AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಪಂಚಾಯತ್ ಫರ್ಮಾನು! ಮನೆಯಿಂದ ಒಬ್ಬ ರೈತ ದೆಹಲಿ ಪ್ರತಿಭಟನೆಗೆ ಬರಲೇಬೇಕು, ಇಲ್ಲದಿದ್ರೆ 1500 ರೂ ದಂಡ!

ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರ ಹೋರಾಟ ಇಂದು ಕೂಡ ಮುಂದುವರಿದಿದೆ. ದೆಹಲಿ-ಹರಿಯಾಣ ಗಡಿಭಾಗವಾದ ಸಿಂಘು, ಟಿಕ್ರಿ ಪ್ರದೇಶದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಮಹಾಪಂಚಾಯತ್ ಫರ್ಮಾನು! ಮನೆಯಿಂದ ಒಬ್ಬ ರೈತ ದೆಹಲಿ ಪ್ರತಿಭಟನೆಗೆ ಬರಲೇಬೇಕು, ಇಲ್ಲದಿದ್ರೆ 1500 ರೂ ದಂಡ!
ಪ್ರತಿಭಟನಾನಿರತ ರೈತರು (ಸಂಗ್ರಹ ಚಿತ್ರ)
TV9 Web
| Edited By: |

Updated on:Apr 06, 2022 | 8:32 PM

Share

ದೆಹಲಿ: ಮನೆಯಿಂದ ಒಬ್ಬ ರೈತ ದೆಹಲಿ ಪ್ರತಿಭಟನೆಗೆ ಬರಲೇಬೇಕು. ಪ್ರತಿಭಟನೆಗೆ ಹೋಗದ ಕುಟುಂಬಕ್ಕೆ 1,500 ರೂ. ದಂಡ ವಿಧಿಸಲಾಗುವುದು. ದಂಡ ವಿಧಿಸಲು ನಿರಾಕರಿಸಿದವರನ್ನು ಗ್ರಾಮದಿಂದ ಬಹಿಷ್ಕರಿಸಲಾಗುವುದು ಎಂದು ಮಹಾಪಂಚಾಯತ್ ಮುಖಂಡರ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಪಂಜಾಬ್‌ ಬಟಿಂಡಾದ ವಿರ್ಕ್ ಖುರ್ದ್ ಗ್ರಾಮ ಪಂಚಾಯತಿಯಲ್ಲಿ ಹೀಗೆ ಪ್ರಕಟಣೆ ಹೊರಡಿಸಲಾಗಿದೆ.

ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯು 66 ದಿನದತ್ತ ಕಾಲಿಟ್ಟಿದೆ. ಗಣರಾಜ್ಯೋತ್ಸವ ದಿನದಂದು ನಡೆದ ಘಟನೆಗಳ ಬಳಿಕವೂ ರೈತ ಚಳುವಳಿ ಮುಂದುವರಿದಿದೆ. ದೆಹಲಿ ಗಡಿಭಾಗಗಳಲ್ಲಿ ರೈತ ಸಂಘಟನೆಯ ನಾಯಕರು, ಸದಸ್ಯರು ಪ್ರತಿಭಟನೆಯಲ್ಲಿ ತೊಡಗಿಕೊಂಡಿದ್ದಾರೆ. ಕೇಂದ್ರದ ವಿರುದ್ಧ ನಡೆಯುತ್ತಿರುವ ರೈತ ಆಂದೋಲನದಲ್ಲಿ ಬಟಿಂಡಾದ ರೈತರು ಒಂದು ವಾರಗಳ ಕಾಲ ಭಾಗಿಯಾಗಬೇಕು. ದೆಹಲಿಗೆ ಹೋಗಲು ಒಪ್ಪದಿದ್ದರೆ ಅಂಥವರಿಗೆ 1,500 ರೂ. ದಂಡ ವಿಧಿಸಲಾಗುವುದು ಎಂದು ಮಹಾ ಪಂಚಾಯತ್ ಮುಖಂಡರ ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದಾರೆ.

ಗಾಜಿಪುರ್ ಗಡಿಯಲ್ಲಿ ಇಂಟರ್​​​ನೆಟ್​ ಸೇವೆ ಸ್ಥಗಿತ ಗಣರಾಜ್ಯೋತ್ಸವದ ಬಳಿಕ ರೈತ ಪ್ರತಿಭಟನೆಯು ಹಿಂಸಾತ್ಮಕ ರೂಪ ಪಡೆದುಕೊಂಡಿತ್ತು. ಟ್ರ್ಯಾಕ್ಟರ್ ಚಳುವಳಿ ಅನುಚಿತ ತಿರುವು ಪಡೆದುಕೊಂಡಿತ್ತು. ನಿನ್ನೆ (ಜ.29) ಕೂಡ ದೆಹಲಿ ಗಡಿ ಪ್ರದೇಶಗಳಾದ ಸಿಂಘು, ಟಿಕ್ರಿ ಮುಂತಾದ ಕಡೆಗಳಲ್ಲಿ ರೈತರು ಪ್ರತಿಭಟನೆ ನಡೆಸಿದ್ದರು. ಸಿಂಘು ಗಡಿಯಲ್ಲಿ ರೈತರು ಹಾಗೂ ಪೊಲೀಸರ ಮಧ್ಯೆ ಮತ್ತೆ ಘರ್ಷಣೆ ಏರ್ಪಟ್ಟಿತ್ತು. ಈ ಹಿನ್ನೆಲೆಯಲ್ಲಿ, ದೆಹಲಿ ಗಾಜಿಪುರ್ ಗಡಿಯಲ್ಲಿ ಅಂತರ್ಜಾಲ ಸೇವೆ ಸ್ಥಗಿತಗೊಳಿಸಲಾಗಿದೆ. ಹರಿಯಾಣ, ಪಂಜಾಬ್​ನ 17 ಜಿಲ್ಲೆಗಳಲ್ಲಿ ಕೂಡ ಇಂಟರ್​ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.

ರೈತ ಸಂಘಟನೆಗಳಿಂದ ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿ ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರ ಹೋರಾಟ ಇಂದು ಕೂಡ ಮುಂದುವರಿದಿದೆ. ದೆಹಲಿ-ಹರಿಯಾಣ ಗಡಿಭಾಗವಾದ ಸಿಂಘು, ಟಿಕ್ರಿ ಪ್ರದೇಶದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಸಿಂಘು ಗಡಿಯಲ್ಲಿ ಭದ್ರತೆಗಾಗಿ ಪೊಲೀಸರ ನಿಯೋಜನೆ ಮಾಡಲಾಗಿದೆ. ನಿನ್ನೆ (ಜ.29) ಸಿಂಘು ಗಡಿಯಲ್ಲಿ ರೈತರ ಮೇಲೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ, ಇಂದು (ಜ.30) ರೈತ ಸಂಘಟನೆಗಳು 12 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿವೆ. ಸುದ್ದಿಗೋಷ್ಠಿಯಲ್ಲಿ ಮುಂದಿನ ಹೋರಾಟದ ಬಗ್ಗೆ ರೈತ ಸಂಘಟನೆಗಳಿಂದ ಮಾಹಿತಿ ಲಭ್ಯವಾಗುವ ಸಾಧ್ಯತೆ ಇದೆ.

ರೈತರೇ ಹೋರಾಟ ಮುಂದುವರಿಸಿ, ನಿಮ್ಮ ಜತೆ ನಾವಿದ್ದೇವೆ: ರಾಹುಲ್ ಗಾಂಧಿ ಅಭಯ‘ಹಸ್ತ‘

ಫ್ರೀಡಂ ಪಾರ್ಕ್​ನಲ್ಲಿಂದು ಕಪ್ಪು ಪಟ್ಟಿ ಧರಿಸಿ ರೈತರಿಂದ ಕರಾಳ‌ ದಿನಾಚರಣೆ..

Published On - 11:48 am, Sat, 30 January 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!