AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Bandh: ಫೆಬ್ರವರಿ 16 ರಂದು ಗ್ರಾಮೀಣ ಭಾರತ ಬಂದ್​ಗೆ ಕರೆ ನೀಡಿದ ಸಂಯುಕ್ತ ಕಿಸಾನ್ ಮೋರ್ಚಾ

ರೈತ ಸಂಘಟನೆಗಳು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆಬ್ರವರಿ 16 ರಂದು ಗ್ರಾಮೀಣ ಭಾರತ್ ಬಂದ್​ಗೆ ಕರೆ ನೀಡಿದ್ದಾರೆ. ಧರಣಿ ನಿರತ ರೈತರು ಮತ್ತು ಕಾರ್ಮಿಕ ಸಂಘಟನೆಗಳ ಪ್ರಮುಖ ಬೇಡಿಕೆಗಳೆಂದರೆ ರೈತರಿಗೆ ಪಿಂಚಣಿ, ಬೆಳೆಗಳಿಗೆ ಎಂಎಸ್‌ಪಿ, ಹಳೆಯ ಪಿಂಚಣಿ ಯೋಜನೆ ಅನುಷ್ಠಾನ ಮತ್ತು ಕಾರ್ಮಿಕ ಕಾನೂನುಗಳ ತಿದ್ದುಪಡಿಯನ್ನು ಹಿಂಪಡೆಯುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿರಿಸಿದೆ.

Bharat Bandh: ಫೆಬ್ರವರಿ 16 ರಂದು ಗ್ರಾಮೀಣ ಭಾರತ ಬಂದ್​ಗೆ ಕರೆ ನೀಡಿದ ಸಂಯುಕ್ತ ಕಿಸಾನ್ ಮೋರ್ಚಾ
ರೈತರುImage Credit source: Hindustan Times
ನಯನಾ ರಾಜೀವ್
|

Updated on:Feb 14, 2024 | 10:07 AM

Share

ಹಲವು ಬೇಡಿಕೆಗಳ ಈಡೇರಿಕೆಗಾಗಿ ದೆಹಲಿ ಚಲೋ(Delhi Chalo) ಚಳವಳಿಯನ್ನು ಹಮ್ಮಿಕೊಂಡಿದ್ದ ಸಂಯುಕ್ತ ಕಿಸಾನ್ ಮೋರ್ಚಾ(Samyukta Kisan Morcha) ಇದೀಗ ಫೆಬ್ರವರಿ 16ರಂದು ಗ್ರಾಮೀಣ ಭಾರತ ಬಂದ್​(Bharat Bandh)ಗೆ ಕರೆ ನೀಡಿದೆ. ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಬ್ಯಾನರ್‌ನಡಿಯಲ್ಲಿ ಕೇಂದ್ರ ಕಾರ್ಮಿಕ ಸಂಘಟನೆಗಳೊಂದಿಗೆ ರೈತ ಸಂಘಗಳು ತಮ್ಮ ಇತರ ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದಿರಿಸಲು ಫೆಬ್ರವರಿ 16 ರಂದು ದೇಶಾದ್ಯಂತ ಗ್ರಾಮೀಣ ಭಾರತ್ ಬಂದ್ ಎಂದು ಕರೆಯಲಾಗುವ ಮುಷ್ಕರಕ್ಕೆ ಕರೆ ನೀಡಿವೆ. ಎಸ್‌ಕೆಎಂ ಮತ್ತು ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಗ್ರಾಮೀಣ ಭಾರತ್ ಬಂದ್ ಫೆಬ್ರವರಿ 16 ರಂದು ಬೆಳಗ್ಗೆ 6 ರಿಂದ ಸಂಜೆ 4 ರವರೆಗೆ ನಡೆಯಲಿದೆ.

ರೈತರ ಬೇಡಿಕೆಗಳೇನು? ಧರಣಿ ನಿರತ ರೈತರು ಮತ್ತು ಕಾರ್ಮಿಕ ಸಂಘಟನೆಗಳ ಪ್ರಮುಖ ಬೇಡಿಕೆಗಳೆಂದರೆ ರೈತರಿಗೆ ಪಿಂಚಣಿ, ಬೆಳೆಗಳಿಗೆ ಎಂಎಸ್‌ಪಿ, ಹಳೆಯ ಪಿಂಚಣಿ ಯೋಜನೆ ಅನುಷ್ಠಾನ ಮತ್ತು ಕಾರ್ಮಿಕ ಕಾನೂನುಗಳ ತಿದ್ದುಪಡಿಯನ್ನು ಹಿಂಪಡೆಯುವುದು. ಉದ್ಯೋಗಿಗಳ ಗುತ್ತಿಗೆ, ಖಾತರಿಯ ಉದ್ಯೋಗ ಇತ್ಯಾದಿಗಳು ಸೇರಿವೆ. ಇನ್ನೂ, ಇತರ ಬೇಡಿಕೆಗಳಲ್ಲಿ ಉದ್ಯೋಗಿಗಳಿಗೆ ಸಂಬಂಧಿಸಿದ ಸಮಸ್ಯೆಗಳಾದ ಆಪರೇಷನಲ್ ಪರ್ಫಾರ್ಮೆನ್ಸ್-ಲಿಂಕ್ಡ್ ಸಂಬಳ (OPS) ಅನುಷ್ಠಾನವನ್ನು ಹಿಂತೆಗೆದುಕೊಳ್ಳುವುದು, ತಿದ್ದುಪಡಿಗಳು ಕಾರ್ಮಿಕ ಕಾನೂನುಗಳು ಮತ್ತು ಇತರ ಹಲವಾರು ಬೇಡಿಕೆಗಳು ಸರ್ಕಾರದ ಮುಂದಿವೆ.

ಮತ್ತಷ್ಟು ಓದಿ: ರೈತರಿಗೆ ತೊಂದರೆ ಕೊಡಬೇಡಿ, ನಾವು ಅವರಿಗೆ ಬೆಂಬಲ ನೀಡುತ್ತಿದ್ದೇವೆ: ಕೇಂದ್ರ ಸರ್ಕಾರಕ್ಕೆ ರಾಕೇಶ್ ಟಿಕಾಯತ್ ಎಚ್ಚರಿಕೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು (MGNREGS) ಬಲಪಡಿಸಲು, ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಲು ಮತ್ತು ಔಪಚಾರಿಕ ಮತ್ತು ಅನೌಪಚಾರಿಕ ವಲಯಗಳಲ್ಲಿ ಎಲ್ಲರಿಗೂ ಪಿಂಚಣಿ ಮತ್ತು ಸಾಮಾಜಿಕ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ರೈತರು ಪ್ರಯತ್ನಿಸುತ್ತಿದ್ದಾರೆ.

ಫೆ.16 ರಂದು ಯಾವೆಲ್ಲಾ ಸೇವೆಗಳ ಮೇಲೆ ಪರಿಣಾಮ ಫೆಬ್ರವರಿ 16 ರಂದು ದಿನವಿಡೀ ಭಾರತ್ ಬಂದ್‌ನಲ್ಲಿ, ಸಾರಿಗೆ, ಕೃಷಿ ಚಟುವಟಿಕೆಗಳು, MNREGA ಗ್ರಾಮೀಣ ಕೆಲಸಗಳು, ಖಾಸಗಿ ಕಚೇರಿಗಳು, ಹಳ್ಳಿ ಅಂಗಡಿಗಳು ಮತ್ತು ಗ್ರಾಮೀಣ ಕೈಗಾರಿಕಾ ಮತ್ತು ಸೇವಾ ವಲಯದ ಸಂಸ್ಥೆಗಳು ಮುಚ್ಚಲ್ಪಡುತ್ತವೆ. ಇದಲ್ಲದೆ, ಮುಷ್ಕರದ ಸಮಯದಲ್ಲಿ ಆಂಬ್ಯುಲೆನ್ಸ್‌ಗಳ ಕಾರ್ಯಾಚರಣೆ, ಪತ್ರಿಕೆ ವಿತರಣೆ, ಮದುವೆ, ಮೆಡಿಕಲ್ ಶಾಪ್‌ಗಳು, ಬೋರ್ಡ್ ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳು ಇತ್ಯಾದಿ ತುರ್ತು ಸೇವೆಗಳನ್ನು ನಿಲ್ಲಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ರೈತರು ಕ್ರಿಮಿನಲ್​ಗಳಲ್ಲ: ಸ್ವಾಮಿನಾಥನ್ ಪುತ್ರಿ ಮಧುರಾ ರೈತರು ಕ್ರಿಮಿನಲ್​ಗಳನ್ನು ಅವರೇನೋ ಅಪರಾಧ ಮಾಡಿದ್ದಾರೆ ಎಂಬಂತೆ ಅವರನ್ನು ನೋಡಬೇಡಿ ಎಂದು ಮಧುರಾ ಹೇಳಿದ್ದಾರೆ. ಪ್ರತಿಭಟನಾ ನಿರತ ರೈತರ ಹಲವು ಬೇಡಿಕೆಗಳ ಪೈಕಿ ಸ್ವಾಮಿನಾಥನ್ ಸಮಿತಿ ವರದಿ ಜಾರಿ ಪ್ರಮುಖ ಅಂಶವಾಗಿದೆ. ಸ್ವಾಮಿನಾಥನ್ ರ ರೈತರ ರಾಷ್ಟ್ರೀಯ ಆಯೋಗವು ಡಿಸೆಂಬರ್ 2004 ಮತ್ತು 2006 ರ ನಡುವೆ ಒಟ್ಟು ಐದು ವರದಿಗಳನ್ನು ಸಲ್ಲಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:07 am, Wed, 14 February 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು