AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನವೀಯತೆ ಇಲ್ಲದ ಸರ್ಕಾರ ಕೇಂದ್ರದಲ್ಲಿ ಆಡಳಿತ ನಡೆಸುತ್ತಿದೆ: ಅಖಿಲೇಶ್ ಯಾದವ್ ಟೀಕೆ

ದೆಹಲಿ ಚಲೋ ಚಳುವಳಿಯಲ್ಲಿ ಭಾಗಿಯಾದ ಮತ್ತೋರ್ವ ರೈತ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಅವರ ಸಾವನ್ನು ಎದುರಿಟ್ಟುಕೊಂಡು ವಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯುತ್ತಿವೆ.

ಮಾನವೀಯತೆ ಇಲ್ಲದ ಸರ್ಕಾರ ಕೇಂದ್ರದಲ್ಲಿ ಆಡಳಿತ ನಡೆಸುತ್ತಿದೆ: ಅಖಿಲೇಶ್ ಯಾದವ್ ಟೀಕೆ
ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್
guruganesh bhat
|

Updated on: Jan 02, 2021 | 3:57 PM

Share

ಲಖನೌ: 2021ರ ಮೊದಲ ದಿನವೇ 57 ವರ್ಷದ ರೈತರ ಮರಣದ ಸುದ್ದಿ ಕೇಳಿದೆ.. ದೆಹಲಿಯಲ್ಲಿ ಅಪರಿಮಿತ ಚಳಿ, ಮಂಜಿದೆ. ಗಡಿಯ ರಸ್ತೆಗಳಲ್ಲೇ ಪಂಜಾಬ್​ನ ರೈತರು ತಿಂಗಳಿಂದ ವಾಸ್ತವ್ಯ ಹೂಡಿದ್ದಾರೆ. ಆದರೆ ಆಡಳಿತ ನಡೆಸುತ್ತಿರುವ ಸರ್ಕಾರಕ್ಕೆ ಅವರ ಮೇಲೆ ದಯೆಯೇ ಹುಟ್ಟಿಲ್ಲ. ಇಷ್ಟು ನಿರ್ದಯಿ ಹೃದಯದ ಸರ್ಕಾರವನ್ನು ಈವರೆಗೆ ಕಂಡಿಲ್ಲ, ಕೇಳಿಲ್ಲ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಕೇಂದ್ರ ಸರ್ಕಾರದ ಮೇಲೆ ಹರಿಹಾಯ್ದಿದ್ದಾರೆ.

ಕೇಂದ್ರ ಸರ್ಕಾರಕ್ಕೆ ಮಾನವೀಯತೆಯಿದ್ದಿದ್ದರೆ ಪಂಜಾಬ್ ರೈತರನ್ನು ದೆಹಲಿಯ ಕೊರೆಯುವ ಚಳಿಯಲ್ಲಿ ಕಷ್ಟ ಅನುಭವಿಸಲು ಬಿಡುತ್ತಿರಲಿಲ್ಲ.ಕೇಂದ್ರ ಸರ್ಕಾರ ಮಾನವೀಯಯತೆ ಮರೆತಿದೆ ಎಂದು ಅವರು ಟೀಕಿಸಿದ್ದಾರೆ.

ಚಳುವಳಿಯಲ್ಲಿ ಭಾಗವಹಿಸಿ ಮೃತಪಟ್ಟ ಎಲ್ಲ ರೈತರಿಗೂ ‘ಹುತಾತ್ಮ’ ಪಟ್ಟ ಉತ್ತರ ಪ್ರದೇಶದ ಬಘ್​ಪತ್ ಜಿಲ್ಲೆಯ ಭಗ್ವಾನ್​ಪುರ ನಂಗಲ್ ಗ್ರಾಮದ ನಿವಾಸಿ ಮೋಹನ್ ಸಿಂಗ್ ಚಳುವಳಿಯಲ್ಲಿ ನಿರತರಾಗಿದ್ದಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದರು. ಭಾರತೀಯ ಕಿಸಾನ್ ಯೂನಿಯನ್​ನ ಉತ್ತರ ಪ್ರದೇಶ ರಾಜ್ಯ ಘಟಕದ ಅಧ್ಯಕ್ಷ ರಾಜ್​ಬಿರ್ ಸಿಂಗ್ ಚಳುವಳಿಯಲ್ಲಿ ಭಾಗವಹಿಸಿ ಮೃತಪಟ್ಟ ಎಲ್ಲ ರೈತರಿಗೂ ‘ಹುತಾತ್ಮ’ ಪಟ್ಟ ನೀಡುವುದಾಗಿ ಘೋಷಿಸಿದ್ದಾರೆ. ಜನವರಿ 1ರಂದು ದೆಹಲಿ ಚಲೋ ಚಳುವಳಿಯಲ್ಲಿ ಈವರೆಗೆ ಮೃತಪಟ್ಟ ಎಲ್ಲ ರೈತರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದು.

Delhi Chalo: ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ಟ್ರ್ಯಾಕ್ಟರ್​ ಮೂಲಕ ರೈತರ ಪರೇಡ್​!

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ