AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರದ ಮನವೊಲಿಸಲು ಯಜ್ಞದ ಮೊರೆಹೋದ ಅನ್ನದಾತರು.. ಬಿಜೆಪಿ ನಾಯಕರಿಗೆ ಅವರದ್ದೇ ಭಾಷೆಯಲ್ಲಿ ತಿರುಗೇಟು?

ಪ್ರತಿಭಟನೆಯ ಜೊತೆಜೊತೆಗೆ ವಿಭಿನ್ನ ಹಾದಿ ಹಿಡಿದಿರುವ ರೈತರು ಮಾಜಿ ಪ್ರಧಾನಮಂತ್ರಿ ಚೌಧರಿ ಚರಣ್​ ಸಿಂಗ್​ ಅವರ ಜನ್ಮದಿನ ಮತ್ತು ಕೃಷಿ ದಿನವಾಗಿರುವ ಇಂದು ಉತ್ತರಪ್ರದೇಶದ ಸಂಭಾಲ್​ ಜಿಲ್ಲೆಯಲ್ಲಿ ಯಜ್ಞ ಆಯೋಜಿಸುವ ಮೂಲಕ ಕೇಂದ್ರ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದ್ದಾರೆ.

ಕೇಂದ್ರ ಸರ್ಕಾರದ ಮನವೊಲಿಸಲು ಯಜ್ಞದ ಮೊರೆಹೋದ ಅನ್ನದಾತರು.. ಬಿಜೆಪಿ ನಾಯಕರಿಗೆ ಅವರದ್ದೇ ಭಾಷೆಯಲ್ಲಿ ತಿರುಗೇಟು?
ಗಾಜಿಯಾಬಾದ್​ ಬಳಿ ಡಿ.23ರಂದು (ನಿನ್ನೆ)ಸಾಂಕೇತಿಕ ಹೋಮ ನಡೆಸಿದ್ದ ರೈತರು.
Skanda
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Dec 23, 2020 | 10:14 PM

Share

ಲಖನೌ: ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಆರಂಭವಾಗಿ ಸುಮಾರು ಒಂದು ತಿಂಗಳಾಗುತ್ತಿದೆ. ಇದೀಗ ಪ್ರತಿಭಟನೆಯ ಜೊತೆಜೊತೆಗೆ ವಿಭಿನ್ನ ಹಾದಿ ಹಿಡಿದಿರುವ ರೈತರು ಮಾಜಿ ಪ್ರಧಾನಮಂತ್ರಿ ಚೌಧರಿ ಚರಣ್​ ಸಿಂಗ್​ ಅವರ ಜನ್ಮದಿನ ಮತ್ತು ಕೃಷಿ ದಿನವಾಗಿರುವ ಇಂದು ಉತ್ತರಪ್ರದೇಶದ ಸಂಭಾಲ್​ ಜಿಲ್ಲೆಯಲ್ಲಿ ಯಜ್ಞ ಆಯೋಜಿಸುವ ಮೂಲಕ ಕೇಂದ್ರ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಭಾರತೀಯ ಕಿಸಾನ್ ಯೂನಿಯನ್​ (ಅಸ್ಲಿ) ವಿಭಾಗೀಯ ಅಧ್ಯಕ್ಷ ಸಂಜಯ್​ ಗಾಂಧಿ, ಸರ್ಕಾರಕ್ಕೆ ಬುದ್ಧಿ ಮತ್ತು ಶುದ್ಧಿ ಲಭಿಸಲಿ ಎಂಬ ಉದ್ದೇಶದಿಂದ ಯಜ್ಞ ಆಯೋಜಿಸಿದ್ದೇವೆ. ಈ ಮೂಲಕ ನೂತನ ಕೃಷಿ ಕಾಯ್ದೆಯ ಬಗ್ಗೆ ಸರ್ಕಾರಕ್ಕೆ ಮನಃಪರಿವರ್ತನೆ ಆಗಲಿ ಎಂದು ಪ್ರಾರ್ಥಿಸಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ.

ಸರ್ಕಾರ ರೈತರ ಬೇಡಿಕೆಯನ್ನು ಆಲಿಸಿಕೊಳ್ಳಲು ತಯಾರಿಲ್ಲ. ಈ ಕಾರಣದಿಂದಲೇ ನಮ್ಮ ಪ್ರತಿಭಟನೆ ಈಗ ಚಳವಳಿಯಾಗಿ ರೂಪುಗೊಂಡಿದೆ. ಇನ್ನಾದರೂ ಸರ್ಕಾರ ರೈತರತ್ತ ಗಮನ ನೀಡುವಂತೆ ಆಶಿಸುತ್ತೇವೆ ಎಂದು ಭಾರತೀಯ ಕಿಸಾನ್ ಯೂನಿಯನ್​ (ಅಸ್ಲಿ) ಸಂಭಾಲ್​ ಜಿಲ್ಲಾಧ್ಯಕ್ಷ ರಾಜ್​ಪಾಲ್​ ಸಿಂಗ್ ಹೇಳಿದ್ದಾರೆ.

ಯಜ್ಞಯಾಗ, ಹೋಮಹವನಗಳ ಮೂಲಕ ಸದ್ದು ಮಾಡುವ ಬಿಜೆಪಿ ಪಕ್ಷದ ನಾಯಕರ ಮನಗೆಲ್ಲಲು ರೈತರು ಅವರದ್ದೇ ಹಾದಿ ಹಿಡಿದಿವುದು ಕುತೂಹಲಕಾರಿ. ಗಾಜಿಯಾಬಾದ್​ ಬಳಿಯೂ ನಿನ್ನೆ ರೈತರು ಸಾಂಕೇತವಾಗಿ ಹೋಮ ಮಾಡುವ ಮೂಲಕ ಗಮನಸೆಳೆದಿದ್ದರು.

National Farmers Day 2020 | ಹೊಲದತ್ತ ಹೆಜ್ಜೆ ಹಾಕಲು ಭಯವೇಕೆ? ಮಣ್ಣಲ್ಲವೇ ನಮ್ಮನ್ನೆಲ್ಲಾ ಪೊರೆವ ತಾಯಿ..

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ