AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರದ ವಿರುದ್ಧ ಮುಂದುವರಿದ ರೈತರ ಆಕ್ರೋಷ

ಹೊಸ ಕೃಷಿ ಕಾನೂನುಗಳನ್ನು ರಾಷ್ಟ್ರಾದ್ಯಂತ ವಿರೋಧಿಸುತ್ತಿರುವ ರೈತರು ಕೇಂದ್ರ ಸರ್ಕಾರ ಸರ್ಕಾರ ಇಂದು ಕರೆದಿದ್ದ ಸಭೆಯನ್ನು ಬಹಿಷ್ಕರಿಸಿ ನವದೆಹಲಿಯ ಕೃಷಿ ಭವನದೆದುರು ಪ್ರತಿಭಟನೆ ನಡೆಸಿದರಲ್ಲದೆ, ಕೃಷಿ ಕಾನೂನಿನ ಪ್ರತಿಗಳನ್ನು ಹರಿದು ಹಾಕಿ ತಮ್ಮ ಆಕ್ರೋಷವನ್ನು ವ್ಯಕ್ತಪಡಿಸಿದರು. ಸುಮಾರು 31 ಕೃಷಿ ಸಂಘಟನೆಗಳನ್ನು ಇಂದು ಮಾತುಕತೆಗೆ ಆಹ್ವಾನಿಸಲಾಗಿತ್ತು. ಒಬ್ಬ ಕೇಂದ್ರ ಸಚಿವನೂ ಸರ್ಕಾರದ ಪರವಾಗಿ ಸಭೆಯಲ್ಲಿ ಭಾಗವಹಿಸಲು ಆಗಮಿಸದೆ ಹೋಗಿದ್ದು ರೈತರ ಕೋಪಕ್ಕೆ ಕಾರಣವಾಗಿತ್ತು. ಮುಷ್ಕರ ನಡೆಸುವಾಗ ರೈತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ವಿಷಯಕ್ಕೆ ಸಂಬಂಧಿಸಿದಂತೆ, ಇಂದಿನ […]

ಕೇಂದ್ರ ಸರ್ಕಾರದ ವಿರುದ್ಧ ಮುಂದುವರಿದ ರೈತರ ಆಕ್ರೋಷ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Oct 14, 2020 | 7:39 PM

Share

ಹೊಸ ಕೃಷಿ ಕಾನೂನುಗಳನ್ನು ರಾಷ್ಟ್ರಾದ್ಯಂತ ವಿರೋಧಿಸುತ್ತಿರುವ ರೈತರು ಕೇಂದ್ರ ಸರ್ಕಾರ ಸರ್ಕಾರ ಇಂದು ಕರೆದಿದ್ದ ಸಭೆಯನ್ನು ಬಹಿಷ್ಕರಿಸಿ ನವದೆಹಲಿಯ ಕೃಷಿ ಭವನದೆದುರು ಪ್ರತಿಭಟನೆ ನಡೆಸಿದರಲ್ಲದೆ, ಕೃಷಿ ಕಾನೂನಿನ ಪ್ರತಿಗಳನ್ನು ಹರಿದು ಹಾಕಿ ತಮ್ಮ ಆಕ್ರೋಷವನ್ನು ವ್ಯಕ್ತಪಡಿಸಿದರು. ಸುಮಾರು 31 ಕೃಷಿ ಸಂಘಟನೆಗಳನ್ನು ಇಂದು ಮಾತುಕತೆಗೆ ಆಹ್ವಾನಿಸಲಾಗಿತ್ತು.

ಒಬ್ಬ ಕೇಂದ್ರ ಸಚಿವನೂ ಸರ್ಕಾರದ ಪರವಾಗಿ ಸಭೆಯಲ್ಲಿ ಭಾಗವಹಿಸಲು ಆಗಮಿಸದೆ ಹೋಗಿದ್ದು ರೈತರ ಕೋಪಕ್ಕೆ ಕಾರಣವಾಗಿತ್ತು. ಮುಷ್ಕರ ನಡೆಸುವಾಗ ರೈತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ವಿಷಯಕ್ಕೆ ಸಂಬಂಧಿಸಿದಂತೆ, ಇಂದಿನ ಸಂಪುಟ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತಾಡಿದ ಕೇಂದ್ರ ಮಾಹಿತಿ ಮತ್ತು ಪ್ರಸರಾಂಗ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರು, ರಕ್ಷಣಾ ಸಚಿವ ರಾಜನಾಥ ಸಿಂಗ್, ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಈಗಾಗಲೆ ಕೃಷಿ ಸಂಘಟನೆಗಳೊಂದಿಗೆ ಒಂದು ಸುತ್ತಿನ ಸಭೆ ನಡೆಸಿದ್ದಾರೆಂದು ಹೇಳಿದರು.

‘‘ರೈತರು ಇನ್ನಷ್ಟು ಚರ್ಚೆ ನಡೆಸುವ ಇರಾದೆ ಇಟ್ಟುಕೊಂಡಿದ್ದರೆ, ಸರ್ಕಾರ ಮಾತುಕತೆಗೆ ಮುಕ್ತವಾಗಿದೆ. ಆದರೆ ತೋಮರ್​ಜೀ ಆವರು ಬೇರೆ ಕೆಲಸದಲ್ಲಿ ವ್ಯಸ್ತರಾಗಿದ್ದರಿಂದ ಇವತ್ತಿನ ಸಭೆಯಲ್ಲಿ ಪಾಲ್ಗೊಳ್ಳಲಾಗಲಿಲ್ಲ. ಅವರಿಗೆ ಬಿಡುವು ಸಿಕ್ಕ ಕೂಡಲೇ ಎಲ್ಲ ರೈತ ಸಂಘಟನೆಗಳನ್ನು ಭೇಟಿ ಮಾಡಲಿದ್ದಾರೆ,’’ ಎಂದು ಜಾವಡೇಕರ್ ಹೇಳಿದರು.

Follow Us
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್