AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ರಾಷ್ಟ್ರಪತಿ ಭಾಷಣ ಬಹಿಷ್ಕರಿಸಲು 16 ವಿರೋಧ ಪಕ್ಷಗಳ ನಿರ್ಧಾರ

ಜಂಟಿ ಅಧಿವೇಶನ ಉದ್ದೇಶಿಸಿ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್‌ ಭಾಷಣ ಮಾಡಲಿದ್ದಾರೆ. ರಾಷ್ಟ್ರಪತಿಗಳ ಭಾಷಣ ಬಹಿಷ್ಕರಿಸಲು ವಿಪಕ್ಷಗಳು ತೀರ್ಮಾನಿಸಿವೆ.

ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ರಾಷ್ಟ್ರಪತಿ ಭಾಷಣ ಬಹಿಷ್ಕರಿಸಲು 16 ವಿರೋಧ ಪಕ್ಷಗಳ ನಿರ್ಧಾರ
ಸಂಸತ್ ಭವನ
TV9 Web
| Updated By: ganapathi bhat|

Updated on:Apr 06, 2022 | 8:34 PM

Share

ದೆಹಲಿ: ಇಂದಿನಿಂದ ಆರಂಭವಾಗಲಿರುವ ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ವಿರೋಧ ಪಕ್ಷಗಳ ಭಾರಿ ವಿರೋಧ ವ್ಯಕ್ತವಾಗುವ ಸಾಧ್ಯತೆ ಗೋಚರಿಸಿದೆ. 2021ರ ಬಜೆಟ್ ಅಧಿವೇಷನ ಇಂದು (ಜ.29) ಆರಂಭಗೊಳ್ಳಲಿದೆ. ಬಳಿಕ, ಫೆ. 1ರಿಂದ ಕೇಂದ್ರ ಬಜೆಟ್ ಪ್ರಸ್ತುತಿ ಆರಂಭಗೊಳ್ಳಲಿದೆ. ಆದರೆ, ಇದಕ್ಕೂ ಮೊದಲೇ ಕೇಂದ್ರ ಸರ್ಕಾರದ ನೀತಿಯ ವಿರುದ್ಧ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುವ ಸೂಚನೆ ಲಭಿಸಿದೆ.

ಬಜೆಟ್ ಅಧಿವೇಶನ ಹಿನ್ನೆಲೆಯಲ್ಲಿ, ಜಂಟಿ ಅಧಿವೇಶನ ಉದ್ದೇಶಿಸಿ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್‌ ಭಾಷಣ ಮಾಡಲಿದ್ದಾರೆ. ರಾಷ್ಟ್ರಪತಿಗಳ ಭಾಷಣ ಬಹಿಷ್ಕರಿಸಲು ವಿಪಕ್ಷಗಳು ತೀರ್ಮಾನಿಸಿವೆ. ನೂತನ ಕೃಷಿ ಕಾಯ್ದೆ ವಿಚಾರದಲ್ಲಿ ಕೇಂದ್ರ ತಾಳಿರುವ ಒರಟು ನಿಲುವು, ರೈತ ಪ್ರತಿಭಟನೆ ಬಗ್ಗೆ ಸರ್ಕಾರ ತಾಳಿರುವ ನಿಲುವು ಖಂಡಿಸಿ ವಿರೋಧ ಪಕ್ಷಗಳು ಇಂದಿನ ಭಾಷಣ ಬಹಿಷ್ಕರಿಸಲು ತೀರ್ಮಾನಿಸಿವೆ.

ಕಾಂಗ್ರೆಸ್, ಎನ್‌ಸಿಪಿ, ಶಿವಸೇನೆ, ಟಿಎಂಸಿ ಸೇರಿದಂತೆ ಒಟ್ಟು 16 ವಿಪಕ್ಷಗಳಿಂದ ಭಾಷಣ ಬಹಿಷ್ಕರಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಆಮ್ ಆದ್ಮಿ ಪಕ್ಷ ಹಾಗೂ ಶಿರೋಮಣಿ ಅಕಾಲಿ ದಳದಿಂದಲೂ ಭಾಷಣ ಬಹಿಷ್ಕರಿಸುವುದಾಗಿ ಹೇಳಿಕೆ ಲಭ್ಯವಾಗಿದೆ. 16 ವಿಪಕ್ಷಗಳು ಒಟ್ಟಾಗಿ ರಾಷ್ಟ್ರಪತಿ ಭಾಷಣ ಬಹಿಷ್ಕರಿಸಲು ಕೈಗೊಂಡಿರುವ ತೀರ್ಮಾನವನ್ನು, ಕಾಂಗ್ರೆಸ್ ನಾಯಕ ಗುಲಾಮ್ ನಬಿ ಆಜಾದ್ ಕೂಡ ನಿನ್ನೆ ಸ್ಪಷ್ಟಪಡಿಸಿದ್ದಾರೆ.

ಲಕ್ಷ ಸಂಖ್ಯೆಯ ರೈತ ಹೋರಾಟಗಾರರು ಸುಮಾರು 64 ದಿನಗಳಿಂದ ದೆಹಲಿ ಗಡಿ ಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅತಿಯಾದ ಮಳೆ, ಚಳಿಯ ನಡುವೆಯೂ ಅವರು ಚಳುವಳಿಯಲ್ಲಿ ತೊಡಗಿದ್ದರು. ಆದರೆ, ಸರ್ಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡಿಲ್ಲ. ಬದಲಾಗಿ, ಜಲ ಫಿರಂಗಿ, ಅಶ್ರುವಾಯು, ಲಾಠಿ ಏಟಿನ ಮೂಲಕ ಪ್ರತಿಕ್ರಿಯಿಸಿದೆ. ರೈತ ವಚಳುವಳಿಯ ವಿರುದ್ಧ ಇಲ್ಲಸಲ್ಲದ ಊಹಾಪೋಹಗಳನ್ನೂ ಕಟ್ಟಿಕೊಡಲಾಗುತ್ತಿದೆ. ಇದು ಖಂಡನೀಯ ಎಂದು 16 ಪಕ್ಷಗಳ ನಾಯಕರು ಸಹಮತದ ಹೇಳಿಕೆ ನೀಡಿದ್ದಾರೆ.

ಗುಲಾಮ್ ನಬಿ ಆಜಾದ್, ಶರದ್ ಪವಾರ್, ಫಾರೂಕ್ ಅಬ್ದುಲ್ಲಾ, ತಿರುಚಿ ಸಿಲ್ವ, ಸಂಜಯ್ ರಾವತ್ ಸಹಿತ ಹಲವು ನಾಯಕರು ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ. ಜೆ.ಡಿ.ಎಸ್ ಪಕ್ಷ ಕೂಡ, ಇಂದಿನ ರಾಷ್ಟ್ರಪತಿ ಭಾಷಣ ಬಹಿಷ್ಕರಿಸಲಿರುವ ಬಗ್ಗೆ ಹೇಳಿಕೆ ನೀಡಿದೆ. ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಷ್ಟ್ರಪತಿಗಳ ಭಾಷಣ ಬಹಿಷ್ಕಾರ ಮಾಡುವುದಾಗಿ ಹೇಳಿದ್ದಾರೆ.

Kannada News Live | ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭ

Published On - 10:45 am, Fri, 29 January 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ