AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರೇ ಹೋರಾಟ ಮುಂದುವರಿಸಿ, ನಿಮ್ಮ ಜತೆ ನಾವಿದ್ದೇವೆ: ರಾಹುಲ್ ಗಾಂಧಿ ಅಭಯ‘ಹಸ್ತ‘

ಪ್ರತಿಭಟನಾಕಾರರು ಕೆಂಪುಕೋಟೆ ಬಳಿಗೆ ಹೋಗಿದ್ದು ಹೇಗೆ, ಪ್ರತಿಭಟನಾಕಾರರನ್ನು ಕೆಂಪುಕೋಟೆ ಒಳಗೆ ಬಿಟ್ಟವರು ಯಾರು ಎಂದು ಕೈ ನಾಯಕ ಸರ್ಕಾರವನ್ನು ಪ್ರಶ್ನಿಸಿದರು.

ರೈತರೇ ಹೋರಾಟ ಮುಂದುವರಿಸಿ, ನಿಮ್ಮ ಜತೆ ನಾವಿದ್ದೇವೆ: ರಾಹುಲ್ ಗಾಂಧಿ ಅಭಯ‘ಹಸ್ತ‘
ಹುತಾತ್ಮ ಸೈನಿಕರಿಗೆ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅಪಚಾರ ಎದಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದರು.
TV9 Web
| Edited By: |

Updated on:Apr 06, 2022 | 8:31 PM

Share

ದೆಹಲಿ: ಹಿಂಸಾಚಾರದ ಹೆಸರಿನಲ್ಲಿ ರೈತ ಪ್ರತಿಭಟನೆಯನ್ನು ಹತ್ತಿಕ್ಕುವ ಷಡ್ಯಂತ್ರ ನಡೆಯುತ್ತಿದೆ. ಕೇಂದ್ರ ಸರ್ಕಾರ ರೈತರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ. ಮೋದಿ ಸರ್ಕಾರ ದೇಶದ ರೈತರ ಜೀವನ ನಾಶಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರಾಷ್ಟ್ರ ರಾಜಧಾನಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಿದರು.

ಪ್ರತಿಭಟನಾಕಾರರು ಕೆಂಪುಕೋಟೆ ಬಳಿಗೆ ಹೋಗಿದ್ದು ಹೇಗೆ, ಪ್ರತಿಭಟನಾಕಾರರನ್ನು ಕೆಂಪುಕೋಟೆ ಒಳಗೆ ಬಿಟ್ಟವರು ಯಾರು ಎಂದು ಕೈ ನಾಯಕ ಸರ್ಕಾರವನ್ನು ಪ್ರಶ್ನಿಸಿದರು. ಎಲ್ಲದಕ್ಕೂ ಕೇಂದ್ರ ಗೃಹ ಸಚಿವಾಲಯ ಉತ್ತರಿಸಬೇಕಾಗಿದೆ ಎಂದೂ ರಾಹುಲ್ ಗಾಂಧಿ ಹೇಳಿದರು. ಮೋದಿ ಸರ್ಕಾರ ರೈತರಿಂದ ಎಲ್ಲವನ್ನೂ ಕಸಿದುಕೊಳ್ಳುತ್ತಿದೆ ಎಂದು ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆರೋಪ ಮಾಡಿದರು.

ರೈತರೇ ಹೋರಾಟ ಮುಂದುವರಿಸಿ, ನಿಮ್ಮ ಜತೆ ನಾವಿದ್ದೇವೆ. ಯಾವುದೇ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯಬೇಡಿ ಎಂದು ಪ್ರತಿಭಟನಾ ನಿರತರಿಗೆ ರಾಹುಲ್ ಕರೆ ನೀಡಿದರು. ಕೇಂದ್ರ ಸರ್ಕಾರ ರೈತರಿಗೆ ನಿರಂತರವಾಗಿ ಅವಮಾನ ಮಾಡುತ್ತಿದೆ. ಕೃಷಿ ತಿದ್ದುಪಡಿ ಕಾಯ್ದೆಯಿಂದ ಬಂಡವಾಳಶಾಹಿಗಳಿಗೆ ಲಾಭವಿದೆ. ಅವುಗಳಿಂದ ರೈತರಿಗೆ ಲಾಭವಿಲ್ಲ ಎಂದು ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಹರಿಹಾಯ್ದರು.

ಧರಣಿ ನಿರತ ರೈತರ ಜೊತೆ ಚರ್ಚೆ ನಡೆಸಿ ಸಮಸ್ಯೆ ಪರಹರಿಸಿ. ಈ ಸಮಸ್ಯೆಗೆ ಇರುವ ಪರಿಹಾರವೆಂದರೆ ನೂತನ ಕೃಷಿ ಕಾಯ್ದೆಗಳಿಗೆ ತಿದ್ದುಪಡಿ ತರುವುದು. ಕೇಂದ್ರ ಈ ಬಗ್ಗೆ ಯೋಚಿಸಬೇಕು. ರೈತರು ಮನೆಗೆ ಮರಳುತ್ತಾರೆ ಎಂದು ತಿಳಿಯುವುದು ಬೇಡ ಎಂದು ರಾಹುಲ್ ಗಾಂಧಿ ಮಾತನಾಡಿದರು.

Budget 2021 | ರೈತರ ಖಾತೆಗೆ ಹೆಚ್ಚು ಹಣ, ಕಿಸಾನ್ ಸಮ್ಮಾನ್ ಮೊತ್ತ ₹10,000ಕ್ಕೆ ಏರುವ ನಿರೀಕ್ಷೆ

ರೈತರ ಕರಾಳ ದಿನ ಆಚರಣೆಗೆ ಕೋಡಿಹಳ್ಳಿ ಕರೆ

Published On - 5:56 pm, Fri, 29 January 21

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ?
ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ?