AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಕೃಷಿ ಕಾಯ್ದೆಯ ಬಗ್ಗೆ ರೈತರ ಹಾದಿ ತಪ್ಪಿಸಲಾಗುತ್ತಿದೆ: ವಾರಣಾಸಿಯಲ್ಲಿ ಪ್ರಧಾನಿ ಮೋದಿ ಹೇಳಿಕೆ

ಸರ್ಕಾರದ ಹೊಸ ಕೃಷಿ ಕಾಯ್ದೆಯು ರೈತರ ಪರವಾಗಿ ಇದೆ, ಮಾರುಕಟ್ಟೆಯೊಂದಿಗಿನ ನೇರ ಸಂಪರ್ಕ ರೈತರಿಗೆ ಹೆಚ್ಚು ಲಾಭವನ್ನೇ ತರಲಿದೆ. ಸುಳ್ಳು ಸುದ್ದಿಗಳಿಂದ ರೈತರ ಹಾದಿ ತಪ್ಪಿಸಲಾಗುತ್ತಿದೆ ಎಂದ ಪ್ರಧಾನಿ ಮೋದಿ.

ಹೊಸ ಕೃಷಿ ಕಾಯ್ದೆಯ ಬಗ್ಗೆ ರೈತರ ಹಾದಿ ತಪ್ಪಿಸಲಾಗುತ್ತಿದೆ: ವಾರಣಾಸಿಯಲ್ಲಿ ಪ್ರಧಾನಿ ಮೋದಿ ಹೇಳಿಕೆ
ಪ್ರಧಾನಿ ಮೋದಿ
TV9 Web
| Edited By: |

Updated on:Apr 06, 2022 | 11:28 PM

Share

ವಾರಣಾಸಿ: ಹೊಸ ಕೃಷಿ ಕಾಯ್ದೆಗಳ ಮೂಲಕ ರೈತರ ಮಾರುಕಟ್ಟೆಯನ್ನು ವಿಸ್ತರಿಸಲಾಗಿದೆ. ತಾವು ಬೆಳೆದ ಬೆಳೆಯನ್ನು ನೇರವಾಗಿ ಮಾರುಕಟ್ಟೆಗೆ ಸರಬರಾಜು ಮಾಡುವ ಸೌಲಭ್ಯ ನೀಡಲಾಗಿದೆ. ಈ ಬಗ್ಗೆ ರೈತರಿಗೆ ಕಾನೂನು ರಕ್ಷಣೆಯನ್ನೂ ನೀಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ತಮ್ಮ ಸ್ವಕ್ಷೇತ್ರ ವಾರಣಾಸಿಗೆ ಭೇಟಿ ನೀಡಿದ ಅವರು ವಾರಣಾಸಿ-ಪ್ರಯಾಗ್​ರಾಜ್ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

ರಾಷ್ಟ್ರ ರಾಜಧಾನಿಯಲ್ಲಿ ರೈತರ ಹೋರಾಟದ ಕಾವು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾತನಾಡಿ, ಸರ್ಕಾರದ ಹೊಸ ಕೃಷಿ ಕಾಯ್ದೆಗಳು ರೈತರ ಪರವಾಗಿ ಇದೆ. ಮಾರುಕಟ್ಟೆಯೊಂದಿಗಿನ ನೇರ ಸಂಪರ್ಕ ರೈತರಿಗೆ ಹೆಚ್ಚು ಲಾಭವನ್ನೇ ತರಲಿದೆ ಎಂದು ಹೇಳಿದರು. ಸುಳ್ಳು ಸುದ್ದಿಗಳಿಂದ ರೈತರ ಹಾದಿ ತಪ್ಪಿಸಲಾಗುತ್ತಿದೆ ಎಂದು ಮೋದಿ ಅಭಿಪ್ರಾಯಪಟ್ಟರು.

ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ಈ ಹಿಂದೆ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುತ್ತಿದ್ದ ವಿರೋಧ ಪಕ್ಷಗಳಿಗೆ ಈಗ ಗಾಳಿಸುದ್ದಿಯೇ ಅಸ್ತ್ರವಾಗಿದೆ. ಸರ್ಕಾರದ ವಿಚಾರ ಸರಿಯಾಗಿದ್ದರೂ ವಿರೋಧ ಪಕ್ಷಗಳ ಕುತಂತ್ರಕ್ಕೆ ಅವು ಬಲಿಯಾಗುತ್ತಿವೆ ಎಂದು ಮೋದಿ ಮಾತನಾಡಿದರು.

ರೈತರ ಹೋರಾಟ ನಿಂತಿಲ್ಲ ರೈತ ಕಾಯ್ದೆಯ ಬಗ್ಗೆ ಸರ್ಕಾರದೊಂದಿಗಿನ ಮಾತುಕತೆಯ ಆಹ್ವಾನವನ್ನು ನಿರಾಕರಿಸಿರುವ ರೈತರು, ದೆಹಲಿಯ ಹೊರಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಕಾರ್ಯಕ್ರಮದ ಬಳಿಕ ಕಾಶಿ ವಿಶ್ವನಾಥ ಕ್ಷೇತ್ರಕ್ಕೆ ಭೇಟಿ ನೀಡಿದ ಪ್ರಧಾನಿ, ಕ್ಷೇತ್ರದ ಕಾರಿಡಾರ್ ಯೋಜನೆಯನ್ನು ಪರಿಶೀಲಿಸಿದರು. ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಉಪಸ್ಥಿತರಿದ್ದರು.

ಇದನ್ನೂ ಓದಿ: ವಾರಣಾಸಿಗೆ ಇಂದು ಪ್ರಧಾನಿ ನರೇಂದ್ರ ಮೋದಿ: ಪ್ರಯಾಗ್​ರಾಜ್-ವಾರಣಾಸಿ ಹೆದ್ದಾರಿ ಕಾಮಗಾರಿಗೆ ಚಾಲನೆ

Published On - 6:06 pm, Mon, 30 November 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ