AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಹಾರಕ್ಕಾಗಿ ಬೇಡಿಕೆ: 12 ಸರ್ಕಾರಿ ಅಧಿಕಾರಿಗಳನ್ನು ಒತ್ತೆಯಾಳಾಗಿರಿಸಿದ ಪಂಜಾಬ್ ರೈತರು

ರೈತ ಸಂಘದ ಬ್ಯಾನರ್ ಅಡಿಯಲ್ಲಿ 100 ಕ್ಕೂ ಹೆಚ್ಚು ರೈತರ ಗುಂಪು ಸೋಮವಾರ ಲಂಬಿ ಉಪ ತಹಸಿಲ್ ಹೊರಗೆ ಪ್ರತಿಭಟನೆ ನಡೆಸಿತು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರತಿಭಟನಾಕಾರರು ಸಂಜೆ ಕಚೇರಿ ಕಟ್ಟಡಕ್ಕೆ ಪ್ರವೇಶಿಸಿ ಮಧ್ಯರಾತ್ರಿಯವರೆಗೆ ಅಧಿಕಾರಿಗಳನ್ನು ಒತ್ತೆಯಾಳಾಗಿ ಇರಿಸಿಕೊಂಡರು

ಪರಿಹಾರಕ್ಕಾಗಿ ಬೇಡಿಕೆ: 12 ಸರ್ಕಾರಿ ಅಧಿಕಾರಿಗಳನ್ನು ಒತ್ತೆಯಾಳಾಗಿರಿಸಿದ ಪಂಜಾಬ್ ರೈತರು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Mar 29, 2022 | 8:15 PM

Share

ಚಂಡೀಗಢ: ಬೆಳೆ ಹಾನಿ ಪರಿಹಾರಕ್ಕೆ ಆಗ್ರಹಿಸಿ ರೈತರ (Farmers) ಗುಂಪೊಂದು 12 ಮಂದಿ ಸರ್ಕಾರಿ ಅಧಿಕಾರಿಗಳನ್ನು ಹಲವು ಗಂಟೆಗಳ ಕಾಲ ಒತ್ತೆಯಾಳಾಗಿಟ್ಟುಕೊಂಡಿರುವ (Hostage) ಘಟನೆ ಮುಕ್ತಸರ್ ಜಿಲ್ಲೆಯ ಲಂಬಿಯಲ್ಲಿ ಉಪ ತಹಸಿಲ್ ಕಚೇರಿಯಲ್ಲಿ ನಡೆದಿದೆ. ಪ್ರತಿಭಟನಾಕಾರರು ಅಧಿಕಾರಿಗಳನ್ನು ಬಿಡುಗಡೆ ಮಾಡಲು ನಿರಾಕರಿಸಿದ ನಂತರ ಸೋಮವಾರ ತಡರಾತ್ರಿ ನಾಯಬ್ ತಹಸೀಲ್ದಾರ್ ಮತ್ತು ಪಟ್ವಾರಿ ಸೇರಿದಂತೆ ಅಧಿಕಾರಿಗಳನ್ನು ಪೊಲೀಸರು ಬಿಡುಗಡೆಗೊಳಿಸಿದರು ಎಂದು ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ. ಪಿಂಕ್ ಬಾಲ್ವರ್ಮ್ (ಕೀಟ)ದಿಂದ ಹತ್ತಿ ಬೆಳೆ ಹಾನಿಯಾಗಿದ್ದು, ಪರಿಹಾರ ನೀಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ.  ರಾಜ್ಯದಲ್ಲಿ ನಡೆದ ಘಟನೆಯ ವಿರುದ್ಧ ಮಂಗಳವಾರ ಕಂದಾಯ ಇಲಾಖೆ (Revenue officials) ಅಧಿಕಾರಿಗಳು ಮುಷ್ಕರ ನಡೆಸಿದರು. ರೈತ ಸಂಘದ ಬ್ಯಾನರ್ ಅಡಿಯಲ್ಲಿ 100 ಕ್ಕೂ ಹೆಚ್ಚು ರೈತರ ಗುಂಪು ಸೋಮವಾರ ಲಂಬಿ ಉಪ ತಹಸಿಲ್ ಹೊರಗೆ ಪ್ರತಿಭಟನೆ ನಡೆಸಿತು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರತಿಭಟನಾಕಾರರು ಸಂಜೆ ಕಚೇರಿ ಕಟ್ಟಡಕ್ಕೆ ಪ್ರವೇಶಿಸಿ ಮಧ್ಯರಾತ್ರಿಯವರೆಗೆ ಅಧಿಕಾರಿಗಳನ್ನು ಒತ್ತೆಯಾಳಾಗಿ ಇರಿಸಿಕೊಂಡರು ಎಂದು ಪೊಲೀಸರು ತಿಳಿಸಿದ್ದಾರೆ. 12 ಸರ್ಕಾರಿ ಅಧಿಕಾರಿಗಳನ್ನು ಒತ್ತೆಯಾಳಾಗಿ ಇರಿಸಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಸಂದೀಪ್ ಕುಮಾರ್ ಮಲಿಕ್ ಹೇಳಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಅಲ್ಲಿನ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಅವರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು ಮತ್ತು ಅವರ ಸಮಸ್ಯೆಗಳನ್ನು ಪರಿಹರಿಸಲು ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸುವುದಾಗಿ ಭರವಸೆ ನೀಡಿದರು ಎಂದು ಎಸ್‌ಎಸ್‌ಪಿ ಹೇಳಿದರು. “ಆದರೆ ಅವರು ಅಚಲರಾಗಿದ್ದರು ಮತ್ತು ತಡರಾತ್ರಿಯವರೆಗೂ ಅಧಿಕಾರಿಗಳನ್ನು ಒತ್ತೆಯಾಳಾಗಿ ಇರಿಸಲಾಗಿತ್ತು” ಎಂದು ಮಲಿಕ್ ಮಂಗಳವಾರ ದೂರವಾಣಿಯಲ್ಲಿ ಪಿಟಿಐಗೆ ತಿಳಿಸಿದರು.  ಒತ್ತೆಯಾಳುಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಅವರನ್ನು ಸುರಕ್ಷಿತವಾಗಿ ಹೊರಗೆ ಕರೆದೊಯ್ಯುವಂತೆ ಆಡಳಿತವು ಪೊಲೀಸರಿಗೆ ನಿರ್ದೇಶನ ನೀಡಿದೆ ಎಂದು ಅವರು ಹೇಳಿದರು.

ಅಧಿಕಾರಿಗಳನ್ನು ಬಿಡಿಸಲು ಪೊಲೀಸರು ರೈತರ ಮೇಲೆ ಬಲಪ್ರಯೋಗ ಮಾಡಿದ್ದಾರೆ ಎಂಬ ವರದಿಗಳನ್ನು ಮಲಿಕ್ ನಿರಾಕರಿಸಿದರು.  “ನಾವು ಅಧಿಕಾರಿಗಳನ್ನು ಸಂಯಮದಿಂದ ಮತ್ತು ಶಾಂತಿಯುತ ರೀತಿಯಲ್ಲಿ ಬಿಡುಗಡೆ ಮಾಡಿದ್ದೇವೆ. ಯಾವುದೇ ಬಲಪ್ರಯೋಗ ಮಾಡಿಲ್ಲ. ನೀವು ಧರಣಿ ನಡೆಸಬಹುದು. ಆದರೆ ಕರ್ತವ್ಯ ನಿರ್ವಹಿಸುವ ಸರ್ಕಾರಿ ಅಧಿಕಾರಿಗಳನ್ನು ಒತ್ತೆಯಾಳುಗಳನ್ನಾಗಿರಿಸುವಂತಿಲ್ಲ ಎಂದು ಅಧಿಕಾರಿಗಳನ್ನು ಮುಕ್ತಗೊಳಿಸಲು ತೆರಳುವ ಮೊದಲು ನಾವು ಅವರಿಗೆ (ರೈತರಿಗೆ) ಹಲವು ಬಾರಿ ಮನವಿ ಮಾಡಿದ್ದೇವೆ ಎಂದು ಅವರು ಹೇಳಿದರು.

ನಂತರ ಅಧಿಕಾರಿಗಳಿಂದ ಲಿಖಿತ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದರು. ಎಂಟರಿಂದ ಒಂಬತ್ತು ಜನರು ಮತ್ತು ಕೆಲವು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮಲಿಕ್ ಹೇಳಿದರು. ಆದಾಗ್ಯೂ, ಪೊಲೀಸರು ಬಲಪ್ರಯೋಗ ಮಾಡಿದರು ಮತ್ತು ಆರರಿಂದ ಏಳು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ ಎಂದು ಮಂಗಳವಾರ ಲಂಬಿಯಲ್ಲಿ ರೈತ ಮುಖಂಡರೊಬ್ಬರು ಸುದ್ದಿಗಾರರಿಗೆ ತಿಳಿಸಿದರು.

ಇದನ್ನೂ ಓದಿ:ಇಮ್ರಾನ್ ಖಾನ್ ಸರ್ಕಾರದಿಂದ ಇಬ್ಬರು ಸದಸ್ಯರ ರಾಜೀನಾಮೆ; ಸರ್ಕಾರ ಉಳಿಸಲು ಖಾನ್ ವಾಮಾಚಾರದ ಮೊರೆ ಹೋಗಿದ್ದಾರೆ ಎಂದ ವಿಪಕ್ಷ

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ