AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಕ್ಕಿ ಜ್ವರ ಹಬ್ಬಿಸಲು ರೈತ ಪ್ರತಿಭಟನಾಕಾರರು ಬಿರಿಯಾನಿ ತಿನ್ನುತ್ತಿದ್ದಾರೆ: ಬಿಜೆಪಿ ಶಾಸಕನ ಹೇಳಿಕೆಗೆ ಆಕ್ರೋಶ

ರಾಜಸ್ಥಾನದ ರಾಮಗಂಜ್​ ಮಂಡಿ ಶಾಸಕ ಮದನ್​ ದಿಲವಾರ್​ ಮಾತನಾಡಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. ಈ ವಿಡಿಯೋದಲ್ಲಿ ಅವರು ರೈತರನ್ನು ಹಾಗೂ ಅವರ ಪ್ರತಿಭಟನೆಯನ್ನು ತೆಗಳಿದ್ದಾರೆ.

ಹಕ್ಕಿ ಜ್ವರ ಹಬ್ಬಿಸಲು ರೈತ ಪ್ರತಿಭಟನಾಕಾರರು ಬಿರಿಯಾನಿ ತಿನ್ನುತ್ತಿದ್ದಾರೆ: ಬಿಜೆಪಿ ಶಾಸಕನ ಹೇಳಿಕೆಗೆ ಆಕ್ರೋಶ
ಮದನ್​ ದಿಲಾವರ್
ರಾಜೇಶ್ ದುಗ್ಗುಮನೆ
| Edited By: |

Updated on: Jan 10, 2021 | 6:55 PM

Share

ಜೈಪುರ: ಪ್ರತಿಭಟನಾನಿರತ ರೈತರು ಪಕ್ಷಿ ಜ್ವರವನ್ನು ಹಬ್ಬಿಸಲು ಕೋಳಿ ಬಿರಿಯಾನಿ ತಿನ್ನುತ್ತಿದ್ದಾರೆ. ಪಕ್ಷಿ ಜ್ವರ ರಾಷ್ಟ್ರವ್ಯಾಪಿ ಪಸರಿಸಲು ಇದು ಕಾರಣವಾಗಬಹುದು ಎನ್ನುವ ರಾಜಸ್ಥಾನ ಬಿಜೆಪಿ ಶಾಸಕನ ಹೇಳಿಕೆ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ.

ರಾಜಸ್ಥಾನದ ರಾಮಗಂಜ್​ ಮಂಡಿ ಶಾಸಕ ಮದನ್​ ದಿಲಾವರ್​ ಮಾತನಾಡಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. ಈ ವಿಡಿಯೋದಲ್ಲಿ ಅವರು ರೈತರನ್ನು ಹಾಗೂ ಅವರ ಪ್ರತಿಭಟನೆಯನ್ನು ತೆಗಳಿದ್ದಾರೆ.

ರೈತ ಪ್ರತಿಭಟನಾಕಾರರು ಬಿರಿಯಾನಿ ಆಸ್ವಾದಿಸುತ್ತಿದ್ದಾರೆ. ನಿತ್ಯ ಸಾಕಷ್ಟು ಒಣ ಹಣ್ಣುಗಳನ್ನು ತಿನ್ನುತ್ತಿದ್ದಾರೆ. ಹೀಗಾಗಿ, ಪ್ರತಿಭಟನೆಯನ್ನು ಅವರು ಸಂಪೂರ್ಣವಾಗಿ ಆನಂದದಿಂದ ಕಳೆಯುತ್ತಿದ್ದಾರೆ. ಇದು ಅವರಿಗೆ ಒಂದು ರೀತಿ ಪಿಕ್​ನಿಕ್​ ಇದ್ದಂತೆ. ಪ್ರತಿಭಟನಾಕಾರರ ಮಧ್ಯೆ ಸಾಕಷ್ಟು ಭಯೋತ್ಪಾದಕರೂ, ಕಳ್ಳರು, ದರೋಡೆಕೋರರು ಇರಬಹುದು. ಅವರು ರೈತರ ಶತ್ರುಗಳಾಗಬಹುದು ಎಂದು ದಿಲಾವರ್ ಅಭಿಪ್ರಾಯಪಟ್ಟಿದ್ದಾರೆ.

ರೈತರ ಪ್ರತಿಭಟನೆಯಿಂದ ಹಕ್ಕಿ ಜ್ವರ ಹೆಚ್ಚಲಿದೆ ಎನ್ನುವುದನ್ನು ಒತ್ತಿ ಹೇಳಿರುವ ಮದನ್, ಮುಂದಿನ ಕೆಲ ದಿನಗಳಲ್ಲಿ ಪ್ರತಿಭಟನಾ ಸ್ಥಳದಿಂದ ರೈತರನ್ನು ತೆರವು ಮಾಡದಿದ್ದರೆ ತುಂಬಾನೇ ಕಷ್ಟವಾಗಲಿದೆ. ಪ್ರತಿಭಟನಾಕಾರರಿಂದ ಹಕ್ಕಿಜ್ವರ ಹೆಚ್ಚಲಿದೆ ಎಂದು ಹೇಳಿದ್ದಾರೆ.

ಇನ್ನು, ಈ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್​ ನಾಯಕರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಮದನ್​ ಹೇಳಿಕೆಯಿಂದ ಬಿಜೆಪಿ ನಾಯಕರ ಆಲೋಚನೆ ಏನು ಎನ್ನುವುದು ಗೊತ್ತಾಗುತ್ತಿದೆ ಎಂದು ಜರಿದಿದ್ದಾರೆ. ಶುಕ್ರವಾರ ರೈತರು ಹಾಗೂ ಕೇಂದ್ರ ಸರ್ಕಾರ ಸಭೆ ನಡೆಸಿತ್ತು. ಆದರೆ, ಸಭೆ ಯಶಸ್ವಿ ಆಗಿಲ್ಲ.

Tv9 Kannada Facebook live | ರಾಜ್ಯದಲ್ಲಿ ಹಕ್ಕಿ ಜ್ವರ ಆತಂಕ: ಮುಂಜಾಗ್ರತಾ ಕ್ರಮಗಳೇನು?- ಇಲ್ಲಿದೆ ತಜ್ಞರ ಉತ್ತರ

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು