AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Farmers Protest: ಭಾರೀ ಭದ್ರತೆಯ ನಡುವೆ ದೆಹಲಿಯ ಜಂತರ್ ಮಂತರ್​ನಲ್ಲಿ ರೈತರ ಪ್ರತಿಭಟನೆ, ಕರ್ನಾಟಕದಿಂದಲ್ಲೂ ಭಾಗಿ

ನಿರುದ್ಯೋಗದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ಭಾನುವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆಯ ನಡುವೆ ಜಮಾಯಿಸಿದರು. ಕರ್ನಾಟಕದಿಂದಲ್ಲೂ ರೈರು ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

Farmers Protest: ಭಾರೀ ಭದ್ರತೆಯ ನಡುವೆ ದೆಹಲಿಯ ಜಂತರ್ ಮಂತರ್​ನಲ್ಲಿ ರೈತರ ಪ್ರತಿಭಟನೆ, ಕರ್ನಾಟಕದಿಂದಲ್ಲೂ ಭಾಗಿ
Farmers' protest
TV9 Web
| Edited By: |

Updated on: Aug 22, 2022 | 12:48 PM

Share

ದೆಹಲಿ: ನಿರುದ್ಯೋಗದ ವಿರುದ್ಧ ದೇಶಾದ್ಯಂತ ರೈತರು ಸೋಮವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದರು. ಸಂಯುಕ್ತ ಕಿಸಾನ್ ಮೋರ್ಚಾ (SKM) ಮತ್ತು ಇತರ ರೈತ ಗುಂಪುಗಳು ಪ್ರತಿಭಟನೆಗೆ ಕರೆ ನೀಡಿದ ನಂತರ ದೆಹಲಿ ಗಡಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಯಿತು. ಪ್ರತಿಭಟನೆಗೆ ಅನುಮತಿ ನೀಡಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದು, ದೆಹಲಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಪ್ರತಿಭಟನೆಯನ್ನು ಆಯೋಜಿಸಲು ನಮ್ಮಿಂದ ಅನುಮತಿ ಕೇಳಲಾಗಿತ್ತು ಆದರೆ ಜನಸಂದಣಿಯಿಂದಾಗಿ ಅನುಮತಿ ನೀಡಲಾಗಿಲ್ಲ ಎಂದು ನವದೆಹಲಿಯ ಉಪ ಪೊಲೀಸ್ ಆಯುಕ್ತ ಅಮೃತ ಗುಗುಲೋತ್ ಇಂಡಿಯಾ ಟುಡೇಗೆ ತಿಳಿಸಿದರು. ಪೊಲೀಸ್ ಸಿಬ್ಬಂದಿ ಎನ್ಎಚ್ 48 ನಲ್ಲಿ ಎಲ್ಲಾ ವಾಹನಗಳ ಮೇಲೆ ತಪಾಸಣೆ ಮತ್ತು ನಿಗಾ ವಹಿಸುತ್ತಿದ್ದಾರೆ. ಹರಿಯಾಣ ಮತ್ತು ರಾಜಸ್ಥಾನದಿಂದ ಬರುವ ವಾಹನಗಳನ್ನೂ ನಿಲ್ಲಿಸಲಾಗುತ್ತಿದೆ.

ಕರ್ನಾಟಕದ ರೈತರು ಭಾಗಿ

ದೆಹಲಿಯಲ್ಲಿ ರೈತ ಮಹಾಪಂಚಾಯತ್​ನಲ್ಲಿ ರಾಜ್ಯದ ರೈತರು ಭಾಗಿಯಾಗಿದ್ದಾರೆ. ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರೈತರು ಭಾಗಿಯಾಗಿದ್ದಾರೆ. ಬೆಂಬಲ ಬೆಲೆ ನೀತಿ ಜಾರಿಗೆ ತರುವಂತೆ ರೈತರ ಒತ್ತಾಯ ಮಾಡಿದ್ದಾರೆ. ಜಂತರ್​​ಮಂತರ್​​ನಲ್ಲಿ ನಡೆಯುತ್ತಿರುವ ಮಹಾಪಂಚಾಯತ್​ಗೆ ದೇಶದ ವಿವಿಧ ರಾಜ್ಯಗಳಿಂದ ರೈತರು ಆಗಮಿಸುತ್ತಿದ್ದಾರೆ.

ಇದನ್ನೂ ಓದಿ
Image
Sanjay Raut ಶಿವಸೇನಾ ನಾಯಕ ಸಂಜಯ್ ರಾವತ್​​ ನ್ಯಾಯಾಂಗ ಬಂಧನ ಸೆ.5ರವರೆಗೆ ವಿಸ್ತರಣೆ
Image
ಕೇರಳದಲ್ಲಿ ಸಂಗೀತ ಕಾರ್ಯಕ್ರಮದ ವೇಳೆ ಘರ್ಷಣೆ; 70ಕ್ಕೂ ಹೆಚ್ಚು ಜನರಿಗೆ ಗಾಯ
Image
Big News: ಆಸ್ಪತ್ರೆಗೆ ನುಗ್ಗಿ ವೈದ್ಯರ ಮುಖಕ್ಕೆ ಹೊಡೆದ ಮಿಜೋರಾಂ ಸಿಎಂ ಮಗಳು; ವಿಡಿಯೋಗೆ ಭಾರೀ ಆಕ್ರೋಶ
Image
BIG NEWS: ಬಿಜೆಪಿಯಿಂದ ನನಗೆ ಆಫರ್ ಬಂದಿದೆ, ಗಂಭೀರ ಆರೋಪ ಮಾಡಿದ ಮನೀಶ್ ಸಿಸೋಡಿಯಾ

ಎಂಎಸ್‌ಪಿ ಜಾರಿ ಮಾಡುವುದಾಗಿ ಹೇಳಿ ಕೇಂದ್ರ ಸರ್ಕಾರ ಮೋಸ ಮಾಡುತ್ತಿದೆ ಎಂದು ದೆಹಲಿಯಲ್ಲಿ ರೈತ ನಾಯಕ ಕುರಬೂರು ಶಾಂತಕುಮಾರ್ ಹೇಳಿದ್ದಾರೆ. ಸಮಿತಿಯಲ್ಲಿ ತನ್ನದೇ ಜನರನ್ನು ನಿಯೋಜಿಸಿ ಯಾಮಾರಿಸುತ್ತಿದೆ, ದೇಶದಲ್ಲಿನ ಕೋಟ್ಯಾಧಿಪತಿ ಉದ್ಯಮಿಗಳ ಸಾಲಮನ್ನಾ ಆಗುತ್ತಿದೆ.  ನೀಡಿದ ಭರವಸೆಯಂತೆ ಕೂಡಲೇ ಎಂಎಸ್‌ಪಿ ಜಾರಿಯಾಗಬೇಕು, ಅನ್ನದಾತರ ಸಾಲಮನ್ನಾ ಆಗಬೇಕು. ಇಲ್ಲದಿದ್ದರೆ ಈ ಹಿಂದೆ ನಡೆಸಿದಂತೆ ಪ್ರತಿಭಟನೆ ನಡೆಸಲಾಗುವುದು, ಕೇಂದ್ರದ ನರೇಂದ್ರ ಮೋದಿ ಸರ್ಕಾರ ಈಗಲೇ ಎಚ್ಚೆತ್ತುಕೊಳ್ಳಬೇಕು ಎಂದು ರೈತ ನಾಯಕ ಕುರಬೂರು ಶಾಂತಕುಮಾರ್ ಎಚ್ಚರಿಕೆ ನೀಡಿದದ್ದಾರೆ.

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ