Farmers Protest: ರೈತ ಹೋರಾಟ ಡಿಸೆಂಬರ್​ವರೆಗೂ ಮುಂದುವರಿಯಬಹುದು: ರೈತ ಮುಖಂಡ ರಾಕೇಶ್ ಟಿಕಾಯತ್

ಶೀಘ್ರವೇ ವಿಧಾನಸಭಾ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದ ರಾಕೇಶ್ ಟಿಕಾಯತ್, ಡಿಸೆಂಬರ್​ವರೆಗೆ ರೈತ ಹೋರಾಟ ಮುಂದುವರಿಸುವ ಬಗ್ಗೆ ಹೇಳಿಕೆ ನೀಡಿದ್ದಾರೆ. ನವೆಂಬರ್ ಅಥವಾ ಡಿಸೆಂಬರ್​ತನಕವೂ ರೈತರ ಆಂದೋಲನ ಮುಂದುವರಿಯುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.

Farmers Protest: ರೈತ ಹೋರಾಟ ಡಿಸೆಂಬರ್​ವರೆಗೂ ಮುಂದುವರಿಯಬಹುದು: ರೈತ ಮುಖಂಡ ರಾಕೇಶ್ ಟಿಕಾಯತ್
ಭಾರತೀಯ ಕಿಸಾನ್ ಯೂನಿಯನ್​ ಮುಖಂಡ ರಾಕೇಶ್ ಟಿಕಾಯತ್
Follow us
| Updated By: ganapathi bhat

Updated on:Apr 06, 2022 | 7:09 PM

ಅಲಹಾಬಾದ್: ಕೇಂದ್ರದ ನೂತನ ಕೃಷಿ ತಿದ್ದುಪಡಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತಿರುವ ಭಾರತೀಯ ಕಿಸಾನ್ ಯೂನಿಯನ್ (BKU) ಮತ್ತು ಇತರ ರೈತ ಸಂಘಟನೆಗಳು ಡಿಸೆಂಬರ್ ಅಂತ್ಯದವರೆಗೆ ತಮ್ಮ ಹೋರಾಟ ಮುಂದುವರಿಸುವ ಸೂಚನೆ ಲಭ್ಯವಾಗಿದೆ. ಈ ಬಗ್ಗೆ ಬಿಕೆಯು ವಕ್ತಾರ, ರೈತ ಮುಖಂಡ ರಾಕೇಶ್ ಟಿಕಾಯತ್ ಹೇಳಿಕೆ ನೀಡಿದ್ದಾರೆ.

ಶೀಘ್ರವೇ ವಿಧಾನಸಭಾ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದ ರಾಕೇಶ್ ಟಿಕಾಯತ್, ಡಿಸೆಂಬರ್​ವರೆಗೆ ರೈತ ಹೋರಾಟ ಮುಂದುವರಿಸುವ ಬಗ್ಗೆ ಹೇಳಿಕೆ ನೀಡಿದ್ದಾರೆ. ನವೆಂಬರ್ ಅಥವಾ ಡಿಸೆಂಬರ್​ತನಕವೂ ರೈತರ ಆಂದೋಲನ ಮುಂದುವರಿಯುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.

ಧಾನ್ಯಗಳ ಖರೀದಿದಾರರು ಒಂದು ಕ್ವಿಂಟಾಲ್ ಭತ್ತಕ್ಕೆ 1,850 ರೂಪಾಯಿಗಳ ಕನಿಷ್ಠ ಬೆಂಬಲ ಬೆಲೆಯನ್ನು ನೀಡಬೇಕು ಎಂದು ಕೇಳಿ. ಅಲ್ಲಿಯವರೆಗೆ ಒಂದು ಭತ್ತವನ್ನೂ ನೀಡಬೇಡಿ ಎಂದು ಬಂಗಾಳದ ರೈತರಿಗೆ ರಾಕೇಶ್ ಟಿಕಾಯತ್ ಸಲಹೆ ನೀಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಈ ಕುರಿತು ಮಾತನಾಡಿದ ಟಿಕಾಯತ್, ಮುಂದೆ ದೇಶದ ಇತರ ಭಾಗಗಳಿಗೂ ತೆರಳಿ, ಕನಿಷ್ಠ ಬೆಂಬಲ ಬೆಲೆ ಕಾನೂನಿನ ಅಗತ್ಯಗಳನ್ನು ಮನವರಿಕೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ಪ್ರಸ್ತುತ ಬಿಹಾರದಲ್ಲಿ ಭತ್ತವನ್ನು ಅತಿ ಕಡಿಮೆ ಬೆಲೆಗೆ ಕೊಂಡುಕೊಳ್ಳುತ್ತಿದ್ದಾರೆ. ಒಂದು ಕ್ವಿಂಟಾಲ್​ಗೆ 750ರಿಂದ 800 ರೂಪಾಯಿಗೆ ಭತ್ತ ತೆಗೆದುಕೊಳ್ಳುತ್ತಿದ್ದಾರೆ. ರೈತರಿಗೆ ವಿವಿಧ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಖಚಿತಪಡಿಸುವ ಸೂಕ್ತ ಕಾನೂನು ಬೇಕು ಎಂದು ಟಿಕಾಯತ್ ಆಗ್ರಹಿಸಿದ್ದಾರೆ.

ನಾನು ದೆಹಲಿಯಲ್ಲಿ ಕುಳಿತು ಪ್ರತಿಭಟನೆ ಮುಂದುವರಿಸಲು ಬಯಸಿಲ್ಲ. ಬದಲಾಗಿ ದೇಶದ ವಿವಿಧ ಭಾಗಗಳಿಗೆ ಭೇಟಿ ನೀಡಬೇಕು ಎಂದು ರಾಕೇಶ್ ಟಿಕಾಯತ್ ಹೇಳಿದ್ದಾರೆ. ಮಾರ್ಚ್ 14 ಮತ್ತು 15ರಂದು ಮಧ್ಯ ಪ್ರದೇಶ, ಮಾರ್ಚ್ 17ರಂದು ರಾಜಸ್ಥಾನದ ಗಂಗಾನಗರ, ಮಾರ್ಚ್ 18ರಂದು ದೆಹಲಿ, ಘಾಜಿಪುರ್​ನ ಯುಪಿ ಗೇಟ್, ಮಾರ್ಚ್ 19ರಂದು ಒಡಿಸ್ಸಾ ಹಾಗೂ ಮಾರ್ಚ್ 21 ಮತ್ತು 22ರಂದು ಕರ್ನಾಟಕಕ್ಕೂ ಟಿಕಾಯತ್ ಭೇಟಿ ನೀಡಲಿದ್ದಾರೆ.

ಕೇಂದ್ರದ ನೂತನ ಕೃಷಿ ತಿದ್ದುಪಡಿ ಕಾಯ್ದೆಗಳಿಂದ ಸಣ್ಣ ಸಣ್ಣ ಅಂಗಡಿಗಳು ಮುಚ್ಚುವಂತಾಗಲಿದೆ. ಕೇವಲ ದೊಡ್ಡ ವ್ಯಾಪಾರಿ ಮಳಿಗೆಗಳು ಮಾತ್ರ ಉಳಿಯುತ್ತವೆ. ಬಹುರಾಷ್ಟ್ರೀಯ ಕಂಪೆನಿಗಳಿಗೆ ಈ ಕಾನೂನು ಸಹಾಯ ಮಾಡಲಿದೆ ಎಂಬುದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ವಾದವಾಗಿದೆ.

ಕೇಂದ್ರ ಸರ್ಕಾರದ ಚುಕ್ಕಾಣಿಯನ್ನು ಒಂದು ರಾಜಕೀಯ ಪಕ್ಷದ ಹಿಡಿತದಲ್ಲಿ ಇರುತ್ತಿದ್ದರೆ ಈಗಾಗಲೇ ರೈತರ ಜತೆ ಮಾತನಾಡಿ ಸಮಸ್ಯೆ ಬಗೆಹರಿಸುತ್ತಿದ್ದರು. ಆದರೆ ಈ ಸರ್ಕಾರ ಉದ್ಯಮಿಗಳಿಂದ ನಡೆಯುತ್ತಿದೆ. ಹಾಗಾಗಿ ಇಡೀ ದೇಶವನ್ನು ಅವರು ಮಾರಲು ಹೊರಟಿದ್ದಾರೆ ಎಂದು ಟಿಕಾಯತ್ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ‘ಏಪ್ರಿಲ್​ 5ರಂದು ಪಶ್ಚಿಮಬಂಗಾಳಕ್ಕೆ ತೆರಳಲಿವೆ ನಮ್ಮ ಟ್ರ್ಯಾಕ್ಟರ್​ಗಳು..ಪ್ರಧಾನಿ ಮೋದಿಯವರು ಹೆಲಿಕಾಪ್ಟರ್​​ನಿಂದ ಬಗ್ಗಿ ನೋಡಲಿ’-ರಾಕೇಶ್ ಟಿಕಾಯತ್​

ಕೃಷಿ ಕಾಯ್ದೆ ವಿರುದ್ಧ ರೈತರ ಹೋರಾಟಕ್ಕೆ ಟಿಕಾಯತ್ ಸೂತ್ರ; 1 ಗ್ರಾಮ, 1 ಟ್ರ್ಯಾಕ್ಟರ್, 10 ದಿನಗಳ ಕಾಲ 15 ಮಂದಿ ಪ್ರತಿಭಟನೆಯಲ್ಲಿ ಭಾಗಿ

Published On - 11:13 pm, Sun, 14 March 21

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್