AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರದ ವಿರುದ್ಧ ಮುಂದುವರಿದ ರೈತರ ಆಕ್ರೋಷ

ಹೊಸ ಕೃಷಿ ಕಾನೂನುಗಳನ್ನು ರಾಷ್ಟ್ರಾದ್ಯಂತ ವಿರೋಧಿಸುತ್ತಿರುವ ರೈತರು ಕೇಂದ್ರ ಸರ್ಕಾರ ಸರ್ಕಾರ ಇಂದು ಕರೆದಿದ್ದ ಸಭೆಯನ್ನು ಬಹಿಷ್ಕರಿಸಿ ನವದೆಹಲಿಯ ಕೃಷಿ ಭವನದೆದುರು ಪ್ರತಿಭಟನೆ ನಡೆಸಿದರಲ್ಲದೆ, ಕೃಷಿ ಕಾನೂನಿನ ಪ್ರತಿಗಳನ್ನು ಹರಿದು ಹಾಕಿ ತಮ್ಮ ಆಕ್ರೋಷವನ್ನು ವ್ಯಕ್ತಪಡಿಸಿದರು. ಸುಮಾರು 31 ಕೃಷಿ ಸಂಘಟನೆಗಳನ್ನು ಇಂದು ಮಾತುಕತೆಗೆ ಆಹ್ವಾನಿಸಲಾಗಿತ್ತು. ಒಬ್ಬ ಕೇಂದ್ರ ಸಚಿವನೂ ಸರ್ಕಾರದ ಪರವಾಗಿ ಸಭೆಯಲ್ಲಿ ಭಾಗವಹಿಸಲು ಆಗಮಿಸದೆ ಹೋಗಿದ್ದು ರೈತರ ಕೋಪಕ್ಕೆ ಕಾರಣವಾಗಿತ್ತು. ಮುಷ್ಕರ ನಡೆಸುವಾಗ ರೈತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ವಿಷಯಕ್ಕೆ ಸಂಬಂಧಿಸಿದಂತೆ, ಇಂದಿನ […]

ಕೇಂದ್ರ ಸರ್ಕಾರದ ವಿರುದ್ಧ ಮುಂದುವರಿದ ರೈತರ ಆಕ್ರೋಷ
ಅರುಣ್​ ಕುಮಾರ್​ ಬೆಳ್ಳಿ
|

Updated on: Oct 14, 2020 | 7:39 PM

Share

ಹೊಸ ಕೃಷಿ ಕಾನೂನುಗಳನ್ನು ರಾಷ್ಟ್ರಾದ್ಯಂತ ವಿರೋಧಿಸುತ್ತಿರುವ ರೈತರು ಕೇಂದ್ರ ಸರ್ಕಾರ ಸರ್ಕಾರ ಇಂದು ಕರೆದಿದ್ದ ಸಭೆಯನ್ನು ಬಹಿಷ್ಕರಿಸಿ ನವದೆಹಲಿಯ ಕೃಷಿ ಭವನದೆದುರು ಪ್ರತಿಭಟನೆ ನಡೆಸಿದರಲ್ಲದೆ, ಕೃಷಿ ಕಾನೂನಿನ ಪ್ರತಿಗಳನ್ನು ಹರಿದು ಹಾಕಿ ತಮ್ಮ ಆಕ್ರೋಷವನ್ನು ವ್ಯಕ್ತಪಡಿಸಿದರು. ಸುಮಾರು 31 ಕೃಷಿ ಸಂಘಟನೆಗಳನ್ನು ಇಂದು ಮಾತುಕತೆಗೆ ಆಹ್ವಾನಿಸಲಾಗಿತ್ತು.

ಒಬ್ಬ ಕೇಂದ್ರ ಸಚಿವನೂ ಸರ್ಕಾರದ ಪರವಾಗಿ ಸಭೆಯಲ್ಲಿ ಭಾಗವಹಿಸಲು ಆಗಮಿಸದೆ ಹೋಗಿದ್ದು ರೈತರ ಕೋಪಕ್ಕೆ ಕಾರಣವಾಗಿತ್ತು. ಮುಷ್ಕರ ನಡೆಸುವಾಗ ರೈತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ವಿಷಯಕ್ಕೆ ಸಂಬಂಧಿಸಿದಂತೆ, ಇಂದಿನ ಸಂಪುಟ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತಾಡಿದ ಕೇಂದ್ರ ಮಾಹಿತಿ ಮತ್ತು ಪ್ರಸರಾಂಗ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರು, ರಕ್ಷಣಾ ಸಚಿವ ರಾಜನಾಥ ಸಿಂಗ್, ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಈಗಾಗಲೆ ಕೃಷಿ ಸಂಘಟನೆಗಳೊಂದಿಗೆ ಒಂದು ಸುತ್ತಿನ ಸಭೆ ನಡೆಸಿದ್ದಾರೆಂದು ಹೇಳಿದರು.

‘‘ರೈತರು ಇನ್ನಷ್ಟು ಚರ್ಚೆ ನಡೆಸುವ ಇರಾದೆ ಇಟ್ಟುಕೊಂಡಿದ್ದರೆ, ಸರ್ಕಾರ ಮಾತುಕತೆಗೆ ಮುಕ್ತವಾಗಿದೆ. ಆದರೆ ತೋಮರ್​ಜೀ ಆವರು ಬೇರೆ ಕೆಲಸದಲ್ಲಿ ವ್ಯಸ್ತರಾಗಿದ್ದರಿಂದ ಇವತ್ತಿನ ಸಭೆಯಲ್ಲಿ ಪಾಲ್ಗೊಳ್ಳಲಾಗಲಿಲ್ಲ. ಅವರಿಗೆ ಬಿಡುವು ಸಿಕ್ಕ ಕೂಡಲೇ ಎಲ್ಲ ರೈತ ಸಂಘಟನೆಗಳನ್ನು ಭೇಟಿ ಮಾಡಲಿದ್ದಾರೆ,’’ ಎಂದು ಜಾವಡೇಕರ್ ಹೇಳಿದರು.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ