AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಕ್ಕಿ ಜ್ವರ ಹಬ್ಬಿಸಲು ರೈತ ಪ್ರತಿಭಟನಾಕಾರರು ಬಿರಿಯಾನಿ ತಿನ್ನುತ್ತಿದ್ದಾರೆ: ಬಿಜೆಪಿ ಶಾಸಕನ ಹೇಳಿಕೆಗೆ ಆಕ್ರೋಶ

ರಾಜಸ್ಥಾನದ ರಾಮಗಂಜ್​ ಮಂಡಿ ಶಾಸಕ ಮದನ್​ ದಿಲವಾರ್​ ಮಾತನಾಡಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. ಈ ವಿಡಿಯೋದಲ್ಲಿ ಅವರು ರೈತರನ್ನು ಹಾಗೂ ಅವರ ಪ್ರತಿಭಟನೆಯನ್ನು ತೆಗಳಿದ್ದಾರೆ.

ಹಕ್ಕಿ ಜ್ವರ ಹಬ್ಬಿಸಲು ರೈತ ಪ್ರತಿಭಟನಾಕಾರರು ಬಿರಿಯಾನಿ ತಿನ್ನುತ್ತಿದ್ದಾರೆ: ಬಿಜೆಪಿ ಶಾಸಕನ ಹೇಳಿಕೆಗೆ ಆಕ್ರೋಶ
ಮದನ್​ ದಿಲಾವರ್
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 10, 2021 | 6:55 PM

ಜೈಪುರ: ಪ್ರತಿಭಟನಾನಿರತ ರೈತರು ಪಕ್ಷಿ ಜ್ವರವನ್ನು ಹಬ್ಬಿಸಲು ಕೋಳಿ ಬಿರಿಯಾನಿ ತಿನ್ನುತ್ತಿದ್ದಾರೆ. ಪಕ್ಷಿ ಜ್ವರ ರಾಷ್ಟ್ರವ್ಯಾಪಿ ಪಸರಿಸಲು ಇದು ಕಾರಣವಾಗಬಹುದು ಎನ್ನುವ ರಾಜಸ್ಥಾನ ಬಿಜೆಪಿ ಶಾಸಕನ ಹೇಳಿಕೆ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ.

ರಾಜಸ್ಥಾನದ ರಾಮಗಂಜ್​ ಮಂಡಿ ಶಾಸಕ ಮದನ್​ ದಿಲಾವರ್​ ಮಾತನಾಡಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. ಈ ವಿಡಿಯೋದಲ್ಲಿ ಅವರು ರೈತರನ್ನು ಹಾಗೂ ಅವರ ಪ್ರತಿಭಟನೆಯನ್ನು ತೆಗಳಿದ್ದಾರೆ.

ರೈತ ಪ್ರತಿಭಟನಾಕಾರರು ಬಿರಿಯಾನಿ ಆಸ್ವಾದಿಸುತ್ತಿದ್ದಾರೆ. ನಿತ್ಯ ಸಾಕಷ್ಟು ಒಣ ಹಣ್ಣುಗಳನ್ನು ತಿನ್ನುತ್ತಿದ್ದಾರೆ. ಹೀಗಾಗಿ, ಪ್ರತಿಭಟನೆಯನ್ನು ಅವರು ಸಂಪೂರ್ಣವಾಗಿ ಆನಂದದಿಂದ ಕಳೆಯುತ್ತಿದ್ದಾರೆ. ಇದು ಅವರಿಗೆ ಒಂದು ರೀತಿ ಪಿಕ್​ನಿಕ್​ ಇದ್ದಂತೆ. ಪ್ರತಿಭಟನಾಕಾರರ ಮಧ್ಯೆ ಸಾಕಷ್ಟು ಭಯೋತ್ಪಾದಕರೂ, ಕಳ್ಳರು, ದರೋಡೆಕೋರರು ಇರಬಹುದು. ಅವರು ರೈತರ ಶತ್ರುಗಳಾಗಬಹುದು ಎಂದು ದಿಲಾವರ್ ಅಭಿಪ್ರಾಯಪಟ್ಟಿದ್ದಾರೆ.

ರೈತರ ಪ್ರತಿಭಟನೆಯಿಂದ ಹಕ್ಕಿ ಜ್ವರ ಹೆಚ್ಚಲಿದೆ ಎನ್ನುವುದನ್ನು ಒತ್ತಿ ಹೇಳಿರುವ ಮದನ್, ಮುಂದಿನ ಕೆಲ ದಿನಗಳಲ್ಲಿ ಪ್ರತಿಭಟನಾ ಸ್ಥಳದಿಂದ ರೈತರನ್ನು ತೆರವು ಮಾಡದಿದ್ದರೆ ತುಂಬಾನೇ ಕಷ್ಟವಾಗಲಿದೆ. ಪ್ರತಿಭಟನಾಕಾರರಿಂದ ಹಕ್ಕಿಜ್ವರ ಹೆಚ್ಚಲಿದೆ ಎಂದು ಹೇಳಿದ್ದಾರೆ.

ಇನ್ನು, ಈ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್​ ನಾಯಕರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಮದನ್​ ಹೇಳಿಕೆಯಿಂದ ಬಿಜೆಪಿ ನಾಯಕರ ಆಲೋಚನೆ ಏನು ಎನ್ನುವುದು ಗೊತ್ತಾಗುತ್ತಿದೆ ಎಂದು ಜರಿದಿದ್ದಾರೆ. ಶುಕ್ರವಾರ ರೈತರು ಹಾಗೂ ಕೇಂದ್ರ ಸರ್ಕಾರ ಸಭೆ ನಡೆಸಿತ್ತು. ಆದರೆ, ಸಭೆ ಯಶಸ್ವಿ ಆಗಿಲ್ಲ.

Tv9 Kannada Facebook live | ರಾಜ್ಯದಲ್ಲಿ ಹಕ್ಕಿ ಜ್ವರ ಆತಂಕ: ಮುಂಜಾಗ್ರತಾ ಕ್ರಮಗಳೇನು?- ಇಲ್ಲಿದೆ ತಜ್ಞರ ಉತ್ತರ

ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ನನ್ನ ಪತಿ ಮತ್ತು ಯತ್ನಾಳ್ ನಡುವಿನ ಜಗಳ ಅವರವರ ವೈಯಕ್ತಿಕ ವಿಚಾರ: ವೀಣಾ
ನನ್ನ ಪತಿ ಮತ್ತು ಯತ್ನಾಳ್ ನಡುವಿನ ಜಗಳ ಅವರವರ ವೈಯಕ್ತಿಕ ವಿಚಾರ: ವೀಣಾ
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?