AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo ಪಟ್ಟು ಬಿಡದ ರೈತರಿಂದ ಉಪವಾಸ ಸತ್ಯಾಗ್ರಹ ಆರಂಭ

ಸತತ 19ನೇ ದಿನದ ಪ್ರತಿಭಟನೆ ನಿಮಿತ್ತ ಇಂದು ಪಂಜಾಬ್ ರೈತರು ಒಂದು ದಿನದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಈಗಾಗಲೇ ಬೆಳಗ್ಗೆ 8ರಿಂದ ಉಪವಾಸ ಸತ್ಯಾಗ್ರಹ ಆರಂಭವಾಗಿದೆ.

Delhi Chalo ಪಟ್ಟು ಬಿಡದ ರೈತರಿಂದ ಉಪವಾಸ ಸತ್ಯಾಗ್ರಹ ಆರಂಭ
ಟಿಕ್ರಿ ಗಡಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪಂಜಾಬ್ ರೈತರು
Follow us
guruganesh bhat
| Updated By: ಸಾಧು ಶ್ರೀನಾಥ್​

Updated on: Dec 14, 2020 | 11:58 AM

ದೆಹಲಿ: ಸತತ 19ನೇ ದಿನದ ಪ್ರತಿಭಟನೆ ನಿಮಿತ್ತ ಇಂದು ಪಂಜಾಬ್ ರೈತರು ಒಂದು ದಿನದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಈಗಾಗಲೇ ಬೆಳಗ್ಗೆ 8ರಿಂದ ಉಪವಾಸ ಸತ್ಯಾಗ್ರಹ ಆರಂಭವಾಗಿದೆ. ದೆಹಲಿ-ಹರಿಯಾಣದ ವಿವಿಧ ಗಡಿಗಳಲ್ಲಿ ರೈತ ಒಕ್ಕೂಟಗಳ 40 ನಾಯಕರು ಸಂಜೆ 5ರವರೆಗೂ ಸತ್ಯಾಗ್ರಹ ನಡೆಸಲಿದ್ದಾರೆ ಎಂದು ರೈತ ಮುಖಂಡರು​​ ತಿಳಿಸಿದ್ದಾರೆ. ಸಿಂಘು ಗಡಿಯಲ್ಲಿ 25, ಟಿಕ್ರಿ ಗಡಿಯಲ್ಲಿ 10, ಉತ್ತರ ಪ್ರದೇಶ ಗಡಿಯಲ್ಲಿ 5 ರೈತ ನಾಯಕರು ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ಜೊತೆಗೆ ಸಾವಿರಾರು ಬೆಂಬಲಿಗರು ರೈತ ನಾಯಕರ ಜೊತೆಗೂಡಲಿದ್ದಾರೆ.

ಆದರೆ, ಭಾರತೀಯ ಕಿಸಾನ್ ಯೂನಿಯನ್​ನ ಒಂದು ಬಣ ಇಂದಿನ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳುವುದಿಲ್ಲವೆಂದು ತಿಳಿಸಿದೆ. ಬಂಧಿತ ರೈತ ಪ್ರತಿಭಟನಾಕಾರರ ಬಿಡುಗಡೆಗೆ ಒತ್ತಾಯಿಸಿ ಕಳೆದ ವಾರ ಈ ಸಂಘಟನೆ ಪ್ರತಿಭಟನೆ ನಡೆಸಿತ್ತು. ನಂತರ, ಬಿಜೆಪಿಯ ಕೆಲವು ನಾಯಕರು ದೆಹಲಿ ಚಲೋ ‘ಸಮಾಜ ಘಾತುಕ’ ಶಕ್ತಿಗಳ ವಶವಾಗಿದೆಯೆಂದು ಆಪಾದಿಸಿದ್ದರು. ಅರವಿಂದ್ ಕೇಜ್ರಿವಾಲ್ ಬೆಂಬಲ

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಹ ಇಂದು ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ಆಮ್ ಆದ್ಮಿ ಪಕ್ಷದ ಕಾರ್ಯಕರ್ತರಿಗೂ ಸತ್ಯಾಗ್ರಹದ ಕರೆ ನೀಡಿರುವ ಅವರು, ದೆಹಲಿ ಚಲೋವನ್ನು ಮನೆಗಳಿಂದಲೇ ಬೆಂಬಲಿಸುವಂತೆ ಕಾರ್ಯಕರ್ತರಲ್ಲಿ ವಿನಂತಿಸಿದ್ದಾರೆ.

ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್