AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರೇ ಹೋರಾಟ ಮುಂದುವರಿಸಿ, ನಿಮ್ಮ ಜತೆ ನಾವಿದ್ದೇವೆ: ರಾಹುಲ್ ಗಾಂಧಿ ಅಭಯ‘ಹಸ್ತ‘

ಪ್ರತಿಭಟನಾಕಾರರು ಕೆಂಪುಕೋಟೆ ಬಳಿಗೆ ಹೋಗಿದ್ದು ಹೇಗೆ, ಪ್ರತಿಭಟನಾಕಾರರನ್ನು ಕೆಂಪುಕೋಟೆ ಒಳಗೆ ಬಿಟ್ಟವರು ಯಾರು ಎಂದು ಕೈ ನಾಯಕ ಸರ್ಕಾರವನ್ನು ಪ್ರಶ್ನಿಸಿದರು.

ರೈತರೇ ಹೋರಾಟ ಮುಂದುವರಿಸಿ, ನಿಮ್ಮ ಜತೆ ನಾವಿದ್ದೇವೆ: ರಾಹುಲ್ ಗಾಂಧಿ ಅಭಯ‘ಹಸ್ತ‘
ಹುತಾತ್ಮ ಸೈನಿಕರಿಗೆ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅಪಚಾರ ಎದಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದರು.
TV9 Web
| Edited By: |

Updated on:Apr 06, 2022 | 8:31 PM

Share

ದೆಹಲಿ: ಹಿಂಸಾಚಾರದ ಹೆಸರಿನಲ್ಲಿ ರೈತ ಪ್ರತಿಭಟನೆಯನ್ನು ಹತ್ತಿಕ್ಕುವ ಷಡ್ಯಂತ್ರ ನಡೆಯುತ್ತಿದೆ. ಕೇಂದ್ರ ಸರ್ಕಾರ ರೈತರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ. ಮೋದಿ ಸರ್ಕಾರ ದೇಶದ ರೈತರ ಜೀವನ ನಾಶಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರಾಷ್ಟ್ರ ರಾಜಧಾನಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಿದರು.

ಪ್ರತಿಭಟನಾಕಾರರು ಕೆಂಪುಕೋಟೆ ಬಳಿಗೆ ಹೋಗಿದ್ದು ಹೇಗೆ, ಪ್ರತಿಭಟನಾಕಾರರನ್ನು ಕೆಂಪುಕೋಟೆ ಒಳಗೆ ಬಿಟ್ಟವರು ಯಾರು ಎಂದು ಕೈ ನಾಯಕ ಸರ್ಕಾರವನ್ನು ಪ್ರಶ್ನಿಸಿದರು. ಎಲ್ಲದಕ್ಕೂ ಕೇಂದ್ರ ಗೃಹ ಸಚಿವಾಲಯ ಉತ್ತರಿಸಬೇಕಾಗಿದೆ ಎಂದೂ ರಾಹುಲ್ ಗಾಂಧಿ ಹೇಳಿದರು. ಮೋದಿ ಸರ್ಕಾರ ರೈತರಿಂದ ಎಲ್ಲವನ್ನೂ ಕಸಿದುಕೊಳ್ಳುತ್ತಿದೆ ಎಂದು ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆರೋಪ ಮಾಡಿದರು.

ರೈತರೇ ಹೋರಾಟ ಮುಂದುವರಿಸಿ, ನಿಮ್ಮ ಜತೆ ನಾವಿದ್ದೇವೆ. ಯಾವುದೇ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯಬೇಡಿ ಎಂದು ಪ್ರತಿಭಟನಾ ನಿರತರಿಗೆ ರಾಹುಲ್ ಕರೆ ನೀಡಿದರು. ಕೇಂದ್ರ ಸರ್ಕಾರ ರೈತರಿಗೆ ನಿರಂತರವಾಗಿ ಅವಮಾನ ಮಾಡುತ್ತಿದೆ. ಕೃಷಿ ತಿದ್ದುಪಡಿ ಕಾಯ್ದೆಯಿಂದ ಬಂಡವಾಳಶಾಹಿಗಳಿಗೆ ಲಾಭವಿದೆ. ಅವುಗಳಿಂದ ರೈತರಿಗೆ ಲಾಭವಿಲ್ಲ ಎಂದು ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಹರಿಹಾಯ್ದರು.

ಧರಣಿ ನಿರತ ರೈತರ ಜೊತೆ ಚರ್ಚೆ ನಡೆಸಿ ಸಮಸ್ಯೆ ಪರಹರಿಸಿ. ಈ ಸಮಸ್ಯೆಗೆ ಇರುವ ಪರಿಹಾರವೆಂದರೆ ನೂತನ ಕೃಷಿ ಕಾಯ್ದೆಗಳಿಗೆ ತಿದ್ದುಪಡಿ ತರುವುದು. ಕೇಂದ್ರ ಈ ಬಗ್ಗೆ ಯೋಚಿಸಬೇಕು. ರೈತರು ಮನೆಗೆ ಮರಳುತ್ತಾರೆ ಎಂದು ತಿಳಿಯುವುದು ಬೇಡ ಎಂದು ರಾಹುಲ್ ಗಾಂಧಿ ಮಾತನಾಡಿದರು.

Budget 2021 | ರೈತರ ಖಾತೆಗೆ ಹೆಚ್ಚು ಹಣ, ಕಿಸಾನ್ ಸಮ್ಮಾನ್ ಮೊತ್ತ ₹10,000ಕ್ಕೆ ಏರುವ ನಿರೀಕ್ಷೆ

ರೈತರ ಕರಾಳ ದಿನ ಆಚರಣೆಗೆ ಕೋಡಿಹಳ್ಳಿ ಕರೆ

Published On - 5:56 pm, Fri, 29 January 21

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?