AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Farmers’ Protest ಕೃಷಿ ಕಾಯ್ದೆ ವಿರೋಧಿಸಿ ರೈತರ ಹೋರಾಟಕ್ಕೆ 6 ತಿಂಗಳು: ಇಂದು ಕರಾಳ ದಿನ ಆಚರಣೆ, ರೈತರಿಂದ ಕಪ್ಪು ಧ್ವಜ  ಪ್ರದರ್ಶನ

Black Day: ದೇಶದ ಗಡಿಯಲ್ಲಿ ರೈತರು ಕಪ್ಪು ದಿನವನ್ನು ಆಚರಿಸುತ್ತಾರೆ, ಆದರೆ ರಾಷ್ಟ್ರ ರಾಜಧಾನಿಗೆ ಪ್ರವೇಶಿಸುವುದಿಲ್ಲ ಎಂದು ರೈತ ಸಂಘಟನೆಗಳ ಮುಖಂಡರು ಹೇಳಿದ್ದಾರೆ. ತಮ್ಮ ಮನೆಗಳಲ್ಲಿ ಮತ್ತು ಇತರ ಸ್ಥಳಗಳಲ್ಲಿ ಕಪ್ಪು ಧ್ವಜಗಳನ್ನು ಹಾರಿಸುವ ಮೂಲಕ ರೈತರನ್ನು ಬೆಂಬಲಿಸುವಂತೆ ಅವರು ದೇಶಾದ್ಯಂತದ ನಾಗರಿಕರನ್ನು ಒತ್ತಾಯಿಸಿದರು.

Farmers' Protest ಕೃಷಿ ಕಾಯ್ದೆ ವಿರೋಧಿಸಿ ರೈತರ ಹೋರಾಟಕ್ಕೆ 6 ತಿಂಗಳು: ಇಂದು ಕರಾಳ ದಿನ ಆಚರಣೆ, ರೈತರಿಂದ ಕಪ್ಪು ಧ್ವಜ  ಪ್ರದರ್ಶನ
ಮನೆಗಳಲ್ಲಿ ಕಪ್ಪು ಧ್ವಜ ಪ್ರದರ್ಶಿಸಿದ ರೈತರು
ರಶ್ಮಿ ಕಲ್ಲಕಟ್ಟ
|

Updated on:May 26, 2021 | 12:36 PM

Share

ದೆಹಲಿ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆ ವಿರುದ್ಧ ನಡೆಯುತ್ತಿರುವ ರೈತರ ಚಳವಳಿ ಆರು ತಿಂಗಳು ಪೂರ್ಣಗೊಂಡಿದ್ದನ್ನು ಗುರುತಿಸಲು ರೈತ ಸಂಘಗಳು ಮೇ 26 ಅನ್ನು ‘ಕರಾಳದಿನ’ ಎಂದು ಆಚರಿಸುತ್ತಿವೆ. ರೈತರು ತಮ್ಮ ಮನೆ, ವಾಹನಗಳು ಮತ್ತು ಇತರ ಸ್ಥಳಗಳಿಂದ ಕಪ್ಪು ಧ್ವಜಗಳನ್ನು ಹಾರಿಸುವುದರ ಜೊತೆಗೆ ಕಪ್ಪು ಟರ್ಬನ್ ಮತ್ತು ಕಪ್ಪು ದುಪಟ್ಟಾ ಧರಿಸಿ ಕಪ್ಪು ದಿನವನ್ನು ಆಚರಿಸುತ್ತಿದ್ದಾರೆ. ರೈತರು ಪ್ರತಿ ಗಡಿಯಲ್ಲಿಯೂ ಕಪ್ಪು ಧ್ವಜಗಳನ್ನು ಹಾರಿಸಿದ್ದಾರೆ. ದೇಶದ ಗಡಿಯಲ್ಲಿ ರೈತರು ಕಪ್ಪು ದಿನವನ್ನು ಆಚರಿಸುತ್ತಾರೆ, ಆದರೆ ರಾಷ್ಟ್ರ ರಾಜಧಾನಿಗೆ ಪ್ರವೇಶಿಸುವುದಿಲ್ಲ ಎಂದು ರೈತ ಸಂಘಟನೆಗಳ ಮುಖಂಡರು ಹೇಳಿದ್ದಾರೆ. ತಮ್ಮ ಮನೆಗಳಲ್ಲಿ ಮತ್ತು ಇತರ ಸ್ಥಳಗಳಲ್ಲಿ ಕಪ್ಪು ಧ್ವಜಗಳನ್ನು ಹಾರಿಸುವ ಮೂಲಕ ರೈತರನ್ನು ಬೆಂಬಲಿಸುವಂತೆ ಅವರು ದೇಶಾದ್ಯಂತದ ನಾಗರಿಕರನ್ನು ಒತ್ತಾಯಿಸಿದರು. ಏತನ್ಮಧ್ಯೆ, ಕೊವಿಡ್ ಪರಿಸ್ಥಿತಿ ಮತ್ತು ಲಾಕ್‌ಡೌನ್ ಕಾರಣದಿಂದಾಗಿ ಸಭೆ ನಡೆಸದಂತೆ ದೆಹಲಿ ಪೊಲೀಸರು ಜನರಲ್ಲಿ ಕೋರಿದ್ದಾರೆ. ನಗರದ ಗಡಿಯಲ್ಲಿರುವ ಪ್ರತಿಭಟನಾ ಸ್ಥಳಗಳಲ್ಲಿ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಬಿಗಿ ಜಾಗ್ರತೆ ವಹಿಸುತ್ತಿದ್ದೇವೆ.  ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಲು ಪ್ರಯತ್ನಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಸಿಂಗು , ಟಿಕ್ರಿ ಮತ್ತು ಗಾಜಿಪುರದ ಪ್ರತಿಭಟನಾ ಸ್ಥಳಗಳು ಸೇರಿದಂತೆ ಎಲ್ಲಾ ಗಡಿ ಕೇಂದ್ರಗಳಲ್ಲಿ ಪೊಲೀಸ್ ಪಡೆ ನಿಯೋಜನೆ ಆಗಿದ್ದು ಯಾವುದೇ ಅಕ್ರಮ ಚಟುವಟಿಕೆ ಅಥವಾ ಪ್ರವೇಶಕ್ಕೆ ಅವಕಾಶ ನೀಡುವುದಿಲ್ಲ ಎಂದು ದೆಹಲಿ ಪೊಲೀಸ್ ಪಿಆರ್​ಒ ಚಿನ್ಮಯ್ ಬಿಸ್ವಾಲ್ ಹೇಳಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾ ಪ್ರಕಟಣೆಯ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಮಂಗಳವಾರ ಕೊವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕೆಂದು ಮತ್ತು ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಕೊರೊನಾನವೈರಸ್ ಪರಿಸ್ಥಿತಿಯಿಂದಾಗಿ ತಮ್ಮ ಮನೆಗಳಿಂದ ಹೊರಗೆ ಬಂದು ಅನಗತ್ಯವಾಗಿ ಒಟ್ಟುಗೂಡಿಸಬಾರದು ಎಂದು ಜನರನ್ನು ಒತ್ತಾಯಿಸಿದರು. ಕಳೆದ ವಾರ, ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಎಡ ಪಕ್ಷಗಳು, ಎಸ್ಪಿ, ಎನ್‌ಸಿಪಿ ಮತ್ತು ಡಿಎಂಕೆ ಸೇರಿದಂತೆ ಹನ್ನೆರಡು ಪ್ರಮುಖ ವಿರೋಧ ಪಕ್ಷಗಳು ಪ್ರತಿಭಟನೆಗೆ ಬೆಂಬಲ ನೀಡಿದ್ದವು.

ಜನರು ಎಲ್ಲಿದ್ದಾರೋ ಅಲ್ಲೇ ಧ್ವಜಗಳನ್ನು ಹಾರಿಸಿ: ಟಿಕಾಯತ್ ನಾವು ತ್ರಿವರ್ಣ ಧ್ವಜವನ್ನೂ ಹಿಡಿದಿದ್ದೇವೆ. ಈಗ 6 ತಿಂಗಳುಗಳು ಕಳೆದಿವೆ, ಆದರೆ ಸರ್ಕಾರ ನಮ್ಮ ಮಾತನ್ನು ಕೇಳುತ್ತಿಲ್ಲ. ಆದ್ದರಿಂದ ರೈತರು ಕಪ್ಪು ಧ್ವಜಗಳನ್ನು ಪ್ರದರ್ಶಿಸುತ್ತಿದ್ದಾರೆ . ಇದನ್ನು ಶಾಂತಿಯುತವಾಗಿ ಮಾಡಲಾಗುತ್ತದೆ. ನಾವು ಕೊವಿಡ್ ಪ್ರೋಟೋಕಾಲ್‌ಗಳನ್ನು ಅನುಸರಿಸುತ್ತಿದ್ದೇವೆ. ಇಲ್ಲಿ ಯಾರೂ ಬರುತ್ತಿಲ್ಲ. ಜನರು ಎಲ್ಲಿದ್ದಾರೋ ಅಲ್ಲಿಯೇ ಕಪ್ಪು ಧ್ವಜಗಳನ್ನು ಪ್ರದರ್ಶಿಸುತ್ತಿದ್ದಾರೆ ಎಂದು ಬಿಕೆಯು ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಗಡಿಭಾಗದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಮಹಿಳೆಯರ ಬೆಂಬಲ; ಕೃಷಿ ಕಾಯ್ದೆ ಹಿಂಪಡೆಯಲು ಒತ್ತಾಯ

Published On - 12:08 pm, Wed, 26 May 21

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!