AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo ಪಟ್ಟು ಬಿಡದ ರೈತರಿಂದ ಉಪವಾಸ ಸತ್ಯಾಗ್ರಹ ಆರಂಭ

ಸತತ 19ನೇ ದಿನದ ಪ್ರತಿಭಟನೆ ನಿಮಿತ್ತ ಇಂದು ಪಂಜಾಬ್ ರೈತರು ಒಂದು ದಿನದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಈಗಾಗಲೇ ಬೆಳಗ್ಗೆ 8ರಿಂದ ಉಪವಾಸ ಸತ್ಯಾಗ್ರಹ ಆರಂಭವಾಗಿದೆ.

Delhi Chalo ಪಟ್ಟು ಬಿಡದ ರೈತರಿಂದ ಉಪವಾಸ ಸತ್ಯಾಗ್ರಹ ಆರಂಭ
ಟಿಕ್ರಿ ಗಡಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪಂಜಾಬ್ ರೈತರು
guruganesh bhat
| Edited By: |

Updated on: Dec 14, 2020 | 11:58 AM

Share

ದೆಹಲಿ: ಸತತ 19ನೇ ದಿನದ ಪ್ರತಿಭಟನೆ ನಿಮಿತ್ತ ಇಂದು ಪಂಜಾಬ್ ರೈತರು ಒಂದು ದಿನದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಈಗಾಗಲೇ ಬೆಳಗ್ಗೆ 8ರಿಂದ ಉಪವಾಸ ಸತ್ಯಾಗ್ರಹ ಆರಂಭವಾಗಿದೆ. ದೆಹಲಿ-ಹರಿಯಾಣದ ವಿವಿಧ ಗಡಿಗಳಲ್ಲಿ ರೈತ ಒಕ್ಕೂಟಗಳ 40 ನಾಯಕರು ಸಂಜೆ 5ರವರೆಗೂ ಸತ್ಯಾಗ್ರಹ ನಡೆಸಲಿದ್ದಾರೆ ಎಂದು ರೈತ ಮುಖಂಡರು​​ ತಿಳಿಸಿದ್ದಾರೆ. ಸಿಂಘು ಗಡಿಯಲ್ಲಿ 25, ಟಿಕ್ರಿ ಗಡಿಯಲ್ಲಿ 10, ಉತ್ತರ ಪ್ರದೇಶ ಗಡಿಯಲ್ಲಿ 5 ರೈತ ನಾಯಕರು ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ಜೊತೆಗೆ ಸಾವಿರಾರು ಬೆಂಬಲಿಗರು ರೈತ ನಾಯಕರ ಜೊತೆಗೂಡಲಿದ್ದಾರೆ.

ಆದರೆ, ಭಾರತೀಯ ಕಿಸಾನ್ ಯೂನಿಯನ್​ನ ಒಂದು ಬಣ ಇಂದಿನ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳುವುದಿಲ್ಲವೆಂದು ತಿಳಿಸಿದೆ. ಬಂಧಿತ ರೈತ ಪ್ರತಿಭಟನಾಕಾರರ ಬಿಡುಗಡೆಗೆ ಒತ್ತಾಯಿಸಿ ಕಳೆದ ವಾರ ಈ ಸಂಘಟನೆ ಪ್ರತಿಭಟನೆ ನಡೆಸಿತ್ತು. ನಂತರ, ಬಿಜೆಪಿಯ ಕೆಲವು ನಾಯಕರು ದೆಹಲಿ ಚಲೋ ‘ಸಮಾಜ ಘಾತುಕ’ ಶಕ್ತಿಗಳ ವಶವಾಗಿದೆಯೆಂದು ಆಪಾದಿಸಿದ್ದರು. ಅರವಿಂದ್ ಕೇಜ್ರಿವಾಲ್ ಬೆಂಬಲ

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಹ ಇಂದು ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ಆಮ್ ಆದ್ಮಿ ಪಕ್ಷದ ಕಾರ್ಯಕರ್ತರಿಗೂ ಸತ್ಯಾಗ್ರಹದ ಕರೆ ನೀಡಿರುವ ಅವರು, ದೆಹಲಿ ಚಲೋವನ್ನು ಮನೆಗಳಿಂದಲೇ ಬೆಂಬಲಿಸುವಂತೆ ಕಾರ್ಯಕರ್ತರಲ್ಲಿ ವಿನಂತಿಸಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ