AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಸ್ಸಾರ್​​ನಲ್ಲಿ ಹಿರಿಯ ಪೊಲೀಸ್​ ಅಧಿಕಾರಿ ನಿವಾಸಕ್ಕೆ ಮುತ್ತಿಗೆ ಹಾಕಲು ಸಜ್ಜಾದ ರೈತರು; ನಿಯಂತ್ರಣಕ್ಕೆ ಸಿದ್ಧರಾಗಿರುವ ಭದ್ರತಾ ಸಿಬ್ಬಂದಿ

ಕೊಲೆ ಯತ್ನ, ಗಲಭೆ, ಕಾನೂನು ವಿರೋಧಿ ಚಟುವಟಿಕೆ, ಕೊರೊನಾ ಸೋಂಕು ಹರಡಿದ್ದು..ಹೀಗೆ ಹಲವು ಕಾರಣಗಳಿಗೆ ಸುಮಾರು 350 ಮಂದಿಯ ವಿರುದ್ಧ ಹಿಸ್ಸಾರ್ ಠಾಣೆಯಲ್ಲಿ ಕ್ರಿಮಿನಲ್​ ಕೇಸ್​ ದಾಖಲಾಗಿದೆ.

ಹಿಸ್ಸಾರ್​​ನಲ್ಲಿ ಹಿರಿಯ ಪೊಲೀಸ್​ ಅಧಿಕಾರಿ ನಿವಾಸಕ್ಕೆ ಮುತ್ತಿಗೆ ಹಾಕಲು ಸಜ್ಜಾದ ರೈತರು; ನಿಯಂತ್ರಣಕ್ಕೆ ಸಿದ್ಧರಾಗಿರುವ ಭದ್ರತಾ ಸಿಬ್ಬಂದಿ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 23, 2021 | 7:23 PM

Share

ಚಂಡಿಗಡ್​​: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ನವೆಂಬರ್​​ನಿಂದಲೂ ದೆಹಲಿಯ ಗಡಿಗಳಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗೆ ಪ್ರತಿಭಟನೆ ನಡೆಸುತ್ತಿರುವ ಸುಮಾರು 350 ಮಂದಿಯ ವಿರುದ್ಧ ಹರ್ಯಾಣದ ಹಿಸ್ಸಾರ್​​ ಪೊಲೀಸರು ಕ್ರಿಮಿನಲ್​ ಪ್ರಕರಣ ದಾಖಲು ಮಾಡಿದ್ದಾರೆ. ಈ ಕ್ರಿಮಿನಲ್​ ಪ್ರಕರಣವನ್ನು ವಾಪಸ್​ ಪಡೆಯುವಂತೆ ಒತ್ತಾಯಿಸಿ ನಾಳೆ ಹರ್ಯಾಣದ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರ ನಿವಾಸಕ್ಕೆ ಮುತ್ತಿಗೆ ಹಾಕಲು ರೈತರು ಯೋಜನೆ ರೂಪಿಸಿರುವ ಹಿನ್ನೆಲೆಯಲ್ಲಿ ಇಂದಿನಿಂದಲೇ ಅಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಕೊಲೆ ಯತ್ನ, ಗಲಭೆ, ಕಾನೂನು ವಿರೋಧಿ ಚಟುವಟಿಕೆ, ಕೊರೊನಾ ಸೋಂಕು ಹರಡಿದ್ದು..ಹೀಗೆ ಹಲವು ಕಾರಣಗಳಿಗೆ ಸುಮಾರು 350 ಮಂದಿಯ ವಿರುದ್ಧ ಹಿಸ್ಸಾರ್ ಠಾಣೆಯಲ್ಲಿ ಕ್ರಿಮಿನಲ್​ ಕೇಸ್​ ದಾಖಲಾಗಿದೆ. ಇದನ್ನು ವಾಪಸ್​ ಪಡೆಯಲು ಆಗ್ರಹಿಸಿ ನಾಳೆ (ಮೇ 24) ಹಿಸಾರ್​ ವಲಯದ ಐಜಿ ನಿವಾಸಕ್ಕೆ ಮುತ್ತಿಗೆ ಹಾಕಲು ರೈತರು ಯೋಜನೆ ರೂಪಿಸಿದ್ದಾರೆ. ಅವರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು, ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಲುವಾಗಿ ಇಂದು ರ್ಯಾಪಿಡ್​ ಆ್ಯಕ್ಷನ್​ ಫೋರ್ಸ್​ (RAF)ನ ಸುಮಾರು 3000 ಸಿಬ್ಬಂದಿ ಹಿಸ್ಸಾರ್​​ಗೆ ತೆರಳಿದ್ದಾರೆ.

ನಾಳೆ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಇಲ್ಲಿಗೆ ಬಾರದಂತೆ ತಡೆಯಲು ನಾವು ರೈತ ಮುಖಂಡರಿಗೆ ತಿಳಿಸಿದ್ದೇವೆ. ಕೊರೊನಾ ವೈರಸ್ ಸಾಂಕ್ರಾಮಿಕ ಉಲ್ಬಣಗೊಂಡಿರುವ ಕಾರಣ ಪ್ರತಿಭಟನೆ ನೆಪದಲ್ಲಿ ಗುಂಪುಗೂಡುವುದು ಸರಿಯಲ್ಲ. ಇದನ್ನು ನಾವು ರೈತಮುಖಂಡರೊಂದಿಗೆ ಚರ್ಚಿಸಿದ್ದೇವೆ ಎಂದು ಹಿಸ್ಸಾರ್​ ಜಿಲ್ಲಾಧಿಕಾರಿ ಪ್ರಿಯಾಂಕಾ ಸೋನಿ ತಿಳಿಸಿದ್ದಾರೆ. ಸದ್ಯ ಜಿಲ್ಲೆಯಲ್ಲೂ ಲಾಕ್​ಡೌನ್ ಸ್ಥಿತಿ ಇದೆ. ಈ ಮಧ್ಯೆ ನಾಳಿನ ಪ್ರತಿಭಟನೆಯಲ್ಲಿ ಗುಂಪುಗೂಡದಂತೆ ತಡೆಯಲು, ಶಾಂತಿ ಕಾಪಾಡಲು ಬೇಕಾಗಿರುವ ಎಲ್ಲ ರೀತಿಯ ಸಿದ್ಧತೆಗಳನ್ನೂ ಮಾಡಿಕೊಂಡಿದ್ದೇವೆ ಎಂದು ಜಿಲ್ಲಾ ಪೊಲೀಸ್​ ಮುಖ್ಯಸ್ಥ ತಿಳಿಸಿದ್ದಾರೆ.

ಇದನ್ನೂ ಓದಿ: ಕೊವಿಡ್ 3ನೇ ಅಲೆಯಿಂದ ಮಕ್ಕಳಿಗೆ ಹೆಚ್ಚಿನ ಅಪಾಯ, ಭಾರತದಲ್ಲಿ ತಯಾರಿಸಿದ ಮೂಗಿಗೆ ಹಾಕುವ ಲಸಿಕೆ ‘ಗೇಮ್ ಚೇಂಜರ್’ ಆಗುವ ಸಾಧ್ಯತೆ: ಸೌಮ್ಯ ಸ್ವಾಮಿನಾಥನ್

‘ನಾನು ಜೈಲಿಗೆ ಹೋಗಲು ಹಿಂಜರಿಯುವುದಿಲ್ಲ’; ಪುತ್ರಿ ಸುಹಾನಾ ಬಾಯ್​ಫ್ರೆಂಡ್​ ಬಗ್ಗೆ ಶಾರುಖ್​ ಖಡಕ್​ ವಾರ್ನಿಂಗ್​

Follow Us
Lakshmi Hegde
Lakshmi Hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!