AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರದ ಮನವೊಲಿಸಲು ಯಜ್ಞದ ಮೊರೆಹೋದ ಅನ್ನದಾತರು.. ಬಿಜೆಪಿ ನಾಯಕರಿಗೆ ಅವರದ್ದೇ ಭಾಷೆಯಲ್ಲಿ ತಿರುಗೇಟು?

ಪ್ರತಿಭಟನೆಯ ಜೊತೆಜೊತೆಗೆ ವಿಭಿನ್ನ ಹಾದಿ ಹಿಡಿದಿರುವ ರೈತರು ಮಾಜಿ ಪ್ರಧಾನಮಂತ್ರಿ ಚೌಧರಿ ಚರಣ್​ ಸಿಂಗ್​ ಅವರ ಜನ್ಮದಿನ ಮತ್ತು ಕೃಷಿ ದಿನವಾಗಿರುವ ಇಂದು ಉತ್ತರಪ್ರದೇಶದ ಸಂಭಾಲ್​ ಜಿಲ್ಲೆಯಲ್ಲಿ ಯಜ್ಞ ಆಯೋಜಿಸುವ ಮೂಲಕ ಕೇಂದ್ರ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದ್ದಾರೆ.

ಕೇಂದ್ರ ಸರ್ಕಾರದ ಮನವೊಲಿಸಲು ಯಜ್ಞದ ಮೊರೆಹೋದ ಅನ್ನದಾತರು.. ಬಿಜೆಪಿ ನಾಯಕರಿಗೆ ಅವರದ್ದೇ ಭಾಷೆಯಲ್ಲಿ ತಿರುಗೇಟು?
ಗಾಜಿಯಾಬಾದ್​ ಬಳಿ ಡಿ.23ರಂದು (ನಿನ್ನೆ)ಸಾಂಕೇತಿಕ ಹೋಮ ನಡೆಸಿದ್ದ ರೈತರು.
Skanda
| Edited By: |

Updated on: Dec 23, 2020 | 10:14 PM

Share

ಲಖನೌ: ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಆರಂಭವಾಗಿ ಸುಮಾರು ಒಂದು ತಿಂಗಳಾಗುತ್ತಿದೆ. ಇದೀಗ ಪ್ರತಿಭಟನೆಯ ಜೊತೆಜೊತೆಗೆ ವಿಭಿನ್ನ ಹಾದಿ ಹಿಡಿದಿರುವ ರೈತರು ಮಾಜಿ ಪ್ರಧಾನಮಂತ್ರಿ ಚೌಧರಿ ಚರಣ್​ ಸಿಂಗ್​ ಅವರ ಜನ್ಮದಿನ ಮತ್ತು ಕೃಷಿ ದಿನವಾಗಿರುವ ಇಂದು ಉತ್ತರಪ್ರದೇಶದ ಸಂಭಾಲ್​ ಜಿಲ್ಲೆಯಲ್ಲಿ ಯಜ್ಞ ಆಯೋಜಿಸುವ ಮೂಲಕ ಕೇಂದ್ರ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಭಾರತೀಯ ಕಿಸಾನ್ ಯೂನಿಯನ್​ (ಅಸ್ಲಿ) ವಿಭಾಗೀಯ ಅಧ್ಯಕ್ಷ ಸಂಜಯ್​ ಗಾಂಧಿ, ಸರ್ಕಾರಕ್ಕೆ ಬುದ್ಧಿ ಮತ್ತು ಶುದ್ಧಿ ಲಭಿಸಲಿ ಎಂಬ ಉದ್ದೇಶದಿಂದ ಯಜ್ಞ ಆಯೋಜಿಸಿದ್ದೇವೆ. ಈ ಮೂಲಕ ನೂತನ ಕೃಷಿ ಕಾಯ್ದೆಯ ಬಗ್ಗೆ ಸರ್ಕಾರಕ್ಕೆ ಮನಃಪರಿವರ್ತನೆ ಆಗಲಿ ಎಂದು ಪ್ರಾರ್ಥಿಸಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ.

ಸರ್ಕಾರ ರೈತರ ಬೇಡಿಕೆಯನ್ನು ಆಲಿಸಿಕೊಳ್ಳಲು ತಯಾರಿಲ್ಲ. ಈ ಕಾರಣದಿಂದಲೇ ನಮ್ಮ ಪ್ರತಿಭಟನೆ ಈಗ ಚಳವಳಿಯಾಗಿ ರೂಪುಗೊಂಡಿದೆ. ಇನ್ನಾದರೂ ಸರ್ಕಾರ ರೈತರತ್ತ ಗಮನ ನೀಡುವಂತೆ ಆಶಿಸುತ್ತೇವೆ ಎಂದು ಭಾರತೀಯ ಕಿಸಾನ್ ಯೂನಿಯನ್​ (ಅಸ್ಲಿ) ಸಂಭಾಲ್​ ಜಿಲ್ಲಾಧ್ಯಕ್ಷ ರಾಜ್​ಪಾಲ್​ ಸಿಂಗ್ ಹೇಳಿದ್ದಾರೆ.

ಯಜ್ಞಯಾಗ, ಹೋಮಹವನಗಳ ಮೂಲಕ ಸದ್ದು ಮಾಡುವ ಬಿಜೆಪಿ ಪಕ್ಷದ ನಾಯಕರ ಮನಗೆಲ್ಲಲು ರೈತರು ಅವರದ್ದೇ ಹಾದಿ ಹಿಡಿದಿವುದು ಕುತೂಹಲಕಾರಿ. ಗಾಜಿಯಾಬಾದ್​ ಬಳಿಯೂ ನಿನ್ನೆ ರೈತರು ಸಾಂಕೇತವಾಗಿ ಹೋಮ ಮಾಡುವ ಮೂಲಕ ಗಮನಸೆಳೆದಿದ್ದರು.

National Farmers Day 2020 | ಹೊಲದತ್ತ ಹೆಜ್ಜೆ ಹಾಕಲು ಭಯವೇಕೆ? ಮಣ್ಣಲ್ಲವೇ ನಮ್ಮನ್ನೆಲ್ಲಾ ಪೊರೆವ ತಾಯಿ..

Follow Us
Skanda
Skanda
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ