AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kisan Mahapanchayat: ರೈತರು ಒಗ್ಗಟ್ಟಾಗಿದ್ದಾರೆ, ಪ್ರತಿಭಟನೆ ಮುಗಿಯುವುದಿಲ್ಲ: ರಾಕೇಶ್ ಟಿಕಾಯತ್

ನಾಡಿನ ರೈತರು ಒಗ್ಗಟ್ಟಾಗಿದ್ದೇವೆ ಎಂಬ ಸಂದೇಶ ಸರ್ಕಾರಕ್ಕೆ ಬಂದಿದ್ದು, ಸರ್ಕಾರ ಮಧ್ಯಸ್ಥಿಕೆ ವಹಿಸಿ ಪರಿಹಾರ ನೀಡದ ಹೊರತು ಪ್ರತಿಭಟನೆ ಕೈಬಿಡುವುದಿಲ್ಲ ಎಂದರು. "ಸರ್ಕಾರವು ಮಾತುಕತೆಯ ಮೂಲಕ ಸಮಸ್ಯೆಯನ್ನು ಪರಿಹರಿಸಬೇಕು, ಈ ಆಂದೋಲನವು ಕೊನೆಗೊಳ್ಳುವುದಿಲ್ಲ ಎಂದು ಗುರುವಾರ ನಡೆದ ರೈತ ಸಮಾವೇಶದ ಕುರಿತು ಮಾಹಿತಿ ನೀಡಿದ ರೈತ ಮುಖಂಡ ರಾಕೇಶ್ ಟಿಕಾಯತ್ ಹೇಳಿದ್ದಾರೆ.

Kisan Mahapanchayat: ರೈತರು ಒಗ್ಗಟ್ಟಾಗಿದ್ದಾರೆ, ಪ್ರತಿಭಟನೆ ಮುಗಿಯುವುದಿಲ್ಲ: ರಾಕೇಶ್ ಟಿಕಾಯತ್
ಕಿಸಾನ್ ಮಹಾಪಂಚಾಯತ್Image Credit source: X/@RakeshTikaitBKU
ರಶ್ಮಿ ಕಲ್ಲಕಟ್ಟ
|

Updated on: Mar 14, 2024 | 6:19 PM

Share

ದೆಹಲಿ ಮಾರ್ಚ್ 14: ಕನಿಷ್ಠ ಬೆಂಬಲ ಬೆಲೆ (MSP) ಕುರಿತ ಕಾನೂನು ಸೇರಿದಂತೆ ರೈತರ ಬೇಡಿಕೆಗಳನ್ನು ಅಂಗೀಕರಿಸುವಂತೆ ಕೇಂದ್ರವನ್ನು ಒತ್ತಾಯಿಸಲು ಸಂಯುಕ್ತ ಕಿಸಾನ್ ಮೋರ್ಚಾ (SKM) ಗುರುವಾರ ಆಯೋಜಿಸಿದ್ದ ‘ಕಿಸಾನ್ ಮಹಾಪಂಚಾಯತ್’ನಲ್ಲಿ (Kisan Mahapanchayat) ಪಾಲ್ಗೊಳ್ಳಲು ಪಂಜಾಬ್ ರೈತರು ದೆಹಲಿಯ ರಾಮಲೀಲಾ ಮೈದಾನದಲ್ಲಿ (Ramlila Maidan) ಜಮಾಯಿಸಿದ್ದಾರೆ. ದೆಹಲಿ ಪೊಲೀಸರು ಪ್ರತಿಭಟನಾ ನಿರತ ರೈತರಿಗೆ 5,000ಕ್ಕಿಂತ ಹೆಚ್ಚು ಜನರು ಸೇರಬಾರದು, ಟ್ರ್ಯಾಕ್ಟರ್ ಟ್ರಾಲಿಗಳು ಮತ್ತು ಮೈದಾನದಲ್ಲಿ ಮೆರವಣಿಗೆ ಮಾಡಬಾರದು ಎಂಬ ಷರತ್ತಿನೊಂದಿಗೆ ‘ಮಹಾಪಂಚಾಯತ್’ ನಡೆಸಲು ಅನುಮತಿ ನೀಡಿದ್ದರು.

ರಾಮಲೀಲಾ ಮೈದಾನದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ರೈತರೊಬ್ಬರು ಪ್ರತಿಭಟನೆಯ ಪ್ರಮುಖ ಬೇಡಿಕೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕಾನೂನು ಖಾತರಿ ಎಂದಿದ್ದಾರೆ.”ನಮ್ಮ ಮುಖ್ಯ ಬೇಡಿಕೆ ಕಾನೂನುಬದ್ಧವಾಗಿ ಖಾತರಿಪಡಿಸಿದ ಕನಿಷ್ಠ ಬೆಂಬಲ ಬೆಲೆ” ಎಂದು ಪಶ್ಚಿಮ ಬಂಗಾಳದ 39 ವರ್ಷದ ಉತ್ಪಲ್ ಬಿಸ್ವಾಸ್ ಹೇಳಿದರು. “ಇಂದಿನ ಪ್ರತಿಭಟನೆಯು ಒಂದು ದಿನದವರೆಗೆ ಇರುತ್ತದೆ. ಆದರೆ ಅದು ಹೇಗೆ ಮುಂದುವರಿಯುತ್ತದೆ ಎಂಬುದನ್ನು ನೋಡೋಣ ಎಂದಿದ್ದಾರೆ ಅವರು.

ನಮ್ಮ ಗುರಿ ತಲುಪಲು ದೂರವಿಲ್ಲ: ದರ್ಶನ್ ಪಾಲ್

ದೆಹಲಿಯಲ್ಲಿ ರೈತರ ಪ್ರತಿಭಟನೆ ನಡೆಯುತ್ತಿದೆ. ಗುರುವಾರದ ರೈತರ ಸಭೆ ರೈತರ ಶಕ್ತಿಯ ಪ್ರತೀಕವಾಗಿದೆ. “ಈ ಸಭೆಯ ಮೂಲಕ, ನಾವು ನಮ್ಮ ಗುರಿಗಳನ್ನು ತಲುಪಲು ಹೆಚ್ಚು ದೂರವಿಲ್ಲ ಎಂದು ಸರ್ಕಾರಿ ಅಧಿಕಾರಿಗಳಿಗೆ ತೋರಿಸಲು ನಾವು ಬಯಸುತ್ತೇವೆ” ಎಂದು ಎಎನ್ಐ ಸುದ್ದಿಸಂಸ್ಥೆ ಜತೆ ಮಾತನಾಡಿದ ಸಂಯುಕ್ತ ಕಿಸಾನ್ ಮೋರ್ಚಾ (SKM) ನ ದರ್ಶನ್ ಪಾಲ್ ಹೇಳಿದ್ದಾರೆ.

ಟಿಕಾಯತ್ ಮಾತು

ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ದೇಶದ ರೈತರು ಒಗ್ಗಟ್ಟಾಗಿದ್ದಾರೆ: ಟಿಕಾಯತ್

ಗುರುವಾರ ನಡೆದ ರೈತ ಸಮಾವೇಶದ ಕುರಿತು ಮಾಹಿತಿ ನೀಡಿದ ರೈತ ಮುಖಂಡ ರಾಕೇಶ್ ಟಿಕಾಯತ್ , ನಾಡಿನ ರೈತರು ಒಗ್ಗಟ್ಟಾಗಿದ್ದೇವೆ ಎಂಬ ಸಂದೇಶ ಸರ್ಕಾರಕ್ಕೆ ಬಂದಿದ್ದು, ಸರ್ಕಾರ ಮಧ್ಯಸ್ಥಿಕೆ ವಹಿಸಿ ಪರಿಹಾರ ನೀಡದ ಹೊರತು ಪ್ರತಿಭಟನೆ ಕೈಬಿಡುವುದಿಲ್ಲ ಎಂದರು. “ಸರ್ಕಾರವು ಮಾತುಕತೆಯ ಮೂಲಕ ಸಮಸ್ಯೆಯನ್ನು ಪರಿಹರಿಸಬೇಕು, ಈ ಆಂದೋಲನವು ಕೊನೆಗೊಳ್ಳುವುದಿಲ್ಲ ಎಂದು ಟಿಕಾಯತ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಶರದ್ ಪವಾರ್ ಹೆಸರು, ಚಿತ್ರ ಬಳಸಿದ್ದಕ್ಕೆ ಅಜಿತ್ ಪವಾರ್ ಬಣವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂಕೋರ್ಟ್

ದೆಹಲಿಯಲ್ಲಿ ಸಂಚಾರ ದಟ್ಟಣೆ

ರೈತರ ಪ್ರತಿಭಟನೆಯಿಂದಾಗಿ ಪ್ರಯಾಣಿಕರು ಸಮಸ್ಯೆ ಎದುರಿಸಬೇಕಾಗಿದ್ದರೂ ವಾಹನಗಳು ಮುಂದೆ ಸಾಗುವಂತೆ ಮಾಡಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದರು. “ನಾವು ವಾಹನಗಳನ್ನು ಬೇರೆಡೆಗೆ ತಿರುಗಿಸುವ ಯೋಜನೆಗಳ ಬಗ್ಗೆ ಟ್ರಾಫಿಕ್ ಪೊಲೀಸರೊಂದಿಗೆ ಮಾತನಾಡಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ. ಆದಾಗ್ಯೂ ದೆಹಲಿ ಟ್ರಾಫಿಕ್ ಪೋಲೀಸರು ಸಂಚಾರ ನಿಯಮಗಳು ಮತ್ತು ಮಾರ್ಗದ ತಿರುವುಗಳ ಬಗ್ಗೆ ಪ್ರಯಾಣಿಕರಿಗೆ ಸಲಹೆ ನೀಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ