AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ.26ರಂದು ರಾಜ್ಯಪಾಲರುಗಳ ನಿವಾಸದ ಎದುರು ಧರಣಿ ನಡೆಸಲು ರೈತಸಂಘಟನೆಗಳ ನಿರ್ಧಾರ; ಕಪ್ಪುಬಾವುಟ ಪ್ರದರ್ಶನ

ಸುಮಾರು 40 ರೈತಸಂಘಟನೆಗಳನ್ನೊಳಗೊಂಡ ಸಂಯುಕ್ತ ಕಿಸಾನ್​ ಮೋರ್ಚಾ ಈ ಬಗ್ಗೆ ಹೇಳಿಕೆ ನೀಡಿದ್ದು, ಜೂ.26ರ ಪ್ರತಿಭಟನೆಯಂದು ಕಪ್ಪು ಬಾವುಟ ಪ್ರದರ್ಶನ ಮಾಡುವುದಾಗಿ ಹೇಳಿಕೊಂಡಿದೆ. ಹಾಗೇ, ರಾಷ್ಟ್ರಪತಿ ರಾಮನಾಥ ಕೋವಿಂದ್​ ಅವರಿಗೆ ಜ್ಞಾಪಕ ಪತ್ರವನ್ನೂ ಕಳಿಸಲಿದೆ.

ಜೂ.26ರಂದು ರಾಜ್ಯಪಾಲರುಗಳ ನಿವಾಸದ ಎದುರು ಧರಣಿ ನಡೆಸಲು ರೈತಸಂಘಟನೆಗಳ ನಿರ್ಧಾರ; ಕಪ್ಪುಬಾವುಟ ಪ್ರದರ್ಶನ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 12, 2021 | 10:02 AM

Share

ದೆಹಲಿ: ದೇಶದಲ್ಲಿ ಒಂದೆಡೆ ಕೊರೊನಾ ವೈರಸ್​ ಪ್ರಮಾಣ ಸ್ವಲ್ಪ ಮಟ್ಟಿಗೆ ತಗ್ಗುತ್ತಿದೆ. ಹಾಗೇ ಇನ್ನೊಂದೆಡೆ ದೆಹಲಿ ಗಡಿಗಳಲ್ಲಿ ರೈತರು ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆಯನ್ನು ತೀವ್ರಗೊಳಿಸುತ್ತಿದ್ದಾರೆ. ಕೇಂದ್ರಸರ್ಕಾರ ಜಾರಿಗೊಳಿಸಿರುವ ಮೂರು ನೂತನ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ಶುರು ಮಾಡಿ, ಏಳು ತಿಂಗಳಾದ ಹಿನ್ನೆಲೆಯಲ್ಲಿ, ಜೂ.26ರಂದು ಎಲ್ಲ ರಾಜ್ಯಗಳ ರಾಜ್ಯಪಾಲರ ನಿವಾಸದ ಎದುರು ಧರಣಿ ನಡೆಸುವುದಾಗಿ ರೈತಸಂಘಟನೆಗಳು ಘೋಷಣೆ ಮಾಡಿವೆ.

ಸುಮಾರು 40 ರೈತಸಂಘಟನೆಗಳನ್ನೊಳಗೊಂಡ ಸಂಯುಕ್ತ ಕಿಸಾನ್​ ಮೋರ್ಚಾ ಈ ಬಗ್ಗೆ ಹೇಳಿಕೆ ನೀಡಿದ್ದು, ಜೂ.26ರ ಪ್ರತಿಭಟನೆಯಂದು ಕಪ್ಪು ಬಾವುಟ ಪ್ರದರ್ಶನ ಮಾಡುವುದಾಗಿ ಹೇಳಿಕೊಂಡಿದೆ. ಹಾಗೇ, ರಾಷ್ಟ್ರಪತಿ ರಾಮನಾಥ ಕೋವಿಂದ್​ ಅವರಿಗೆ ಜ್ಞಾಪಕ ಪತ್ರವನ್ನೂ ಕಳಿಸಲಿದೆ. ಜೂ.26ರ ದಿನವನ್ನು ಖೇತಿ ಬಚಾವೋ, ಲೋಕತಂತ್ರ ಬಚಾವೋ ದಿವಸ್​ (ಕೃಷಿಯನ್ನು ಉಳಿಸಿ, ಪ್ರಜಾಭುತ್ವ ರಕ್ಷಿಸಿ ದಿನವನ್ನಾಗಿ ಆಚರಿಸಲಾಗುವುದು ಎಂದು ಸಂಯುಕ್ತ ಕಿಸಾನ್​ ಮೋರ್ಚಾ ಮುಖಂಡ ಇಂದ್ರಜಿತ್​ ಸಿಂಗ್​ ತಿಳಿಸಿದ್ದಾರೆ.

1975ರ ಜೂನ್​ 26ರಂದು ದೇಶದಲ್ಲಿ ತುರ್ತುಪರಿಸ್ಥಿತಿ ಘೋಷಣೆ ಮಾಡಲಾಗಿತ್ತು. ಹಾಗೇ, ನಮ್ಮ ಪ್ರತಿಭಟನೆಗೂ ಜೂ.26ರಂದು ಏಳು ತಿಂಗಳಾಗುತ್ತದೆ. ನಮ್ಮ ದೇಶದಲ್ಲಿ ಸರ್ವಾಧಿಕಾರ ವಾತಾವರಣ ಸೃಷ್ಟಿಯಾಗಿದೆ. ಇಲ್ಲಿ ಕೃಷಿ, ಪ್ರಜಾಪ್ರಭುತ್ವ ಹಕ್ಕಿನ ಮೇಲೆ ದಾಳಿ ನಡೆತಯುತ್ತಿದೆ ಎಂದು ಇಂದ್ರಜಿತ್​ ಸಿಂಗ್ ಆರೋಪಿಸಿದ್ದಾರೆ.

ನಾವು ರೈತರೊಂದಿಗೆ ಮಾತುಕತೆಗೆ ಸಿದ್ಧ ರೈತರು ಒಂದೊಂದೇ ಹಂತವಾಗಿ ಪ್ರತಿಭಟನೆ ತೀವ್ರಗೊಳಿಸುತ್ತಿರುವ ಬೆನ್ನಲ್ಲೇ, ಕೇಂದ್ರ ಸರ್ಕಾರ ಮತ್ತೊಮ್ಮೆ ಮಾತುಕತೆಗೆ ಮುಂದಾಗಿದೆ. ಈ ಬಗ್ಗೆ ಬುಧವಾರ ಹೇಳಿಕೆ ನೀಡಿರುವ ಕೃಷಿ ಸಚಿವ ನರೇಂದ್ರ ಸಿಂಗ್​ ತೋಮರ್​, ರೈತರು ಮಾತುಕತೆಗೆ ಆಗಮಿಸಬಹುದು. ಈ ಕೃಷಿ ಕಾಯ್ದೆಗಳ ಬಗ್ಗೆ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಬಹುದು ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ದುರಂತ ಪ್ರಕರಣ; ಮೃತಪಟ್ಟ ವ್ಯಕ್ತಿಯ ಹೆಸರು ಪರಿಹಾರ ಪಟ್ಟಿಯಲ್ಲಿ ಸೇರಿಸದ ಜಿಲ್ಲಾಡಳಿತ

Follow Us
Web contact
Web contact

TV9 Kannada

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್