ್ಶನ ಮಾಡುವುದಾಗಿ ಹೇಳಿಕೊಂಡಿದೆ. ಹಾಗೇ, ರಾಷ್ಟ್ರಪತಿ ರಾಮನಾಥ ಕೋವಿಂದ್​ ಅವರಿಗೆ ಜ್ಞಾಪಕ ಪತ್ರವನ್ನೂ ಕಳಿಸಲಿದೆ. ಜೂ.26ರ ದಿನವನ್ನು ಖೇತಿ ಬಚಾವೋ, ಲೋಕತಂತ್ರ ಬಚಾವೋ ದಿವಸ್​ (ಕೃಷಿಯನ್ನು ಉಳಿಸಿ, ಪ್ರಜಾಭುತ್ವ ರಕ್ಷಿಸಿ ದಿನವನ್ನಾಗಿ ಆಚರಿಸಲಾಗುವುದು ಎಂದು ಸಂಯುಕ್ತ ಕಿಸಾನ್​ ಮೋರ್ಚಾ ಮುಖಂಡ ಇಂದ್ರಜಿತ್​ ಸಿಂಗ್​ ತಿಳಿಸಿದ್ದಾರೆ.

1975ರ ಜೂನ್​ 26ರಂದು ದೇಶದಲ್ಲಿ ತುರ್ತುಪರಿಸ್ಥಿತಿ ಘೋಷಣೆ ಮಾಡಲಾಗಿತ್ತು. ಹಾಗೇ, ನಮ್ಮ ಪ್ರತಿಭಟನೆಗೂ ಜೂ.26ರಂದು ಏಳು ತಿಂಗಳಾಗುತ್ತದೆ. ನಮ್ಮ ದೇಶದಲ್ಲಿ ಸರ್ವಾಧಿಕಾರ ವಾತಾವರಣ ಸೃಷ್ಟಿಯಾಗಿದೆ. ಇಲ್ಲಿ ಕೃಷಿ, ಪ್ರಜಾಪ್ರಭುತ್ವ ಹಕ್ಕಿನ ಮೇಲೆ ದಾಳಿ ನಡೆತಯುತ್ತಿದೆ ಎಂದು ಇಂದ್ರಜಿತ್​ ಸಿಂಗ್ ಆರೋಪಿಸಿದ್ದಾರೆ.

ನಾವು ರೈತರೊಂದಿಗೆ ಮಾತುಕತೆಗೆ ಸಿದ್ಧ ರೈತರು ಒಂದೊಂದೇ ಹಂತವಾಗಿ ಪ್ರತಿಭಟನೆ ತೀವ್ರಗೊಳಿಸುತ್ತಿರುವ ಬೆನ್ನಲ್ಲೇ, ಕೇಂದ್ರ ಸರ್ಕಾರ ಮತ್ತೊಮ್ಮೆ ಮಾತುಕತೆಗೆ ಮುಂದಾಗಿದೆ. ಈ ಬಗ್ಗೆ ಬುಧವಾರ ಹೇಳಿಕೆ ನೀಡಿರುವ ಕೃಷಿ ಸಚಿವ ನರೇಂದ್ರ ಸಿಂಗ್​ ತೋಮರ್​, ರೈತರು ಮಾತುಕತೆಗೆ ಆಗಮಿಸಬಹುದು. ಈ ಕೃಷಿ ಕಾಯ್ದೆಗಳ ಬಗ್ಗೆ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಬಹುದು ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ದುರಂತ ಪ್ರಕರಣ; ಮೃತಪಟ್ಟ ವ್ಯಕ್ತಿಯ ಹೆಸರು ಪರಿಹಾರ ಪಟ್ಟಿಯಲ್ಲಿ ಸೇರಿಸದ ಜಿಲ್ಲಾಡಳಿತ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ