AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರದ ಮನವೊಲಿಸಲು ಯಜ್ಞದ ಮೊರೆಹೋದ ಅನ್ನದಾತರು.. ಬಿಜೆಪಿ ನಾಯಕರಿಗೆ ಅವರದ್ದೇ ಭಾಷೆಯಲ್ಲಿ ತಿರುಗೇಟು?

ಪ್ರತಿಭಟನೆಯ ಜೊತೆಜೊತೆಗೆ ವಿಭಿನ್ನ ಹಾದಿ ಹಿಡಿದಿರುವ ರೈತರು ಮಾಜಿ ಪ್ರಧಾನಮಂತ್ರಿ ಚೌಧರಿ ಚರಣ್​ ಸಿಂಗ್​ ಅವರ ಜನ್ಮದಿನ ಮತ್ತು ಕೃಷಿ ದಿನವಾಗಿರುವ ಇಂದು ಉತ್ತರಪ್ರದೇಶದ ಸಂಭಾಲ್​ ಜಿಲ್ಲೆಯಲ್ಲಿ ಯಜ್ಞ ಆಯೋಜಿಸುವ ಮೂಲಕ ಕೇಂದ್ರ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದ್ದಾರೆ.

ಕೇಂದ್ರ ಸರ್ಕಾರದ ಮನವೊಲಿಸಲು ಯಜ್ಞದ ಮೊರೆಹೋದ ಅನ್ನದಾತರು.. ಬಿಜೆಪಿ ನಾಯಕರಿಗೆ ಅವರದ್ದೇ ಭಾಷೆಯಲ್ಲಿ ತಿರುಗೇಟು?
ಗಾಜಿಯಾಬಾದ್​ ಬಳಿ ಡಿ.23ರಂದು (ನಿನ್ನೆ)ಸಾಂಕೇತಿಕ ಹೋಮ ನಡೆಸಿದ್ದ ರೈತರು.
Skanda
| Edited By: |

Updated on: Dec 23, 2020 | 10:14 PM

Share

ಲಖನೌ: ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಆರಂಭವಾಗಿ ಸುಮಾರು ಒಂದು ತಿಂಗಳಾಗುತ್ತಿದೆ. ಇದೀಗ ಪ್ರತಿಭಟನೆಯ ಜೊತೆಜೊತೆಗೆ ವಿಭಿನ್ನ ಹಾದಿ ಹಿಡಿದಿರುವ ರೈತರು ಮಾಜಿ ಪ್ರಧಾನಮಂತ್ರಿ ಚೌಧರಿ ಚರಣ್​ ಸಿಂಗ್​ ಅವರ ಜನ್ಮದಿನ ಮತ್ತು ಕೃಷಿ ದಿನವಾಗಿರುವ ಇಂದು ಉತ್ತರಪ್ರದೇಶದ ಸಂಭಾಲ್​ ಜಿಲ್ಲೆಯಲ್ಲಿ ಯಜ್ಞ ಆಯೋಜಿಸುವ ಮೂಲಕ ಕೇಂದ್ರ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಭಾರತೀಯ ಕಿಸಾನ್ ಯೂನಿಯನ್​ (ಅಸ್ಲಿ) ವಿಭಾಗೀಯ ಅಧ್ಯಕ್ಷ ಸಂಜಯ್​ ಗಾಂಧಿ, ಸರ್ಕಾರಕ್ಕೆ ಬುದ್ಧಿ ಮತ್ತು ಶುದ್ಧಿ ಲಭಿಸಲಿ ಎಂಬ ಉದ್ದೇಶದಿಂದ ಯಜ್ಞ ಆಯೋಜಿಸಿದ್ದೇವೆ. ಈ ಮೂಲಕ ನೂತನ ಕೃಷಿ ಕಾಯ್ದೆಯ ಬಗ್ಗೆ ಸರ್ಕಾರಕ್ಕೆ ಮನಃಪರಿವರ್ತನೆ ಆಗಲಿ ಎಂದು ಪ್ರಾರ್ಥಿಸಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ.

ಸರ್ಕಾರ ರೈತರ ಬೇಡಿಕೆಯನ್ನು ಆಲಿಸಿಕೊಳ್ಳಲು ತಯಾರಿಲ್ಲ. ಈ ಕಾರಣದಿಂದಲೇ ನಮ್ಮ ಪ್ರತಿಭಟನೆ ಈಗ ಚಳವಳಿಯಾಗಿ ರೂಪುಗೊಂಡಿದೆ. ಇನ್ನಾದರೂ ಸರ್ಕಾರ ರೈತರತ್ತ ಗಮನ ನೀಡುವಂತೆ ಆಶಿಸುತ್ತೇವೆ ಎಂದು ಭಾರತೀಯ ಕಿಸಾನ್ ಯೂನಿಯನ್​ (ಅಸ್ಲಿ) ಸಂಭಾಲ್​ ಜಿಲ್ಲಾಧ್ಯಕ್ಷ ರಾಜ್​ಪಾಲ್​ ಸಿಂಗ್ ಹೇಳಿದ್ದಾರೆ.

ಯಜ್ಞಯಾಗ, ಹೋಮಹವನಗಳ ಮೂಲಕ ಸದ್ದು ಮಾಡುವ ಬಿಜೆಪಿ ಪಕ್ಷದ ನಾಯಕರ ಮನಗೆಲ್ಲಲು ರೈತರು ಅವರದ್ದೇ ಹಾದಿ ಹಿಡಿದಿವುದು ಕುತೂಹಲಕಾರಿ. ಗಾಜಿಯಾಬಾದ್​ ಬಳಿಯೂ ನಿನ್ನೆ ರೈತರು ಸಾಂಕೇತವಾಗಿ ಹೋಮ ಮಾಡುವ ಮೂಲಕ ಗಮನಸೆಳೆದಿದ್ದರು.

National Farmers Day 2020 | ಹೊಲದತ್ತ ಹೆಜ್ಜೆ ಹಾಕಲು ಭಯವೇಕೆ? ಮಣ್ಣಲ್ಲವೇ ನಮ್ಮನ್ನೆಲ್ಲಾ ಪೊರೆವ ತಾಯಿ..

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!