AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನು ಮುಂದೆ ಫೆಬ್ರವರಿ 14 ಅಂದರೆ ಪ್ರೇಮಿಗಳ ದಿನ ಅಲ್ಲವಂತೆ! ಮತ್ತಿನ್ನೇನು ಗೊತ್ತಾ?

ಗೋವುಗಳ ಉಚ್ಚ್ವಾಸ -ನಿಚ್ಛ್ವಾಸ ನಮ್ಮ ಶ್ವಾಸಕ್ಕೆ ತಂಗಾಳಿಯಾಗಿ ಸಂಗಾತಿಯಾದರೆ .. ನಮ್ಮ ಉಸಿರಿನ ಮೂಲಕ ನಮ್ಮಲ್ಲಿರುವ ನಕಾರಾತ್ಮಕ ಶಕ್ತಿ ಹೋಗಲಾಡಿಸುತ್ತದೆ, ಮನಸ್ಸು ಶಾಂತವಾಗಿರುತ್ತದೆ ಎಂದು ‘ಅಖಿಲ ಭಾರತ ಗೋ ಸೇವಾ ಪ್ರತಿಷ್ಠಾನ’ ಸಂಸ್ಥೆಯ ಬಾಲಕೃಷ್ಣಗೌಡ ಹೇಳಿದರು.

ಇನ್ನು ಮುಂದೆ ಫೆಬ್ರವರಿ 14 ಅಂದರೆ ಪ್ರೇಮಿಗಳ ದಿನ ಅಲ್ಲವಂತೆ! ಮತ್ತಿನ್ನೇನು ಗೊತ್ತಾ?
ಇನ್ನು ಮುಂದೆ ಫೆಬ್ರವರಿ 14 ಅಂದರೆ ಪ್ರೇಮಿಗಳ ದಿನ ಅಲ್ಲವಂತೆ!
ಸಾಧು ಶ್ರೀನಾಥ್​
|

Updated on: Feb 15, 2024 | 3:55 PM

Share

ಫೆಬ್ರವರಿ 14 ಅನ್ನುತ್ತಿದ್ದಂತೆ ಕೆಲವರಿಗೆ ಮೈಮನಗಳಲ್ಲಿ ಪ್ರೇಮಿಗಳ ದಿನ (Valentine’s Day) ನೆನಪಾಗುತ್ತದೆ. ಆದರೆ ಇತರರು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಸೂಚಕವಾಗಿ ಕರಾಳ ದಿನವನ್ನು ಆಚರಿಸುತ್ತಾರೆ. ಆದರೆ ಇವೆರಡಕ್ಕಿಂತಲೂ ಭಿನ್ನವಾಗಿ ಗೋ ದಿನ (Cow Hug Day) ಆಚರಿಸಲಾಗುತ್ತದೆ. ಭಾರತವು ಸನಾತನ ಧರ್ಮ, ಪ್ರೀತಿ ಮತ್ತು ಮೌಲ್ಯಗಳಿಗೆ ಹೆಸರುವಾಸಿ. ಇಂತಹ ದೇಶದಲ್ಲಿ ತಾಯಿಯ ನಂತರ ಗೋವಿಗೆ ಪರಮ ಪ್ರೀತಿ ಗೌರವ ಸಲ್ಲುತ್ತದೆ ( Milk producers).

ಹಾಗಾಗಿಯೇ ನಮಗೆ ಪಾಶ್ಚಿಮಾತ್ಯ ಸಂಸ್ಕೃತಿಯ ‘ವ್ಯಾಲೆಂಟೈನ್ಸ್​​ ಡೆ’ ಇಷ್ಟವಾಗದು. ಹಾಗಾಗಿಯೇ ‘ಪ್ರೇಮಿಗಳ ದಿನ’ವನ್ನು ಗೋವುಗಳ ದಿನಾಚರಣೆ ಮಾಡಲಾಗುತ್ತದೆ ಎಂದು ಬಾಲಕೃಷ್ಣಗೌಡ ಹೇಳುತ್ತಾರೆ. ಹಾಗಾಗಿಯೇ ಹೈದರಾಬಾದ್‌ನ ಲೋವರ್ ಟ್ಯಾಂಕ್ ಬಂಡ್‌ನಲ್ಲಿರುವ ಗೋಶಾಲೆಯಲ್ಲಿ ಹಸುಗಳನ್ನು ಪ್ರೀತಿಯಿಂದ ಮುದ್ದಾಡುವ ಮೂಲಕ ಹಸು ಪ್ರೇಮ ದಿನವನ್ನು ಅದ್ಧೂರಿಯಾಗಿ ಆಚರಿಸಲಾಯಿತು.

‘ಅಖಿಲ ಭಾರತ ಗೋ ಸೇವಾ ಪ್ರತಿಷ್ಠಾನ’ ಸಂಸ್ಥೆಯ ಆಶ್ರಯದಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಹಲವು ಗೋ ಪ್ರೇಮಿಗಳು ಪಾಲ್ಗೊಂಡಿದ್ದರು. ‘ಲವರ್ಸ್ ಡೇ ಬೇಡ… ಮುದ್ದು ಮುದ್ದಾದ ಕೌ ಹಗ್ ಡೇ’ ಆಚರಿಸೋಣ ಎಂಬ ಪ್ಲೆಕಾರ್ಡ್ ಗಳನ್ನು ಪ್ರದರ್ಶಿಸಲಾಯಿತು. ಅಲ್ಲಿನ ಗೋಶಾಲೆಯಲ್ಲಿ ಸಾಕಿದ ಗೋವುಗಳಿಗೆ ಗೋರಕ್ಷಕರು ವಿಶೇಷ ಪೂಜೆ ಸಲ್ಲಿಸಿದರು. ಅವುಗಳನ್ನು ಆಪ್ಯಾಯತೆಯಿಂದ ಅಪ್ಪಿ ಮುದ್ದಾಡುವ ಮೂಲಕ ವಿಶೇಷ ಅನುಭೂತಿ ಪಡೆದರು.

‘ಗೋವನ್ನು ಉಳಿಸಿ.. ಭೂಮಿ ಉಳಿಸಿ’, ‘ಜೈ ಗೋಮಾತಾ’ ಘೋಷಣೆಗಳು ಮೊಳಗಿದವು. ‘ಅಖಿಲ ಭಾರತ ಗೋಸೇವಾ ಪ್ರತಿಷ್ಠಾನ’ದ ಅಧ್ಯಕ್ಷ ಬಾಲಕೃಷ್ಣಗೌಡ, ಗೋವು ಪಾಲನೆಯನ್ನು ಆಚರಿಸಬೇಕು ಮತ್ತು ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಬೇಕು ಎಂದು ಆಗ್ರಹಿಸಿದರು. ಗೋವುಗಳನ್ನು ರಕ್ಷಿಸುವ ಅವಶ್ಯಕತೆ ಪ್ರತಿಯೊಬ್ಬ ಭಾರತೀಯನ ಮೇಲಿದೆ. ಫೆಬ್ರವರಿ 14 ರಂದು ರಾಷ್ಟ್ರೀಯ ಗೋವಿನ ಆಲಿಂಗನ ದಿನವನ್ನಾಗಿ ಆಚರಿಸಲಾಗುವುದು. ಈ ಸಂದರ್ಭದಲ್ಲಿ, ಕೆಲವು ಮಹಿಳೆಯರು ಮತ್ತು ಹಸು ಪ್ರೇಮಿಗಳು ಹಸು, ಕರುಗಳನ್ನು ಎತ್ತಿಕೊಂಡು ಪ್ರೀತಿಯಿಂದ ಮುದ್ದಾಡಿದರು. ಅವರೊಂದಿಗೆ ಫೋಟೋ ತೆಗೆಸಿಕೊಂಡು ಖುಷಿ ಪಟ್ಟರು.

ಹಿಂದೂಗಳು ಪವಿತ್ರವೆಂದು ಪರಿಗಣಿಸುವ ಪ್ರಾಣಿಗಳನ್ನು ಸಂರಕ್ಷಿಸಲು ಸ್ವಯಂ ಪ್ರೇರಿತವಾಗಿ ಹಲವು ಸೇವಾ ಕಾರ್ಯಕ್ರಮಗಳನ್ನು ಹಲವು ವರ್ಷಗಳಿಂದ ಕೈಗೊಳ್ಳುತ್ತಿರುವುದಾಗಿ ಬಾಲಕೃಷ್ಣಗೌಡ ತಿಳಿಸಿದರು. ಗೋವುಗಳಿಗೂ ಸೀಮಂತ ಕಾರ್ಯಕ್ರಮಗಳನ್ನು ನಡೆಸಿಕೊಂಡುಬಂದಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ