AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಘು ಗಡಿಯಲ್ಲಿ ರೈತರ ಸಭೆ ಮುಕ್ತಾಯ; ನ. 29ರಂದು ನಡೆಸಲು ಉದ್ದೇಶಿಸಿದ್ದ ಟ್ರಾಕ್ಟರ್ ರಾಲಿ ಹಿಂಪಡೆದ ಕಿಸಾನ್ ಯೂನಿಯನ್

ಸಭೆಯಲ್ಲಿ ಟ್ರಾಕ್ಟರ್ ರಾಲಿ ರದ್ದುಪಡಿಸಲು ತೀರ್ಮಾನ ಕೈಗೊಳ್ಳಲಾಗಿದೆ. ನವಂಬರ್ 29 ರಂದು ನಡೆಸಲು ಉದ್ದೇಶಿಸಿದ್ದ ಟ್ರಾಕ್ಟರ್ ರಾಲಿ ರದ್ದುಗೊಳಿಸಿ ಕಿಸಾನ್ ಯೂನಿಯನ್ ಹೇಳಿಕೆ ನೀಡಿದೆ.

ಸಿಂಘು ಗಡಿಯಲ್ಲಿ ರೈತರ ಸಭೆ ಮುಕ್ತಾಯ; ನ. 29ರಂದು ನಡೆಸಲು ಉದ್ದೇಶಿಸಿದ್ದ ಟ್ರಾಕ್ಟರ್ ರಾಲಿ ಹಿಂಪಡೆದ ಕಿಸಾನ್ ಯೂನಿಯನ್
ರೈತರ ಪ್ರತಿಭಟನೆ ಚಿತ್ರ
TV9 Web
| Edited By: |

Updated on:Nov 27, 2021 | 3:28 PM

Share

ದೆಹಲಿ: ಸಿಂಘು ಗಡಿಯಲ್ಲಿ ನಡೆಯುತ್ತಿದ್ದ ರೈತರ ಸಭೆ ಮುಕ್ತಾಯವಾಗಿದೆ. ಸಭೆಯಲ್ಲಿ ಟ್ರಾಕ್ಟರ್ ರಾಲಿ ರದ್ದುಪಡಿಸಲು ತೀರ್ಮಾನ ಕೈಗೊಳ್ಳಲಾಗಿದೆ. ನವಂಬರ್ 29 ರಂದು ನಡೆಸಲು ಉದ್ದೇಶಿಸಿದ್ದ ಟ್ರಾಕ್ಟರ್ ರಾಲಿ ರದ್ದುಗೊಳಿಸಿ ಕಿಸಾನ್ ಯೂನಿಯನ್ ಹೇಳಿಕೆ ನೀಡಿದೆ. ನವೆಂಬರ್ 29ರಂದು ಟ್ರ್ಯಾಕ್ಟರ್ ರಾಲಿ ನಡೆಯುವುದಿಲ್ಲ. ಟ್ರ್ಯಾಕ್ಟರ್ ರಾಲಿ ಸ್ಥಗಿತಗೊಳಿಸಿದ ಬಗ್ಗೆ ರೈತ ಸಂಘಟನೆಗಳ ಪರವಾಗಿ ಸಂಯುಕ್ತ ಕಿಸಾನ್ ಮೋರ್ಚಾ ಹೇಳಿಕೆ ನೀಡಿದೆ. ದೆಹಲಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಇಂದು (ನವೆಂಬರ್ 27) ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದೆ.

ಪ್ರಧಾನಿ ನರೇಂದ್ರ ಮೋದಿಗೆ ಪತ್ರವನ್ನು ಬರೆಯಲಾಗಿದೆ. ರೈತರ ಮೇಲಿನ ಪ್ರಕರಣಗಳನ್ನು ಹಿಂಪಡೆಯಬೇಕು. ಎಂಎಸ್‌ಪಿ ಸಂಬಂಧ ಸಮಿತಿಯನ್ನು ರಚಿಸಬೇಕು. ಈ ವಿಚಾರ ಸೇರಿದಂತೆ ನಮ್ಮ ಬೇಡಿಕೆಗಳ ಬಗ್ಗೆ ಪ್ರಧಾನಿ ಮೋದಿಗೆ ಪತ್ರ ಬರೆಯಲಾಗಿದೆ. ಡಿಸೆಂಬರ್ 4ರವರೆಗೆ ಪ್ರಧಾನಿಗೆ ಉತ್ತರಿಸಲು ಅವಕಾಶ ನೀಡಿದ್ದೇವೆ. ಟ್ರ್ಯಾಕ್ಟರ್ ರಾಲಿಯನ್ನು ನಿಜವಾಗಿ ಹಿಂಪಡೆದಿಲ್ಲ, ಸ್ಥಗಿತಗೊಳಿಸಿದ್ದೇವೆ. ಡಿಸೆಂಬರ್ 4 ರಂದು ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ನಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ನಡೆಸುತ್ತೇವೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ.

ಮೂರು ಕೃಷಿ ಕಾಯ್ದೆ(Farm Laws) ಗಳನ್ನು ವಾಪಸ್​ ಪಡೆಯುವ ಮಸೂದೆ ಸೋಮವಾರ ಸಂಸತ್ತಿನಲ್ಲಿ ಮಂಡನೆಯಾಗಲಿದೆ. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್​ ತೋಮರ್ ಈ ಬಿಲ್​ ಮಂಡನೆ ಮಾಡಲಿದ್ದಾರೆ. ಅಂದು ಕಡ್ಡಾಯವಾಗಿ ಬಿಜೆಪಿ ಸಂಸದರು ಲೋಕಸಭೆಯಲ್ಲಿ ಹಾಜರಿರಲೇಬೇಕು ಎಂದು ವಿಪ್​ ಜಾರಿ ಮಾಡಲಾಗಿದೆ. ಹಾಗೇ, ರಾಜ್ಯಸಭೆ ಸದಸ್ಯರಿಗೂ ವಿಪ್ ಜಾರಿಯಾಗಿದೆ. ಇನ್ನು ಕಾಂಗ್ರೆಸ್ ಕೂಡ ತನ್ನ ಸಂಸದರಿಗೆ ಮೂರು ಸಾಲಿನ ವಿಪ್​ ಜಾರಿ ಮಾಡಿದೆ.

ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಇನ್ನೆರಡು ದಿನಗಳು ಮಾತ್ರ ಬಾಕಿ ಇದೆ. ಮೂರು ಕೃಷಿ ಕಾಯ್ದೆಗಳ ರದ್ದತಿ ಮಸೂದೆಯನ್ನೂ ಅಧಿವೇಶನದ ಇತರ 26 ಕಾರ್ಯಸೂಚಿಯೊಂದಿಗೆ ಕೇಂದ್ರ ಸರ್ಕಾರ ಸೇರಿಸಿದೆ. ಇನ್ನುಳಿದಂತೆ ಕ್ರಿಪ್ಟೋಕರೆನ್ಸಿ ಮಸೂದೆ, ಸಾರ್ವಜನಿಕ ವಲಯದ ಬ್ಯಾಂಕ್​ಗಳಲ್ಲಿ ಸರ್ಕಾರದ ಪಾಲನ್ನು ಶೇ.51ರಿಂದ ಶೇ.26ಕ್ಕೆ ಇಳಿಸುವ ಬಿಲ್​ಗಳೂ ಸೇರಿದ್ದು, ಇವು ಬಹುಮುಖ್ಯವಾಗಿವೆ.  ಈ ಕೃಷಿ ಕಾಯ್ದೆಗಳನ್ನು ಕಳೆದ ವರ್ಷದ ಮುಂಗಾರು ಅಧಿವೇಶನದಲ್ಲಿ ಅಂಗೀಕಾರ ಮಾಡಲಾಗಿತ್ತು. ಆದರೆ ಕೃಷಿ ಮಸೂದೆಗಳು ಪಾಸ್ ಆಗಿ ಕಾಯ್ದೆಯಾಗಿ ರೂಪುಗೊಂಡಾಗಿನಿಂದಲೂ ರೈತರು ಸಿಕ್ಕಾಪಟೆ ಪ್ರತಿಭಟನೆ ಮಾಡುತ್ತಲೇ ಇದ್ದರು. ಕಳೆದೊಂದು ವರ್ಷದಿಂದಲೂ ದೆಹಲಿಯ ಗಡಿಭಾಗಗಳಲ್ಲಿ ರೈತರ ಹೋರಾಟ ಮುಂದುವರಿದಿತ್ತು.

ಇದನ್ನೂ ಓದಿ: Farmers Protest ಕೃಷಿ ಕಾನೂನು ವಿರುದ್ಧ ರೈತರ ಹೋರಾಟಕ್ಕೆ ಒಂದು ವರ್ಷ; ದೆಹಲಿಗೆ ಹರಿದು ಬರುತ್ತಿದೆ ರೈತರ ದಂಡು

ಇದನ್ನೂ ಓದಿ: 3 ಕೃಷಿ ಕಾಯ್ದೆಗಳನ್ನು ವಾಪಸ್​ ಪಡೆಯುವ ಮಸೂದೆ ಸಂಸತ್ತಿನಲ್ಲಿ ಸೋಮವಾರ ಮಂಡನೆ; ಬಿಜೆಪಿ ಸಂಸದರಿಗೂ ವಿಪ್ ಜಾರಿ

Published On - 3:16 pm, Sat, 27 November 21

Follow Us
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ