AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rakesh Tikait: ಗುಜರಾತ್ ಜನರ ಸ್ವಾತಂತ್ರ್ಯವನ್ನು ಬಿಜೆಪಿ ಸರ್ಕಾರಗಳು ಕಸಿದುಕೊಂಡಿವೆ; ರಾಕೇಶ್ ಟಿಕಾಯತ್

ದೇಶದ ಜನರು ಸ್ವತಂತ್ರವಾಗಿ ತಮಗೆ ಅನಿಸಿದ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಸ್ವಾತಂತ್ರ್ಯ ಪಡೆದರೂ ಗುಜರಾತ್​ನ ಜನತೆ ಮಾತ್ರ ಈ ಅವಕಾಶದಿಂದ ವಂಚಿತವಾಗಿದೆ.

Rakesh Tikait: ಗುಜರಾತ್ ಜನರ ಸ್ವಾತಂತ್ರ್ಯವನ್ನು ಬಿಜೆಪಿ ಸರ್ಕಾರಗಳು ಕಸಿದುಕೊಂಡಿವೆ; ರಾಕೇಶ್ ಟಿಕಾಯತ್
ರಾಕೇಶ್ ಟಿಕಾಯತ್
guruganesh bhat
| Edited By: |

Updated on:Feb 12, 2021 | 8:16 PM

Share

ದೆಹಲಿ: ಗುಜರಾತ್​ನ ಜನತೆ ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟದಲ್ಲಿ ಪಾಲ್ಗೊಳ್ಳದಂತೆ ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಡೆದಿವೆ ಎಂದು ರೈತ ನಾಯಕ ರಾಕೇಶ್ ಟಿಕಾಯತ್ (Rakesh Tikait) ಕಿಸಾನ್ ಮಹಾಪಂಚಾಯತ್​ನಲ್ಲಿ ಹೇಳಿದ್ದಾರೆ. ದೇಶದ ಜನರು ಸ್ವತಂತ್ರವಾಗಿ ತಮಗೆ ಅನಿಸಿದ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಸ್ವಾತಂತ್ರ್ಯ ಪಡೆದರೂ ಗುಜರಾತ್​ನ ಜನತೆ ಮಾತ್ರ ಈ ಅವಕಾಶದಿಂದ ವಂಚಿತವಾಗಿದೆ. ಹೀಗಾಗಿ ಗುಜರಾತ್​ಗೆ ತೆರಳಿ ಚಳುವಳಿ ಆರಂಭಿಸುವುದಾಗಿ ಅವರು ಘೋಷಿಸಿದ್ದಾರೆ.

ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ ಪ್ರತಿಭಟನೆ ನಿಲ್ಲಿಸಿ ಮನೆಗೆ ಮರಳುವುದಿಲ್ಲ ಎಂದು ರೈತ ನಾಯಕ ರಾಕೇಶ್ ಟಿಕಾಯತ್ ಮತ್ತೊಮ್ಮೆ ಘರ್ಜಿಸಿದ್ದಾರೆ. ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವವರೆಗೂ ಸಿಂಗು ಗಡಿಯೇ ನನ್ನ ಕಚೇರಿಯಾಗಲಿದೆ. ಸರ್ಕಾರ ಹೇಳಿದ ದಿನವೇ ಮಾತುಕತೆ ನಡೆಸಲು ಸಿದ್ಧವಿರುವುದಾಗಿಯೂ ಅವರು ತಿಳಿಸಿದ್ದಾರೆ.

ಯಾವುದೇ ಕಾರಣಕ್ಕೂ ಕೃಷಿ ಕಾಯ್ದೆಗಳನ್ನು ಹಿಂಪಡೆಯದೇ ದೆಹಲಿಯ ಗಡಿಗಳಿಂದ ಮರಳುವುದಿಲ್ಲ. ಸರ್ಕಾರ ತನ್ನ ಪಟ್ಟು ಸಡಿಲಿಸಲು ಒಂದು ವರ್ಷವನ್ನೇ ತೆಗೆದುಕೊಂಡರೂ ಸರಿ, ತಮ್ಮ ಬೇಡಿಕೆಗಳು ಈಡೇರದೇ ಕುಳಿತ ಜಾಗದಿಂದ ಕದಲುವುದಿಲ್ಲ ಎಂದು ಅವರು ಪುನರುಚ್ಛಿಸಿದ್ದಾರೆ.

ರೈತರಿಗೆ ರಾಹುಲ್ ಗಾಂಧಿ ಬೆಂಬಲ ದೇಶದಲ್ಲಿ ಕೃಷಿ ಕಾಯ್ದೆಗಳು ಜಾರಿಯಾದರೆ ಇಡೀ ದೇಶ ಕೇವಲ ಇಬ್ಬರ ನಿಯಂತ್ರಣಕ್ಕೆ ಬರುವ ಅಪಾಯ ಎದುರಾಗಲಿದೆ. ದೇಶವನ್ನು ಉಳಿಸುವ ಪ್ರಯತ್ನದಲ್ಲಿ ತೊಡಗಿರುವ ರೈತರಿಗೆ ಬೆಂಬಲ ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ರೈತ ಹೋರಾಟವನ್ನು ಅಂಧಕಾರದಲ್ಲಿ ಕಾಣಿಸಿದ ಬೆಳಕಿನ ದೊಂದಿಗೆ ಹೋಲಿಸಿರುವ ರಾಹುಲ್, ರೈತರ ಹೋರಾಟಕ್ಕೆ ಬೆಂಬಲವಾಗಿ ನಿಲ್ಲುವಂತೆ ದೇಶದ ಜನರಿಗೆ ಕರೆ ಕೊಟ್ಟಿದ್ದಾರೆ.

ಇದನ್ನೂ ಓದಿ: ವ್ಯಕ್ತಿ-ವ್ಯಕ್ತಿತ್ವ | ರೈತ ಹೋರಾಟದ ಹಿಂದಿನ ಶಕ್ತಿ ರಾಕೇಶ್ ಟಿಕಾಯತ್

Published On - 8:13 pm, Fri, 12 February 21

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ