AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಂತರ್​ ಮಂತರ್​ನಲ್ಲಿ ಸತ್ಯಾಗ್ರಹ ನಡೆಸಲು ಮುಂದಾದ ಕಿಸಾನ್ ಮಹಾಪಂಚಾಯತ್​; ಸುಪ್ರೀಂಕೋರ್ಟ್​ಗೆ ಅರ್ಜಿ

ಮೂರು ನೂತನ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ಆಗಾಗ ಹೆದ್ದಾರಿಗಳನ್ನು ಬಂದ್​ ಮಾಡುತ್ತಿದ್ದಾರೆ. ಮೊನ್ನೆ ಸೆಪ್ಟೆಂಬರ್​ 27ರಂದು ನಡೆಸಲಾದ ಭಾರತ್​ ಬಂದ್​ನಲ್ಲೂ ಕೂಡ ದೇಶಾದ್ಯಂತ ಹಲವು ಪ್ರಮುಖ ಹೆದ್ದಾರಿಗಳನ್ನು ಬಂದ್​ ಮಾಡಿದ್ದರು.

ಜಂತರ್​ ಮಂತರ್​ನಲ್ಲಿ ಸತ್ಯಾಗ್ರಹ ನಡೆಸಲು ಮುಂದಾದ ಕಿಸಾನ್ ಮಹಾಪಂಚಾಯತ್​; ಸುಪ್ರೀಂಕೋರ್ಟ್​ಗೆ ಅರ್ಜಿ
ಸುಪ್ರೀಂಕೋರ್ಟ್​
TV9 Web
| Edited By: |

Updated on:Oct 01, 2021 | 9:56 AM

Share

ದೆಹಲಿ: ಇಲ್ಲಿನ ಜಂತರ್​ ಮಂತರ್​ನಲ್ಲಿ ಸತ್ಯಾಗ್ರಹ ನಡೆಸಲು ಅನುಮತಿ ನೀಡುವಂತೆ ಮನವಿ ಮಾಡಿ ಕಿಸಾನ್​ ಮಹಾಪಂಚಾಯತ್ (ರೈತ ಸಂಘಟನೆ)​ ಸುಪ್ರೀಂಕೋರ್ಟ್​ ಮೆಟ್ಟಿಲೇರಿದೆ.  ದೆಹಲಿಯ ಜಂತರ್​ ಮಂತರ್​​ನಲ್ಲಿ ಪ್ರತಿಭಟನೆ ನಡೆಸಲು ಸಂಯುಕ್ತ ಕಿಸಾನ್​ ಮೋರ್ಚಾ (SKM)ಕ್ಕೆ ಅನುಮತಿ ನೀಡಿದಂತೆ ನಮಗೂ ಕೊಡಲು  ಅಧಿಕಾರಿಗಳಿಗೆ ನಿರ್ದೇಶನ ನೀಡಿ ಎಂದು ಕಿಸಾನ್​ ಪಂಚಾಯತ್​ ಸಂಘಟನೆ ಸುಪ್ರೀಂಕೋರ್ಟ್​​ ಬಳಿ ಕೇಳಿದ್ದು, ಕೋರ್ಟ್​ ಇಂದು ಅರ್ಜಿ ವಿಚಾರಣೆ ನಡೆಸಲಿದೆ.   

ಜಂತರ್​ಮಂತರ್​ನಲ್ಲಿ ನಾವು ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಮುಂದಾಗಿದ್ದೇವೆ. ಇದಕ್ಕೆ ಅನುಮತಿ ನೀಡುವುದರ ಜತೆಗೆ ನಮ್ಮನ್ನು ತಡೆಯದಂತೆ ಕೇಂದ್ರ ಸರ್ಕಾರ, ದೆಹಲಿ ಲೆಫ್ಟಿನೆಂಟ್​ ಗವರ್ನರ್​  ಮತ್ತು ದೆಹಲಿ ಪೊಲೀಸ್​ ಕಮಿಷನರ್​ಗೆ ನಿರ್ದೇಶನ ನೀಡಬೇಕು. ಸುಮಾರು 200 ರೈತರು ಪ್ರತಿಭಟನೆ ನಡೆಸಲು ಅವಕಾಶ ನೀಡಬೇಕು ಎಂದು ಕಿಸಾನ್​ ಮಹಾಪಂಚಾಯತ್​ ತನ್ನ ಅರ್ಜಿಯಲ್ಲಿ ಉಲ್ಲೇಖಿಸಿದೆ.

ಮೂರು ನೂತನ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ಆಗಾಗ ಹೆದ್ದಾರಿಗಳನ್ನು ಬಂದ್​ ಮಾಡುತ್ತಿದ್ದಾರೆ. ಮೊನ್ನೆ ಸೆಪ್ಟೆಂಬರ್​ 27ರಂದು ನಡೆಸಲಾದ ಭಾರತ್​ ಬಂದ್​ನಲ್ಲೂ ಕೂಡ ದೇಶಾದ್ಯಂತ ಹಲವು ಪ್ರಮುಖ ಹೆದ್ದಾರಿಗಳನ್ನು ಬಂದ್​ ಮಾಡಿದ್ದರು. ಅದಾದ ಬಳಿಕ ಸುಪ್ರೀಂಕೋರ್ಟ್ ಈ ಬಗ್ಗೆ ಪ್ರಶ್ನೆ ಮಾಡಿತ್ತು. ಸಾರ್ವಜನಿಕರಿಗಾಗಿ ಇರುವ ಹೆದ್ದಾರಿಗಳನ್ನು ಹೀಗೆ ಬಂದ್​ ಮಾಡುವುದು ಹೇಗೆ ಸಾಧ್ಯ? ಸಾರ್ವಜನಿಕ ಸ್ಥಳದಲ್ಲಿ ಪ್ರತಿಭಟನೆ ಮಾಡುವ ಸಂಬಂಧ ನ್ಯಾಯಾಂಗದ ಕಾನೂನನ್ನು ಸರಿಯಾಗಿ ಕಾರ್ಯಗತಗೊಳಿಸುವುದು ಕಾರ್ಯಾಂಗದ ಪ್ರಮುಖ ಕರ್ತವ್ಯ ಎಂದು ಹೇಳಿತ್ತು.

ಮೂರು ಕೃಷಿ ಕಾಯ್ದೆಗಳ ವಿರುದ್ಧ ಹಲವು ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಸೆ.27ರಂದು ನಡೆಸಲಾದ ಭಾರತ್​ ಬಂದ್​ಗೆ ತಮಿಳುನಾಡು, ಛತ್ತೀಸ್​ಗಡ್​, ಕೇರಳ, ಪಂಜಾಬ್​, ಜಾರ್ಖಂಡ, ಆಂಧ್ರಪ್ರದೇಶ ಬೆಂಬಲ ಸೂಚಿಸಿದ್ದವು. ಕೃಷಿ ಕಾಯ್ದೆಗಳ ಸಂಬಂಧ ನಮ್ಮ ಸಂಕಷ್ಟ ಕೇಳಬೇಕು. ಅವುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಎಂಬುದು ರೈತ ಸಂಘಟನೆಗಳ ಆಗ್ರಹವಾಗಿದೆ. ಆದರೆ ರೈತರ ಪ್ರತಿಭಟನೆಯಿಂದ ಗಡಿ ಭಾಗದಲ್ಲಿ ಹಲವು ವಿಧದ ತೊಂದರೆಗಳು ಎದುರಾಗಿವೆ. ಆಗಾಗ ಪ್ರತಿಭಟನೆ ನೆಪದಲ್ಲಿ ಅವರು ನಡೆಸುವ ಹೆದ್ದಾರಿ ಬಂದ್​ನಿಂದ ಸಾರ್ವಜನಿಕರಿಗೆ ಸಂಕಷ್ಟ ಉಂಡಾಗುತ್ತಿದೆ.

ಇದನ್ನೂ ಓದಿ: ಗುರುತು ಸಿಗದಂತೆ ಬದಲಾದ ಬಿಗ್​ ಬಾಸ್​ ಮಹಿಳಾ ಸ್ಪರ್ಧಿ; ಈ ಪರಿವರ್ತನೆ ನಂಬಲು ಸಾಧ್ಯವೇ?

Team India New Coach: ಕುಂಬ್ಳೆ ಅಲ್ಲ: ಟೀಮ್ ಇಂಡಿಯಾ ಮುಂದಿನ ಕೋಚ್ ಇವರಂತೆ: ಹಿಂಟ್ ಕೊಟ್ಟ ಎಂಎಸ್​ಕೆ ಪ್ರಸಾದ್

Published On - 9:46 am, Fri, 1 October 21

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು