AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರೇ ಹೋರಾಟ ಮುಂದುವರಿಸಿ, ನಿಮ್ಮ ಜತೆ ನಾವಿದ್ದೇವೆ: ರಾಹುಲ್ ಗಾಂಧಿ ಅಭಯ‘ಹಸ್ತ‘

ಪ್ರತಿಭಟನಾಕಾರರು ಕೆಂಪುಕೋಟೆ ಬಳಿಗೆ ಹೋಗಿದ್ದು ಹೇಗೆ, ಪ್ರತಿಭಟನಾಕಾರರನ್ನು ಕೆಂಪುಕೋಟೆ ಒಳಗೆ ಬಿಟ್ಟವರು ಯಾರು ಎಂದು ಕೈ ನಾಯಕ ಸರ್ಕಾರವನ್ನು ಪ್ರಶ್ನಿಸಿದರು.

ರೈತರೇ ಹೋರಾಟ ಮುಂದುವರಿಸಿ, ನಿಮ್ಮ ಜತೆ ನಾವಿದ್ದೇವೆ: ರಾಹುಲ್ ಗಾಂಧಿ ಅಭಯ‘ಹಸ್ತ‘
ಹುತಾತ್ಮ ಸೈನಿಕರಿಗೆ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅಪಚಾರ ಎದಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದರು.
TV9 Web
| Edited By: |

Updated on:Apr 06, 2022 | 8:31 PM

Share

ದೆಹಲಿ: ಹಿಂಸಾಚಾರದ ಹೆಸರಿನಲ್ಲಿ ರೈತ ಪ್ರತಿಭಟನೆಯನ್ನು ಹತ್ತಿಕ್ಕುವ ಷಡ್ಯಂತ್ರ ನಡೆಯುತ್ತಿದೆ. ಕೇಂದ್ರ ಸರ್ಕಾರ ರೈತರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ. ಮೋದಿ ಸರ್ಕಾರ ದೇಶದ ರೈತರ ಜೀವನ ನಾಶಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರಾಷ್ಟ್ರ ರಾಜಧಾನಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಿದರು.

ಪ್ರತಿಭಟನಾಕಾರರು ಕೆಂಪುಕೋಟೆ ಬಳಿಗೆ ಹೋಗಿದ್ದು ಹೇಗೆ, ಪ್ರತಿಭಟನಾಕಾರರನ್ನು ಕೆಂಪುಕೋಟೆ ಒಳಗೆ ಬಿಟ್ಟವರು ಯಾರು ಎಂದು ಕೈ ನಾಯಕ ಸರ್ಕಾರವನ್ನು ಪ್ರಶ್ನಿಸಿದರು. ಎಲ್ಲದಕ್ಕೂ ಕೇಂದ್ರ ಗೃಹ ಸಚಿವಾಲಯ ಉತ್ತರಿಸಬೇಕಾಗಿದೆ ಎಂದೂ ರಾಹುಲ್ ಗಾಂಧಿ ಹೇಳಿದರು. ಮೋದಿ ಸರ್ಕಾರ ರೈತರಿಂದ ಎಲ್ಲವನ್ನೂ ಕಸಿದುಕೊಳ್ಳುತ್ತಿದೆ ಎಂದು ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆರೋಪ ಮಾಡಿದರು.

ರೈತರೇ ಹೋರಾಟ ಮುಂದುವರಿಸಿ, ನಿಮ್ಮ ಜತೆ ನಾವಿದ್ದೇವೆ. ಯಾವುದೇ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯಬೇಡಿ ಎಂದು ಪ್ರತಿಭಟನಾ ನಿರತರಿಗೆ ರಾಹುಲ್ ಕರೆ ನೀಡಿದರು. ಕೇಂದ್ರ ಸರ್ಕಾರ ರೈತರಿಗೆ ನಿರಂತರವಾಗಿ ಅವಮಾನ ಮಾಡುತ್ತಿದೆ. ಕೃಷಿ ತಿದ್ದುಪಡಿ ಕಾಯ್ದೆಯಿಂದ ಬಂಡವಾಳಶಾಹಿಗಳಿಗೆ ಲಾಭವಿದೆ. ಅವುಗಳಿಂದ ರೈತರಿಗೆ ಲಾಭವಿಲ್ಲ ಎಂದು ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಹರಿಹಾಯ್ದರು.

ಧರಣಿ ನಿರತ ರೈತರ ಜೊತೆ ಚರ್ಚೆ ನಡೆಸಿ ಸಮಸ್ಯೆ ಪರಹರಿಸಿ. ಈ ಸಮಸ್ಯೆಗೆ ಇರುವ ಪರಿಹಾರವೆಂದರೆ ನೂತನ ಕೃಷಿ ಕಾಯ್ದೆಗಳಿಗೆ ತಿದ್ದುಪಡಿ ತರುವುದು. ಕೇಂದ್ರ ಈ ಬಗ್ಗೆ ಯೋಚಿಸಬೇಕು. ರೈತರು ಮನೆಗೆ ಮರಳುತ್ತಾರೆ ಎಂದು ತಿಳಿಯುವುದು ಬೇಡ ಎಂದು ರಾಹುಲ್ ಗಾಂಧಿ ಮಾತನಾಡಿದರು.

Budget 2021 | ರೈತರ ಖಾತೆಗೆ ಹೆಚ್ಚು ಹಣ, ಕಿಸಾನ್ ಸಮ್ಮಾನ್ ಮೊತ್ತ ₹10,000ಕ್ಕೆ ಏರುವ ನಿರೀಕ್ಷೆ

ರೈತರ ಕರಾಳ ದಿನ ಆಚರಣೆಗೆ ಕೋಡಿಹಳ್ಳಿ ಕರೆ

Published On - 5:56 pm, Fri, 29 January 21

Follow Us
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು