AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಸ್ಸಾರ್​​ನಲ್ಲಿ ಹಿರಿಯ ಪೊಲೀಸ್​ ಅಧಿಕಾರಿ ನಿವಾಸಕ್ಕೆ ಮುತ್ತಿಗೆ ಹಾಕಲು ಸಜ್ಜಾದ ರೈತರು; ನಿಯಂತ್ರಣಕ್ಕೆ ಸಿದ್ಧರಾಗಿರುವ ಭದ್ರತಾ ಸಿಬ್ಬಂದಿ

ಕೊಲೆ ಯತ್ನ, ಗಲಭೆ, ಕಾನೂನು ವಿರೋಧಿ ಚಟುವಟಿಕೆ, ಕೊರೊನಾ ಸೋಂಕು ಹರಡಿದ್ದು..ಹೀಗೆ ಹಲವು ಕಾರಣಗಳಿಗೆ ಸುಮಾರು 350 ಮಂದಿಯ ವಿರುದ್ಧ ಹಿಸ್ಸಾರ್ ಠಾಣೆಯಲ್ಲಿ ಕ್ರಿಮಿನಲ್​ ಕೇಸ್​ ದಾಖಲಾಗಿದೆ.

ಹಿಸ್ಸಾರ್​​ನಲ್ಲಿ ಹಿರಿಯ ಪೊಲೀಸ್​ ಅಧಿಕಾರಿ ನಿವಾಸಕ್ಕೆ ಮುತ್ತಿಗೆ ಹಾಕಲು ಸಜ್ಜಾದ ರೈತರು; ನಿಯಂತ್ರಣಕ್ಕೆ ಸಿದ್ಧರಾಗಿರುವ ಭದ್ರತಾ ಸಿಬ್ಬಂದಿ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 23, 2021 | 7:23 PM

Share

ಚಂಡಿಗಡ್​​: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ನವೆಂಬರ್​​ನಿಂದಲೂ ದೆಹಲಿಯ ಗಡಿಗಳಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗೆ ಪ್ರತಿಭಟನೆ ನಡೆಸುತ್ತಿರುವ ಸುಮಾರು 350 ಮಂದಿಯ ವಿರುದ್ಧ ಹರ್ಯಾಣದ ಹಿಸ್ಸಾರ್​​ ಪೊಲೀಸರು ಕ್ರಿಮಿನಲ್​ ಪ್ರಕರಣ ದಾಖಲು ಮಾಡಿದ್ದಾರೆ. ಈ ಕ್ರಿಮಿನಲ್​ ಪ್ರಕರಣವನ್ನು ವಾಪಸ್​ ಪಡೆಯುವಂತೆ ಒತ್ತಾಯಿಸಿ ನಾಳೆ ಹರ್ಯಾಣದ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರ ನಿವಾಸಕ್ಕೆ ಮುತ್ತಿಗೆ ಹಾಕಲು ರೈತರು ಯೋಜನೆ ರೂಪಿಸಿರುವ ಹಿನ್ನೆಲೆಯಲ್ಲಿ ಇಂದಿನಿಂದಲೇ ಅಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಕೊಲೆ ಯತ್ನ, ಗಲಭೆ, ಕಾನೂನು ವಿರೋಧಿ ಚಟುವಟಿಕೆ, ಕೊರೊನಾ ಸೋಂಕು ಹರಡಿದ್ದು..ಹೀಗೆ ಹಲವು ಕಾರಣಗಳಿಗೆ ಸುಮಾರು 350 ಮಂದಿಯ ವಿರುದ್ಧ ಹಿಸ್ಸಾರ್ ಠಾಣೆಯಲ್ಲಿ ಕ್ರಿಮಿನಲ್​ ಕೇಸ್​ ದಾಖಲಾಗಿದೆ. ಇದನ್ನು ವಾಪಸ್​ ಪಡೆಯಲು ಆಗ್ರಹಿಸಿ ನಾಳೆ (ಮೇ 24) ಹಿಸಾರ್​ ವಲಯದ ಐಜಿ ನಿವಾಸಕ್ಕೆ ಮುತ್ತಿಗೆ ಹಾಕಲು ರೈತರು ಯೋಜನೆ ರೂಪಿಸಿದ್ದಾರೆ. ಅವರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು, ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಲುವಾಗಿ ಇಂದು ರ್ಯಾಪಿಡ್​ ಆ್ಯಕ್ಷನ್​ ಫೋರ್ಸ್​ (RAF)ನ ಸುಮಾರು 3000 ಸಿಬ್ಬಂದಿ ಹಿಸ್ಸಾರ್​​ಗೆ ತೆರಳಿದ್ದಾರೆ.

ನಾಳೆ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಇಲ್ಲಿಗೆ ಬಾರದಂತೆ ತಡೆಯಲು ನಾವು ರೈತ ಮುಖಂಡರಿಗೆ ತಿಳಿಸಿದ್ದೇವೆ. ಕೊರೊನಾ ವೈರಸ್ ಸಾಂಕ್ರಾಮಿಕ ಉಲ್ಬಣಗೊಂಡಿರುವ ಕಾರಣ ಪ್ರತಿಭಟನೆ ನೆಪದಲ್ಲಿ ಗುಂಪುಗೂಡುವುದು ಸರಿಯಲ್ಲ. ಇದನ್ನು ನಾವು ರೈತಮುಖಂಡರೊಂದಿಗೆ ಚರ್ಚಿಸಿದ್ದೇವೆ ಎಂದು ಹಿಸ್ಸಾರ್​ ಜಿಲ್ಲಾಧಿಕಾರಿ ಪ್ರಿಯಾಂಕಾ ಸೋನಿ ತಿಳಿಸಿದ್ದಾರೆ. ಸದ್ಯ ಜಿಲ್ಲೆಯಲ್ಲೂ ಲಾಕ್​ಡೌನ್ ಸ್ಥಿತಿ ಇದೆ. ಈ ಮಧ್ಯೆ ನಾಳಿನ ಪ್ರತಿಭಟನೆಯಲ್ಲಿ ಗುಂಪುಗೂಡದಂತೆ ತಡೆಯಲು, ಶಾಂತಿ ಕಾಪಾಡಲು ಬೇಕಾಗಿರುವ ಎಲ್ಲ ರೀತಿಯ ಸಿದ್ಧತೆಗಳನ್ನೂ ಮಾಡಿಕೊಂಡಿದ್ದೇವೆ ಎಂದು ಜಿಲ್ಲಾ ಪೊಲೀಸ್​ ಮುಖ್ಯಸ್ಥ ತಿಳಿಸಿದ್ದಾರೆ.

ಇದನ್ನೂ ಓದಿ: ಕೊವಿಡ್ 3ನೇ ಅಲೆಯಿಂದ ಮಕ್ಕಳಿಗೆ ಹೆಚ್ಚಿನ ಅಪಾಯ, ಭಾರತದಲ್ಲಿ ತಯಾರಿಸಿದ ಮೂಗಿಗೆ ಹಾಕುವ ಲಸಿಕೆ ‘ಗೇಮ್ ಚೇಂಜರ್’ ಆಗುವ ಸಾಧ್ಯತೆ: ಸೌಮ್ಯ ಸ್ವಾಮಿನಾಥನ್

‘ನಾನು ಜೈಲಿಗೆ ಹೋಗಲು ಹಿಂಜರಿಯುವುದಿಲ್ಲ’; ಪುತ್ರಿ ಸುಹಾನಾ ಬಾಯ್​ಫ್ರೆಂಡ್​ ಬಗ್ಗೆ ಶಾರುಖ್​ ಖಡಕ್​ ವಾರ್ನಿಂಗ್​

Follow Us
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ರಶ್ಮಿಕಾ ಜೊತೆ ಡ್ಯಾನ್ಸ್ ಮಾಡಿದ ವಿಜಯ್ ಸಹೋದರ
ರಶ್ಮಿಕಾ ಜೊತೆ ಡ್ಯಾನ್ಸ್ ಮಾಡಿದ ವಿಜಯ್ ಸಹೋದರ
ಅಮ್ಮಾ ನೀನು ಅಷ್ಟು ವರ್ಷ ನನ್ನ ಹೊತ್ತಿಲ್ವಾ, ಈಗ ನನ್ನ ಸರದಿ
ಅಮ್ಮಾ ನೀನು ಅಷ್ಟು ವರ್ಷ ನನ್ನ ಹೊತ್ತಿಲ್ವಾ, ಈಗ ನನ್ನ ಸರದಿ
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?