AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಸ್ಸಾರ್​​ನಲ್ಲಿ ಹಿರಿಯ ಪೊಲೀಸ್​ ಅಧಿಕಾರಿ ನಿವಾಸಕ್ಕೆ ಮುತ್ತಿಗೆ ಹಾಕಲು ಸಜ್ಜಾದ ರೈತರು; ನಿಯಂತ್ರಣಕ್ಕೆ ಸಿದ್ಧರಾಗಿರುವ ಭದ್ರತಾ ಸಿಬ್ಬಂದಿ

ಕೊಲೆ ಯತ್ನ, ಗಲಭೆ, ಕಾನೂನು ವಿರೋಧಿ ಚಟುವಟಿಕೆ, ಕೊರೊನಾ ಸೋಂಕು ಹರಡಿದ್ದು..ಹೀಗೆ ಹಲವು ಕಾರಣಗಳಿಗೆ ಸುಮಾರು 350 ಮಂದಿಯ ವಿರುದ್ಧ ಹಿಸ್ಸಾರ್ ಠಾಣೆಯಲ್ಲಿ ಕ್ರಿಮಿನಲ್​ ಕೇಸ್​ ದಾಖಲಾಗಿದೆ.

ಹಿಸ್ಸಾರ್​​ನಲ್ಲಿ ಹಿರಿಯ ಪೊಲೀಸ್​ ಅಧಿಕಾರಿ ನಿವಾಸಕ್ಕೆ ಮುತ್ತಿಗೆ ಹಾಕಲು ಸಜ್ಜಾದ ರೈತರು; ನಿಯಂತ್ರಣಕ್ಕೆ ಸಿದ್ಧರಾಗಿರುವ ಭದ್ರತಾ ಸಿಬ್ಬಂದಿ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 23, 2021 | 7:23 PM

Share

ಚಂಡಿಗಡ್​​: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ನವೆಂಬರ್​​ನಿಂದಲೂ ದೆಹಲಿಯ ಗಡಿಗಳಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗೆ ಪ್ರತಿಭಟನೆ ನಡೆಸುತ್ತಿರುವ ಸುಮಾರು 350 ಮಂದಿಯ ವಿರುದ್ಧ ಹರ್ಯಾಣದ ಹಿಸ್ಸಾರ್​​ ಪೊಲೀಸರು ಕ್ರಿಮಿನಲ್​ ಪ್ರಕರಣ ದಾಖಲು ಮಾಡಿದ್ದಾರೆ. ಈ ಕ್ರಿಮಿನಲ್​ ಪ್ರಕರಣವನ್ನು ವಾಪಸ್​ ಪಡೆಯುವಂತೆ ಒತ್ತಾಯಿಸಿ ನಾಳೆ ಹರ್ಯಾಣದ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರ ನಿವಾಸಕ್ಕೆ ಮುತ್ತಿಗೆ ಹಾಕಲು ರೈತರು ಯೋಜನೆ ರೂಪಿಸಿರುವ ಹಿನ್ನೆಲೆಯಲ್ಲಿ ಇಂದಿನಿಂದಲೇ ಅಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಕೊಲೆ ಯತ್ನ, ಗಲಭೆ, ಕಾನೂನು ವಿರೋಧಿ ಚಟುವಟಿಕೆ, ಕೊರೊನಾ ಸೋಂಕು ಹರಡಿದ್ದು..ಹೀಗೆ ಹಲವು ಕಾರಣಗಳಿಗೆ ಸುಮಾರು 350 ಮಂದಿಯ ವಿರುದ್ಧ ಹಿಸ್ಸಾರ್ ಠಾಣೆಯಲ್ಲಿ ಕ್ರಿಮಿನಲ್​ ಕೇಸ್​ ದಾಖಲಾಗಿದೆ. ಇದನ್ನು ವಾಪಸ್​ ಪಡೆಯಲು ಆಗ್ರಹಿಸಿ ನಾಳೆ (ಮೇ 24) ಹಿಸಾರ್​ ವಲಯದ ಐಜಿ ನಿವಾಸಕ್ಕೆ ಮುತ್ತಿಗೆ ಹಾಕಲು ರೈತರು ಯೋಜನೆ ರೂಪಿಸಿದ್ದಾರೆ. ಅವರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು, ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಲುವಾಗಿ ಇಂದು ರ್ಯಾಪಿಡ್​ ಆ್ಯಕ್ಷನ್​ ಫೋರ್ಸ್​ (RAF)ನ ಸುಮಾರು 3000 ಸಿಬ್ಬಂದಿ ಹಿಸ್ಸಾರ್​​ಗೆ ತೆರಳಿದ್ದಾರೆ.

ನಾಳೆ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಇಲ್ಲಿಗೆ ಬಾರದಂತೆ ತಡೆಯಲು ನಾವು ರೈತ ಮುಖಂಡರಿಗೆ ತಿಳಿಸಿದ್ದೇವೆ. ಕೊರೊನಾ ವೈರಸ್ ಸಾಂಕ್ರಾಮಿಕ ಉಲ್ಬಣಗೊಂಡಿರುವ ಕಾರಣ ಪ್ರತಿಭಟನೆ ನೆಪದಲ್ಲಿ ಗುಂಪುಗೂಡುವುದು ಸರಿಯಲ್ಲ. ಇದನ್ನು ನಾವು ರೈತಮುಖಂಡರೊಂದಿಗೆ ಚರ್ಚಿಸಿದ್ದೇವೆ ಎಂದು ಹಿಸ್ಸಾರ್​ ಜಿಲ್ಲಾಧಿಕಾರಿ ಪ್ರಿಯಾಂಕಾ ಸೋನಿ ತಿಳಿಸಿದ್ದಾರೆ. ಸದ್ಯ ಜಿಲ್ಲೆಯಲ್ಲೂ ಲಾಕ್​ಡೌನ್ ಸ್ಥಿತಿ ಇದೆ. ಈ ಮಧ್ಯೆ ನಾಳಿನ ಪ್ರತಿಭಟನೆಯಲ್ಲಿ ಗುಂಪುಗೂಡದಂತೆ ತಡೆಯಲು, ಶಾಂತಿ ಕಾಪಾಡಲು ಬೇಕಾಗಿರುವ ಎಲ್ಲ ರೀತಿಯ ಸಿದ್ಧತೆಗಳನ್ನೂ ಮಾಡಿಕೊಂಡಿದ್ದೇವೆ ಎಂದು ಜಿಲ್ಲಾ ಪೊಲೀಸ್​ ಮುಖ್ಯಸ್ಥ ತಿಳಿಸಿದ್ದಾರೆ.

ಇದನ್ನೂ ಓದಿ: ಕೊವಿಡ್ 3ನೇ ಅಲೆಯಿಂದ ಮಕ್ಕಳಿಗೆ ಹೆಚ್ಚಿನ ಅಪಾಯ, ಭಾರತದಲ್ಲಿ ತಯಾರಿಸಿದ ಮೂಗಿಗೆ ಹಾಕುವ ಲಸಿಕೆ ‘ಗೇಮ್ ಚೇಂಜರ್’ ಆಗುವ ಸಾಧ್ಯತೆ: ಸೌಮ್ಯ ಸ್ವಾಮಿನಾಥನ್

‘ನಾನು ಜೈಲಿಗೆ ಹೋಗಲು ಹಿಂಜರಿಯುವುದಿಲ್ಲ’; ಪುತ್ರಿ ಸುಹಾನಾ ಬಾಯ್​ಫ್ರೆಂಡ್​ ಬಗ್ಗೆ ಶಾರುಖ್​ ಖಡಕ್​ ವಾರ್ನಿಂಗ್​

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ