AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಷ್ಟ್ರಧ್ವಜ ಗೌರವಿಸುವ ಬಗ್ಗೆ ಬಿಜೆಪಿ ಪಾಠ ಬೇಕಿಲ್ಲ; ಪ್ರತಿಭಟನೆಯಲ್ಲಿರುವ ರೈತರ ಮಕ್ಕಳೂ ಗಡಿ ಕಾಯುತ್ತಿದ್ದಾರೆ’

ಕೇಂದ್ರದ ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಮುಖಂಡರು ಇಂದು (ಜ.30) ಉಪವಾಸ ಸತ್ಯಾಗ್ರಹ ಕೈಗೊಳ್ಳಲಿದ್ದಾರೆ. ‘ಸದ್ಭಾವನಾ ದಿನವನ್ನಾಗಿ’ ಆಚರಿಸಲಿದ್ದಾರೆ.

‘ರಾಷ್ಟ್ರಧ್ವಜ ಗೌರವಿಸುವ ಬಗ್ಗೆ ಬಿಜೆಪಿ ಪಾಠ ಬೇಕಿಲ್ಲ; ಪ್ರತಿಭಟನೆಯಲ್ಲಿರುವ ರೈತರ ಮಕ್ಕಳೂ ಗಡಿ ಕಾಯುತ್ತಿದ್ದಾರೆ’
ಗಾಜಿಪುರ್​ನಲ್ಲಿ ಮುಂದುವರಿದ ರೈತರ ಹೋರಾಟ
TV9 Web
| Edited By: |

Updated on:Apr 06, 2022 | 8:27 PM

Share

ದೆಹಲಿ: ರಾಷ್ಟ್ರಧ್ವಜವನ್ನು ಗೌರವಿಸುವ ಬಗ್ಗೆ ಬಿಜೆಪಿ ಪಾಠ ಮಾಡಬೇಕಿಲ್ಲ. ಪ್ರತಿಭಟನೆಯಲ್ಲಿ ತೊಡಗಿರುವ ಬಹಳಷ್ಟು ರೈತರ ಮಕ್ಕಳು ದೇಶ ರಕ್ಷಣೆಯಲ್ಲಿ ಗಡಿಕಾಯುತ್ತಿದ್ದಾರೆ ಎಂದು ರೈತ ಮುಖಂಡ ಯದುವೀರ್ ಸಿಂಗ್ ಬಿಜೆಪಿಗೆ ಕುಟುಕಿದ್ದಾರೆ. ಮತ್ತೋರ್ವ ರೈತ ಮುಖಂಡ ದರ್ಶನ್ ಪಾಲ್, ನಿರ್ಬಂಧಿಸಿರುವ ಅಂತರ್ಜಾಲ ಸೇವೆಯನ್ನು ಮರಳಿ ನೀಡಬೇಕು. ಇಲ್ಲವಾದರೆ ಆ ಬಗ್ಗೆ ಕೂಡ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕೇಂದ್ರದ ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಮುಖಂಡರು ಇಂದು (ಜ.30) ಉಪವಾಸ ಸತ್ಯಾಗ್ರಹ ಕೈಗೊಳ್ಳಲಿದ್ದಾರೆ. ಈ ದಿನವನ್ನು ಸದ್ಭಾವನಾ ದಿನವನ್ನಾಗಿ ಆಚರಿಸುತ್ತೇವೆ. ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಉಪವಾಸ ಕೈಗೊಂಡಿದ್ದೇವೆ ಎಂದು ರೈತ ಮುಖಂಡರು ಹೇಳಿದ್ದಾರೆ.

ಕೇಂದ್ರದ ನೂತನ ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಯು ದೆಹಲಿ-ಉತ್ತರ ಪ್ರದೇಶದ ಗಡಿಭಾಗ ಗಾಜಿಬಾದ್​ನಲ್ಲಿ ಕೂಡ ಮುಂದುವರಿದಿದೆ. ಗಣರಾಜ್ಯೋತ್ಸವ ದಿನದಂದು ದಹಲಿಯಲ್ಲಿ ನಡೆದ ಹಿಂಸಾಚಾರ, ಕೆಂಪುಕೋಟೆಯಲ್ಲಿ ನಡೆದ ಪ್ರತಿಭಟನೆಯ ಬಳಿಕ ರೈತರು ಗಾಜಿಬಾದ್ ಪ್ರದೇಶವನ್ನು ಪ್ರತಿಭಟನೆಯ ಹೊಸ ಸ್ಥಳವನ್ನಾಗಿ ಮಾಡಿಕೊಂಡಿದ್ದಾರೆ.

ಭಾರತೀಯ ಕಿಸಾನ್ ಯೂನಿಯನ್ (BKU) ನಾಯಕ ರಾಕೇಶ್ ಟಿಕಾಯತ್ ಹಾಗೂ ರೈತ ಹೋರಾಟಗಾರರಿಗೆ ಬೆಂಬಲ ಸೂಚಿಸಲು ರೈತರು ಉತ್ತರ ಪ್ರದೇಶ ಗಡಿಭಾಗದಲ್ಲಿ ಸೇರುತ್ತಿದ್ದಾರೆ. ಮೊನ್ನೆಯ ವೇಳೆ (ಜ.28) ಸುಮಾರು 3 ಸಾವಿರದಷ್ಟು ಇದ್ದ ರೈತ ಹೋರಾಟಗಾರರ ಸಂಖ್ಯೆ ನಿನ್ನೆಗೆ (ಜ.29) 25 ಸಾವಿರದಷ್ಟು ಆಗಿದೆ. ರಾಕೇಶ್ ಟಿಕಾಯತ್ ಭಾವನಾತ್ಮಕ ಮಾತುಗಳಿಂದ ಸ್ಪೂರ್ತಿಗೊಂಡ ರೈತರು ಪ್ರತಿಭಟನಾ ಸ್ಥಳದಲ್ಲಿ ಸೇರುತ್ತಿದ್ದಾರೆ.

ಇದನ್ನೂ ಓದಿ :  Budget 2021 | ರೈತರ ಖಾತೆಗೆ ಹೆಚ್ಚು ಹಣ, ಕಿಸಾನ್ ಸಮ್ಮಾನ್ ಮೊತ್ತ ₹10,000ಕ್ಕೆ ಏರುವ ನಿರೀಕ್ಷೆ

ಬಾಗ್​ಪತ್, ಶಾಮ್ಲಿ, ಮುಜಾಫರ್​ನಗರ್, ಹರ್ಯಾಣದ ಗಡಿ ಭಾಗಗಳು ಹಾಗೂ ಪಶ್ಚಿಮ ಉತ್ತರ ಪ್ರದೇಶ ಭಾಗದಿಂದ, ಭಾರತೀಯ ಕಿಸಾನ್ ಯೂನಿಯನ್ ಕರೆಗೆ ಓಗೊಟ್ಟ ರೈತರು ಸಹಸ್ರ ಸಂಖ್ಯೆಯಲ್ಲಿ ಪ್ರತಿಭಟನಾ ಪ್ರದೇಶಕ್ಕೆ ಬರುತ್ತಿದ್ದಾರೆ. ದೆಹಲಿ-ಮೀರತ್ ಹೆದ್ದಾರಿ ಭಾಗದಲ್ಲಿ ಪ್ರತಿಭಟನಾಕಾರರು ನೆಲೆಯೂರಿದ್ದಾರೆ. ಗಾಜಿಬಾದ್ ಆಡಳಿತದ ಸೂಚನೆಗಳನ್ನು ಪಾಲಿಸಲು ಹೋರಾಟಗಾರರು ಒಪ್ಪುತ್ತಿಲ್ಲ. ಸ್ಥಳವನ್ನು ಖಾಲಿ ಮಾಡಬೇಕು ಎಂಬ ಸೂಚನೆಯನ್ನು ಪ್ರತಿಭಟನಾಕಾರರು ಕೇಳುತ್ತಿಲ್ಲ. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.

ದೆಹಲಿಯ ಇಸ್ರೇಲಿ ರಾಯಭಾರಿ ಕಛೇರಿಯಲ್ಲಿ ಬಾಂಬ್ ದಾಳಿ ನಡೆದ ಬಳಿಕ, ರೈತ ಪ್ರತಿಭಟನಾ ಸ್ಥಳದಲ್ಲಿ ಕೂಡ ಕಟ್ಟೆಚ್ಚರ ವಹಿಸಲಾಗಿದೆ. ರೈತ ಧರಣಿ ನಡೆಯುತ್ತಿರುವ ಪ್ರದೇಶಗಳನ್ನೂ ಭಯೋತ್ಪಾದಕರು ಗುರಿಯಾಗಿಸಿರುವ ಸಾಧ್ಯತೆ ಅಂದಾಜಿಸಲಾಗಿದೆ. ಹೀಗಾಗಿ, ಭದ್ರತೆ ಬಿಗಿಗೊಳಿಸಲಾಗಿದೆ.

ಮುಜಾಫರ್​ನಗರದ ರೈತರನ್ನು ಕೇಂದ್ರದ ವಿರುದ್ಧದ ಪ್ರತಿಭಟನೆಯಲ್ಲಿ ಮುಂದುವರಿಯುವಂತೆ ಆಪ್ ಪಕ್ಷದ ನಾಯಕ ಸಂಜಯ್ ಸಿಂಗ್ ಹೇಳಿಕೆ ನೀಡಿದ್ದಾರೆ. ಭಾರತೀಯ ಕಿಸಾನ್ ಯೂನಿಯನ್ ಬೆಂಬಲಿಸಿ ನಿನ್ನೆ (ಜ.29) ನಡೆದ ಮಹಾಪಂಚಾಯತ್​ನಲ್ಲಿ ಸಹಸ್ರಾರು ರೈತರು ಭಾಗಿಯಾಗಿದ್ದಾರೆ. ದೆಹಲಿಯಲ್ಲಿ ನೀರು, ಆಹಾರ ಮತ್ಯಾವುದಕ್ಕೂ ಕೊರತೆ ಉಂಟಾಗುವುದಿಲ್ಲ. ನಾವು ರೈತರೊಂದಿಗೆ ಇದ್ದೇವೆ ಎಂದು ಕಿಸಾನ್ ಮಹಾಪಂಚಾಯತ್ ಉದ್ದೇಶಿಸಿ ಸಂಜಯ್ ಸಿಂಗ್ ತಿಳಿಸಿದ್ದಾರೆ. ರೈತರ ಹೋರಾಟಕ್ಕೆ ರಾಷ್ಟ್ರೀಯ ಲೋಕದಳದಿಂದಲೂ ಬೆಂಬಲ ಲಭಿಸಿದೆ.

ಮಹಾಪಂಚಾಯತ್ ಫರ್ಮಾನು! ಮನೆಯಿಂದ ಒಬ್ಬ ರೈತ ದೆಹಲಿ ಪ್ರತಿಭಟನೆಗೆ ಬರಲೇಬೇಕು, ಇಲ್ಲದಿದ್ರೆ 1500 ರೂ ದಂಡ!

Published On - 1:25 pm, Sat, 30 January 21

Follow Us
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!