AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರದ ಮನವೊಲಿಸಲು ಯಜ್ಞದ ಮೊರೆಹೋದ ಅನ್ನದಾತರು.. ಬಿಜೆಪಿ ನಾಯಕರಿಗೆ ಅವರದ್ದೇ ಭಾಷೆಯಲ್ಲಿ ತಿರುಗೇಟು?

ಪ್ರತಿಭಟನೆಯ ಜೊತೆಜೊತೆಗೆ ವಿಭಿನ್ನ ಹಾದಿ ಹಿಡಿದಿರುವ ರೈತರು ಮಾಜಿ ಪ್ರಧಾನಮಂತ್ರಿ ಚೌಧರಿ ಚರಣ್​ ಸಿಂಗ್​ ಅವರ ಜನ್ಮದಿನ ಮತ್ತು ಕೃಷಿ ದಿನವಾಗಿರುವ ಇಂದು ಉತ್ತರಪ್ರದೇಶದ ಸಂಭಾಲ್​ ಜಿಲ್ಲೆಯಲ್ಲಿ ಯಜ್ಞ ಆಯೋಜಿಸುವ ಮೂಲಕ ಕೇಂದ್ರ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದ್ದಾರೆ.

ಕೇಂದ್ರ ಸರ್ಕಾರದ ಮನವೊಲಿಸಲು ಯಜ್ಞದ ಮೊರೆಹೋದ ಅನ್ನದಾತರು.. ಬಿಜೆಪಿ ನಾಯಕರಿಗೆ ಅವರದ್ದೇ ಭಾಷೆಯಲ್ಲಿ ತಿರುಗೇಟು?
ಗಾಜಿಯಾಬಾದ್​ ಬಳಿ ಡಿ.23ರಂದು (ನಿನ್ನೆ)ಸಾಂಕೇತಿಕ ಹೋಮ ನಡೆಸಿದ್ದ ರೈತರು.
Skanda
| Edited By: |

Updated on: Dec 23, 2020 | 10:14 PM

Share

ಲಖನೌ: ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಆರಂಭವಾಗಿ ಸುಮಾರು ಒಂದು ತಿಂಗಳಾಗುತ್ತಿದೆ. ಇದೀಗ ಪ್ರತಿಭಟನೆಯ ಜೊತೆಜೊತೆಗೆ ವಿಭಿನ್ನ ಹಾದಿ ಹಿಡಿದಿರುವ ರೈತರು ಮಾಜಿ ಪ್ರಧಾನಮಂತ್ರಿ ಚೌಧರಿ ಚರಣ್​ ಸಿಂಗ್​ ಅವರ ಜನ್ಮದಿನ ಮತ್ತು ಕೃಷಿ ದಿನವಾಗಿರುವ ಇಂದು ಉತ್ತರಪ್ರದೇಶದ ಸಂಭಾಲ್​ ಜಿಲ್ಲೆಯಲ್ಲಿ ಯಜ್ಞ ಆಯೋಜಿಸುವ ಮೂಲಕ ಕೇಂದ್ರ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಭಾರತೀಯ ಕಿಸಾನ್ ಯೂನಿಯನ್​ (ಅಸ್ಲಿ) ವಿಭಾಗೀಯ ಅಧ್ಯಕ್ಷ ಸಂಜಯ್​ ಗಾಂಧಿ, ಸರ್ಕಾರಕ್ಕೆ ಬುದ್ಧಿ ಮತ್ತು ಶುದ್ಧಿ ಲಭಿಸಲಿ ಎಂಬ ಉದ್ದೇಶದಿಂದ ಯಜ್ಞ ಆಯೋಜಿಸಿದ್ದೇವೆ. ಈ ಮೂಲಕ ನೂತನ ಕೃಷಿ ಕಾಯ್ದೆಯ ಬಗ್ಗೆ ಸರ್ಕಾರಕ್ಕೆ ಮನಃಪರಿವರ್ತನೆ ಆಗಲಿ ಎಂದು ಪ್ರಾರ್ಥಿಸಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ.

ಸರ್ಕಾರ ರೈತರ ಬೇಡಿಕೆಯನ್ನು ಆಲಿಸಿಕೊಳ್ಳಲು ತಯಾರಿಲ್ಲ. ಈ ಕಾರಣದಿಂದಲೇ ನಮ್ಮ ಪ್ರತಿಭಟನೆ ಈಗ ಚಳವಳಿಯಾಗಿ ರೂಪುಗೊಂಡಿದೆ. ಇನ್ನಾದರೂ ಸರ್ಕಾರ ರೈತರತ್ತ ಗಮನ ನೀಡುವಂತೆ ಆಶಿಸುತ್ತೇವೆ ಎಂದು ಭಾರತೀಯ ಕಿಸಾನ್ ಯೂನಿಯನ್​ (ಅಸ್ಲಿ) ಸಂಭಾಲ್​ ಜಿಲ್ಲಾಧ್ಯಕ್ಷ ರಾಜ್​ಪಾಲ್​ ಸಿಂಗ್ ಹೇಳಿದ್ದಾರೆ.

ಯಜ್ಞಯಾಗ, ಹೋಮಹವನಗಳ ಮೂಲಕ ಸದ್ದು ಮಾಡುವ ಬಿಜೆಪಿ ಪಕ್ಷದ ನಾಯಕರ ಮನಗೆಲ್ಲಲು ರೈತರು ಅವರದ್ದೇ ಹಾದಿ ಹಿಡಿದಿವುದು ಕುತೂಹಲಕಾರಿ. ಗಾಜಿಯಾಬಾದ್​ ಬಳಿಯೂ ನಿನ್ನೆ ರೈತರು ಸಾಂಕೇತವಾಗಿ ಹೋಮ ಮಾಡುವ ಮೂಲಕ ಗಮನಸೆಳೆದಿದ್ದರು.

National Farmers Day 2020 | ಹೊಲದತ್ತ ಹೆಜ್ಜೆ ಹಾಕಲು ಭಯವೇಕೆ? ಮಣ್ಣಲ್ಲವೇ ನಮ್ಮನ್ನೆಲ್ಲಾ ಪೊರೆವ ತಾಯಿ..

Follow Us
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ