AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rakesh Tikait: ಗುಜರಾತ್ ಜನರ ಸ್ವಾತಂತ್ರ್ಯವನ್ನು ಬಿಜೆಪಿ ಸರ್ಕಾರಗಳು ಕಸಿದುಕೊಂಡಿವೆ; ರಾಕೇಶ್ ಟಿಕಾಯತ್

ದೇಶದ ಜನರು ಸ್ವತಂತ್ರವಾಗಿ ತಮಗೆ ಅನಿಸಿದ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಸ್ವಾತಂತ್ರ್ಯ ಪಡೆದರೂ ಗುಜರಾತ್​ನ ಜನತೆ ಮಾತ್ರ ಈ ಅವಕಾಶದಿಂದ ವಂಚಿತವಾಗಿದೆ.

Rakesh Tikait: ಗುಜರಾತ್ ಜನರ ಸ್ವಾತಂತ್ರ್ಯವನ್ನು ಬಿಜೆಪಿ ಸರ್ಕಾರಗಳು ಕಸಿದುಕೊಂಡಿವೆ; ರಾಕೇಶ್ ಟಿಕಾಯತ್
ರಾಕೇಶ್ ಟಿಕಾಯತ್
guruganesh bhat
| Edited By: |

Updated on:Feb 12, 2021 | 8:16 PM

Share

ದೆಹಲಿ: ಗುಜರಾತ್​ನ ಜನತೆ ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟದಲ್ಲಿ ಪಾಲ್ಗೊಳ್ಳದಂತೆ ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಡೆದಿವೆ ಎಂದು ರೈತ ನಾಯಕ ರಾಕೇಶ್ ಟಿಕಾಯತ್ (Rakesh Tikait) ಕಿಸಾನ್ ಮಹಾಪಂಚಾಯತ್​ನಲ್ಲಿ ಹೇಳಿದ್ದಾರೆ. ದೇಶದ ಜನರು ಸ್ವತಂತ್ರವಾಗಿ ತಮಗೆ ಅನಿಸಿದ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಸ್ವಾತಂತ್ರ್ಯ ಪಡೆದರೂ ಗುಜರಾತ್​ನ ಜನತೆ ಮಾತ್ರ ಈ ಅವಕಾಶದಿಂದ ವಂಚಿತವಾಗಿದೆ. ಹೀಗಾಗಿ ಗುಜರಾತ್​ಗೆ ತೆರಳಿ ಚಳುವಳಿ ಆರಂಭಿಸುವುದಾಗಿ ಅವರು ಘೋಷಿಸಿದ್ದಾರೆ.

ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ ಪ್ರತಿಭಟನೆ ನಿಲ್ಲಿಸಿ ಮನೆಗೆ ಮರಳುವುದಿಲ್ಲ ಎಂದು ರೈತ ನಾಯಕ ರಾಕೇಶ್ ಟಿಕಾಯತ್ ಮತ್ತೊಮ್ಮೆ ಘರ್ಜಿಸಿದ್ದಾರೆ. ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವವರೆಗೂ ಸಿಂಗು ಗಡಿಯೇ ನನ್ನ ಕಚೇರಿಯಾಗಲಿದೆ. ಸರ್ಕಾರ ಹೇಳಿದ ದಿನವೇ ಮಾತುಕತೆ ನಡೆಸಲು ಸಿದ್ಧವಿರುವುದಾಗಿಯೂ ಅವರು ತಿಳಿಸಿದ್ದಾರೆ.

ಯಾವುದೇ ಕಾರಣಕ್ಕೂ ಕೃಷಿ ಕಾಯ್ದೆಗಳನ್ನು ಹಿಂಪಡೆಯದೇ ದೆಹಲಿಯ ಗಡಿಗಳಿಂದ ಮರಳುವುದಿಲ್ಲ. ಸರ್ಕಾರ ತನ್ನ ಪಟ್ಟು ಸಡಿಲಿಸಲು ಒಂದು ವರ್ಷವನ್ನೇ ತೆಗೆದುಕೊಂಡರೂ ಸರಿ, ತಮ್ಮ ಬೇಡಿಕೆಗಳು ಈಡೇರದೇ ಕುಳಿತ ಜಾಗದಿಂದ ಕದಲುವುದಿಲ್ಲ ಎಂದು ಅವರು ಪುನರುಚ್ಛಿಸಿದ್ದಾರೆ.

ರೈತರಿಗೆ ರಾಹುಲ್ ಗಾಂಧಿ ಬೆಂಬಲ ದೇಶದಲ್ಲಿ ಕೃಷಿ ಕಾಯ್ದೆಗಳು ಜಾರಿಯಾದರೆ ಇಡೀ ದೇಶ ಕೇವಲ ಇಬ್ಬರ ನಿಯಂತ್ರಣಕ್ಕೆ ಬರುವ ಅಪಾಯ ಎದುರಾಗಲಿದೆ. ದೇಶವನ್ನು ಉಳಿಸುವ ಪ್ರಯತ್ನದಲ್ಲಿ ತೊಡಗಿರುವ ರೈತರಿಗೆ ಬೆಂಬಲ ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ರೈತ ಹೋರಾಟವನ್ನು ಅಂಧಕಾರದಲ್ಲಿ ಕಾಣಿಸಿದ ಬೆಳಕಿನ ದೊಂದಿಗೆ ಹೋಲಿಸಿರುವ ರಾಹುಲ್, ರೈತರ ಹೋರಾಟಕ್ಕೆ ಬೆಂಬಲವಾಗಿ ನಿಲ್ಲುವಂತೆ ದೇಶದ ಜನರಿಗೆ ಕರೆ ಕೊಟ್ಟಿದ್ದಾರೆ.

ಇದನ್ನೂ ಓದಿ: ವ್ಯಕ್ತಿ-ವ್ಯಕ್ತಿತ್ವ | ರೈತ ಹೋರಾಟದ ಹಿಂದಿನ ಶಕ್ತಿ ರಾಕೇಶ್ ಟಿಕಾಯತ್

Published On - 8:13 pm, Fri, 12 February 21

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?