AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಂತರ್​ ಮಂತರ್​ನಲ್ಲಿ ಸತ್ಯಾಗ್ರಹ ನಡೆಸಲು ಮುಂದಾದ ಕಿಸಾನ್ ಮಹಾಪಂಚಾಯತ್​; ಸುಪ್ರೀಂಕೋರ್ಟ್​ಗೆ ಅರ್ಜಿ

ಮೂರು ನೂತನ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ಆಗಾಗ ಹೆದ್ದಾರಿಗಳನ್ನು ಬಂದ್​ ಮಾಡುತ್ತಿದ್ದಾರೆ. ಮೊನ್ನೆ ಸೆಪ್ಟೆಂಬರ್​ 27ರಂದು ನಡೆಸಲಾದ ಭಾರತ್​ ಬಂದ್​ನಲ್ಲೂ ಕೂಡ ದೇಶಾದ್ಯಂತ ಹಲವು ಪ್ರಮುಖ ಹೆದ್ದಾರಿಗಳನ್ನು ಬಂದ್​ ಮಾಡಿದ್ದರು.

ಜಂತರ್​ ಮಂತರ್​ನಲ್ಲಿ ಸತ್ಯಾಗ್ರಹ ನಡೆಸಲು ಮುಂದಾದ ಕಿಸಾನ್ ಮಹಾಪಂಚಾಯತ್​; ಸುಪ್ರೀಂಕೋರ್ಟ್​ಗೆ ಅರ್ಜಿ
ಸುಪ್ರೀಂಕೋರ್ಟ್​
TV9 Web
| Edited By: |

Updated on:Oct 01, 2021 | 9:56 AM

Share

ದೆಹಲಿ: ಇಲ್ಲಿನ ಜಂತರ್​ ಮಂತರ್​ನಲ್ಲಿ ಸತ್ಯಾಗ್ರಹ ನಡೆಸಲು ಅನುಮತಿ ನೀಡುವಂತೆ ಮನವಿ ಮಾಡಿ ಕಿಸಾನ್​ ಮಹಾಪಂಚಾಯತ್ (ರೈತ ಸಂಘಟನೆ)​ ಸುಪ್ರೀಂಕೋರ್ಟ್​ ಮೆಟ್ಟಿಲೇರಿದೆ.  ದೆಹಲಿಯ ಜಂತರ್​ ಮಂತರ್​​ನಲ್ಲಿ ಪ್ರತಿಭಟನೆ ನಡೆಸಲು ಸಂಯುಕ್ತ ಕಿಸಾನ್​ ಮೋರ್ಚಾ (SKM)ಕ್ಕೆ ಅನುಮತಿ ನೀಡಿದಂತೆ ನಮಗೂ ಕೊಡಲು  ಅಧಿಕಾರಿಗಳಿಗೆ ನಿರ್ದೇಶನ ನೀಡಿ ಎಂದು ಕಿಸಾನ್​ ಪಂಚಾಯತ್​ ಸಂಘಟನೆ ಸುಪ್ರೀಂಕೋರ್ಟ್​​ ಬಳಿ ಕೇಳಿದ್ದು, ಕೋರ್ಟ್​ ಇಂದು ಅರ್ಜಿ ವಿಚಾರಣೆ ನಡೆಸಲಿದೆ.   

ಜಂತರ್​ಮಂತರ್​ನಲ್ಲಿ ನಾವು ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಮುಂದಾಗಿದ್ದೇವೆ. ಇದಕ್ಕೆ ಅನುಮತಿ ನೀಡುವುದರ ಜತೆಗೆ ನಮ್ಮನ್ನು ತಡೆಯದಂತೆ ಕೇಂದ್ರ ಸರ್ಕಾರ, ದೆಹಲಿ ಲೆಫ್ಟಿನೆಂಟ್​ ಗವರ್ನರ್​  ಮತ್ತು ದೆಹಲಿ ಪೊಲೀಸ್​ ಕಮಿಷನರ್​ಗೆ ನಿರ್ದೇಶನ ನೀಡಬೇಕು. ಸುಮಾರು 200 ರೈತರು ಪ್ರತಿಭಟನೆ ನಡೆಸಲು ಅವಕಾಶ ನೀಡಬೇಕು ಎಂದು ಕಿಸಾನ್​ ಮಹಾಪಂಚಾಯತ್​ ತನ್ನ ಅರ್ಜಿಯಲ್ಲಿ ಉಲ್ಲೇಖಿಸಿದೆ.

ಮೂರು ನೂತನ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ಆಗಾಗ ಹೆದ್ದಾರಿಗಳನ್ನು ಬಂದ್​ ಮಾಡುತ್ತಿದ್ದಾರೆ. ಮೊನ್ನೆ ಸೆಪ್ಟೆಂಬರ್​ 27ರಂದು ನಡೆಸಲಾದ ಭಾರತ್​ ಬಂದ್​ನಲ್ಲೂ ಕೂಡ ದೇಶಾದ್ಯಂತ ಹಲವು ಪ್ರಮುಖ ಹೆದ್ದಾರಿಗಳನ್ನು ಬಂದ್​ ಮಾಡಿದ್ದರು. ಅದಾದ ಬಳಿಕ ಸುಪ್ರೀಂಕೋರ್ಟ್ ಈ ಬಗ್ಗೆ ಪ್ರಶ್ನೆ ಮಾಡಿತ್ತು. ಸಾರ್ವಜನಿಕರಿಗಾಗಿ ಇರುವ ಹೆದ್ದಾರಿಗಳನ್ನು ಹೀಗೆ ಬಂದ್​ ಮಾಡುವುದು ಹೇಗೆ ಸಾಧ್ಯ? ಸಾರ್ವಜನಿಕ ಸ್ಥಳದಲ್ಲಿ ಪ್ರತಿಭಟನೆ ಮಾಡುವ ಸಂಬಂಧ ನ್ಯಾಯಾಂಗದ ಕಾನೂನನ್ನು ಸರಿಯಾಗಿ ಕಾರ್ಯಗತಗೊಳಿಸುವುದು ಕಾರ್ಯಾಂಗದ ಪ್ರಮುಖ ಕರ್ತವ್ಯ ಎಂದು ಹೇಳಿತ್ತು.

ಮೂರು ಕೃಷಿ ಕಾಯ್ದೆಗಳ ವಿರುದ್ಧ ಹಲವು ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಸೆ.27ರಂದು ನಡೆಸಲಾದ ಭಾರತ್​ ಬಂದ್​ಗೆ ತಮಿಳುನಾಡು, ಛತ್ತೀಸ್​ಗಡ್​, ಕೇರಳ, ಪಂಜಾಬ್​, ಜಾರ್ಖಂಡ, ಆಂಧ್ರಪ್ರದೇಶ ಬೆಂಬಲ ಸೂಚಿಸಿದ್ದವು. ಕೃಷಿ ಕಾಯ್ದೆಗಳ ಸಂಬಂಧ ನಮ್ಮ ಸಂಕಷ್ಟ ಕೇಳಬೇಕು. ಅವುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಎಂಬುದು ರೈತ ಸಂಘಟನೆಗಳ ಆಗ್ರಹವಾಗಿದೆ. ಆದರೆ ರೈತರ ಪ್ರತಿಭಟನೆಯಿಂದ ಗಡಿ ಭಾಗದಲ್ಲಿ ಹಲವು ವಿಧದ ತೊಂದರೆಗಳು ಎದುರಾಗಿವೆ. ಆಗಾಗ ಪ್ರತಿಭಟನೆ ನೆಪದಲ್ಲಿ ಅವರು ನಡೆಸುವ ಹೆದ್ದಾರಿ ಬಂದ್​ನಿಂದ ಸಾರ್ವಜನಿಕರಿಗೆ ಸಂಕಷ್ಟ ಉಂಡಾಗುತ್ತಿದೆ.

ಇದನ್ನೂ ಓದಿ: ಗುರುತು ಸಿಗದಂತೆ ಬದಲಾದ ಬಿಗ್​ ಬಾಸ್​ ಮಹಿಳಾ ಸ್ಪರ್ಧಿ; ಈ ಪರಿವರ್ತನೆ ನಂಬಲು ಸಾಧ್ಯವೇ?

Team India New Coach: ಕುಂಬ್ಳೆ ಅಲ್ಲ: ಟೀಮ್ ಇಂಡಿಯಾ ಮುಂದಿನ ಕೋಚ್ ಇವರಂತೆ: ಹಿಂಟ್ ಕೊಟ್ಟ ಎಂಎಸ್​ಕೆ ಪ್ರಸಾದ್

Published On - 9:46 am, Fri, 1 October 21

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್