AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rakesh Tikait: ನರೇಂದ್ರ ಮೋದಿ ಘೋಷಿಸಿದ ಬೆಂಬಲ ಬೆಲೆ ಬದ್ಧತೆಯನ್ನು ಅನುಮಾನಿಸಿದ ರಾಕೇಶ್ ಟಿಕಾಯತ್

ಹೊಸ ಸಮುದಾಯವೊಂದು ಪ್ರತಿಭಟನೆಯಲ್ಲಿ ನಿರತವಾಗಿದೆ ಎಂಬ ನರೇಂದ್ರ ಮೋದಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ರಾಕೇಶ್ ಟಿಕಾಯತ್, ಹೌದು ಈ ಬಾರಿ ರೈತ ಸಮುದಾಯ ಮುಂದೆ ಬಂದಿದೆ. ಜನರೂ ರೈತರಿಗೆ ಬೆಂಬಲ ನೀಡುತ್ತಿದ್ದಾರೆ ಎಂದಿದ್ದಾರೆ.

Rakesh Tikait: ನರೇಂದ್ರ ಮೋದಿ ಘೋಷಿಸಿದ ಬೆಂಬಲ ಬೆಲೆ ಬದ್ಧತೆಯನ್ನು ಅನುಮಾನಿಸಿದ ರಾಕೇಶ್ ಟಿಕಾಯತ್
ರಾಕೇಶ್​ ಟಿಕಾಯತ್​
ರಶ್ಮಿ ಕಲ್ಲಕಟ್ಟ
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Feb 08, 2021 | 7:42 PM

Share

ಗಾಜಿಯಾಬಾದ್: ದೇಶದಲ್ಲಿ ಹಸಿವಿನ ಮೇಲೆ ವ್ಯಾಪಾರ ನಡೆಸಲು ಅವಕಾಶ ನೀಡುವುದಿಲ್ಲ ಎಂದ ರೈತ ನಾಯಕ ರಾಕೇಶ್ ಟಿಕಾಯತ್, ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (Minimum Support Price – MSP) ನೀಡುವ ಕುರಿತು ಸರ್ಕಾರ ಭರವಸೆ ನೀಡಬೇಕು. ಕೃಷಿ ಮಾರುಕಟ್ಟೆಗೆ ಸಂಬಂಧಿಸಿದ ಕಾನೂನುಗಳನ್ನು ಭೇಷರತ್​ ವಾಪಸ್ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ರಾಜ್ಯಸಭೆಯಲ್ಲಿ ಭಾಷಣ ಮಾಡಿದ ನರೇಂದ್ರ ಮೋದಿ ಅವರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಇತ್ತು. ಕನಿಷ್ಠ ಬೆಂಬಲ ಬೆಲೆ ಇದೆ ಮತ್ತು ಮುಂದೆಯೂ ಕನಿಷ್ಠ ಬೆಂಬಲ ಬೆಲೆ ಇರುತ್ತದೆ ಎಂದು ಹೇಳಿದ್ದರು. ಮೋದಿ ಭಾಷಣಕ್ಕೆ ಪ್ರತಿಕ್ರಿಯೆ ನೀಡಿದ ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ಟಿಕಾಯತ್, ಪ್ರತಿದಿನ ವಿಮಾನದ ದರ ಎರಡು ಮೂರು ಬಾರಿ ಬದಲಿಸುವಂತೆ ಕೃಷಿ ಉತ್ಪನ್ನಗಳ ಬೆಲೆಯನ್ನು ನಿರ್ಧರಿಸಲು ಆಗುವುದಿಲ್ಲ ಎಂದಿದ್ದಾರೆ.

ಹೊಸ ಸಮುದಾಯವೊಂದು ಪ್ರತಿಭಟನೆಯಲ್ಲಿ ನಿರತವಾಗಿದೆ ಎಂಬ ಮೋದಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಟಿಕಾಯತ್, ಹೌದು ಈ ಬಾರಿ ರೈತ ಸಮುದಾಯ ಮುಂದೆ ಬಂದಿದೆ. ಜನರೂ ರೈತರಿಗೆ ಬೆಂಬಲ ನೀಡುತ್ತಿದ್ದಾರೆ. ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟಿಸುತ್ತಿರುವ ರೈತರು ಕನಿಷ್ಠ ಬೆಂಬಲ ಬೆಲೆ ಬಗ್ಗೆ ಯಾವುದೇ ಕಾನೂನು ಇಲ್ಲ ಎಂಬುದನ್ನು ಎತ್ತಿ ತೋರಿಸಿದ್ದರು. ಕನಿಷ್ಠ ಬೆಂಬಲ ಬೆಲೆ ತಪ್ಪಿ ಹೋದರೆ ವ್ಯಾಪಾರಿಗಳು ಕಡಿಮೆ ಬೆಲೆಗೆ ಬೆಳೆ ಖರೀದಿಸಿ ಲೂಟಿ ಮಾಡುತ್ತಾರೆ ಎಂದು ಹೇಳಿದ್ದಾರೆ.

ಈಗ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ಜಾತಿ ಮತ್ತು ಧರ್ಮದ ಆಧಾರದಲ್ಲಿ ವಿಭಜಿಸುವುದನ್ನು ಅವರು ಖಂಡಿಸಿದರು. ಈ ಚಳವಳಿಯನ್ನು ಮೊದಲು ಪಂಜಾಬ್ ನವರ ಸಮಸ್ಯೆ ಎಂದು ಬಿಂಬಿಸಲಾಯಿತು. ಆಮೇಲೆ ಸಿಖ್ ನಂತರ ಜಾಟ್ ಜನಾಂದವರ ಸಮಸ್ಯೆ ಎಂದು ಹೇಳಲಾಯಿತು. ಇದು ಹೀಗೆಯೇ ಮುಂದುವರಿಯುತ್ತದೆ. ದೇಶದ ರೈತರೆಲ್ಲರೂ ಒಗ್ಗಟ್ಟಾಗಿದ್ದಾರೆ. ಯಾರೊಬ್ಬ ರೈತರೂ ದೊಡ್ಡವರು ಅಥವಾ ಚಿಕ್ಕವರಲ್ಲ. ಈ ಚಳವಳಿ ಎಲ್ಲ ರೈತರದ್ದು ಎಂದಿದ್ದಾರೆ.

MSP ಇತ್ತು, MSP ಇದೆ ಮತ್ತು MSP ಮುಂದೆಯೂ ಇರಲಿದೆ: ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟನೆ

Published On - 7:41 pm, Mon, 8 February 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!