Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಟ್ವೀಟ್ ಮತ್ತು ಟೂಲ್​ಕಿಟ್​ನಿಂದ ಹಲವು ಸಂಗತಿಗಳು ಬಯಲಾಗಲಿವೆ: ವಿದೇಶಾಂಗ ಸಚಿವ

ಟೂಲ್​ಕಿಟ್ ಹಲವು ಸಂಗತಿಗಳನ್ನು ಬಯಲು ಮಾಡಿದೆ. ಇನ್ನೂ ಏನೇನು ವಿಚಾರಗಳು ಹೊರಬೀಳಲಿವೆ ಎಂಬ ಬಗ್ಗೆ ನಾವು ಕಾದುನೋಡಬೇಕು ಎಂದು ಎಸ್. ಜೈಶಂಕರ್ ಹೇಳಿದ್ದಾರೆ.

ಒಂದು ಟ್ವೀಟ್ ಮತ್ತು ಟೂಲ್​ಕಿಟ್​ನಿಂದ ಹಲವು ಸಂಗತಿಗಳು ಬಯಲಾಗಲಿವೆ: ವಿದೇಶಾಂಗ ಸಚಿವ
ಎಸ್. ಜೈಶಂಕರ್ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on:Apr 06, 2022 | 8:13 PM

ದೆಹಲಿ: ದೇಶದಲ್ಲಿ ನಡೆಯುತ್ತಿರುವ ರೈತ ಹೋರಾಟದ ಬಗ್ಗೆ ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳು ಮಾಡಿದ್ದ ಟ್ವೀಟ್​ಗೆ, ಭಾರತೀಯ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿದ್ದು ಸರಿ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಸಮರ್ಥನೆ ಮಾಡಿಕೊಂಡಿದ್ದಾರೆ. ಸ್ವೀಡನ್​ನ ಯುವ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್​ಬರ್ಗ್ ಡಿಲೀಟ್ ಮಾಡಿರುವ ಟ್ವೀಟ್​ನಲ್ಲಿ ಟೂಲ್​ಕಿಟ್ ಡಾಕ್ಯುಮೆಂಟ್ ಹಂಚಿಕೊಂಡಿದ್ದಳು. ಅದಾದ ಬಳಿಕ ದೆಹಲಿ ಪೊಲೀಸರು, ಟೂಲ್​ಕಿಟ್​ಗೆ ಖಲಿಸ್ತಾನಿ ಸಂಬಂಧ ಇರುವುದನ್ನು ಪತ್ತೆಮಾಡಿದ್ದರು.

ಈ ಘಟನೆಗಳು ನಡೆದು ಎರಡು ದಿನಗಳ ಬಳಿಕ (ಫೆ.6) ಮಾತನಾಡಿರುವ ಎಸ್. ಜೈಶಂಕರ್, ಟೂಲ್​ಕಿಟ್ ಡಾಕ್ಯುಮೆಂಟ್ ಹಲವಾರು ಸಂಗತಿಗಳನ್ನು ಬಯಲು ಮಾಡಿದೆ. ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳ ಟ್ವೀಟ್ ವಿಚಾರಕ್ಕೆ ಭಾರತೀಯ ವಿದೇಶಾಂಗ ಸಚಿವಾಲಯ ಯಾಕೆ ಪ್ರತಿಕ್ರಿಯಿಸಿದೆ ಎಂದು ಇದರಿಂದ ಸರಿಯಾಗಿ ತಿಳಿಯಬಹುದು ಎಂದು ಹೇಳಿದ್ದಾರೆ.

ಒಂದು ಟ್ವೀಟ್, ಟೂಲ್​ಕಿಟ್ ಹಲವು ಸಂಗತಿಗಳನ್ನು ಬಯಲು ಮಾಡಿದೆ. ಇನ್ನೂ ಏನೇನು ವಿಚಾರಗಳು ಹೊರಬೀಳಲಿವೆ ಎಂಬ ಬಗ್ಗೆ ನಾವು ಕಾದುನೋಡಬೇಕು. ಸೆಲೆಬ್ರಿಟಿಗಳು ತಮಗೆ ಹೆಚ್ಚು ತಿಳಿದಿರದ ವಿಚಾರವಾಗಿ ಮಾತನಾಡಿದ್ದಾರೆ. ಅವರ ಟ್ವೀಟ್​ಗೆ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿರುವುದಕ್ಕೆ ಖಚಿತ ಕಾರಣವಿದೆ ಎಂದು ಜೈಶಂಕರ್ ತಿಳಿಸಿದ್ದಾರೆ.

ಗುರುವಾರ (ಫೆ. 4) ದೆಹಲಿ ಪೊಲೀಸ್ ಸೈಬರ್ ಕ್ರೈಂ ವಿಭಾಗದವರು, ಟೂಲ್​ಕಿಟ್ ತಯಾರಿಸಿದವರ ವಿರುದ್ಧ ದೇಶದ್ರೋಹ, ಕ್ರಿಮಿನಲ್ ಪಿತೂರಿ ಮತ್ತು ದ್ವೇಷ ಹರಡಿರುವ ಬಗ್ಗೆ ಎಫ್​ಐಆರ್ ದಾಖಲಿಸಿಕೊಂಡಿದ್ದಾರೆ. 18 ವರ್ಷದ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್​ಬರ್ಗ್, ರೈತರಿಗೆ ಬೆಂಬಲ ಸೂಚಿಸಿ ಟ್ವೀಟ್ ಮಾಡಿದ್ದಳು. ಅದರಲ್ಲಿ ಟೂಲ್​ಕಿಟ್ ಕೂಡ ಶೇರ್ ಆಗಿತ್ತು. ಬಳಿಕ, ಆ ಟ್ವೀಟ್​ ಅನ್ನು ಗ್ರೆಟಾ ಡಿಲಿಟ್ ಮಾಡಿದ್ದಳು.

ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಶೇಷ ಕ್ರೈಂ ಬ್ರಾಂಚ್​ನ ಪ್ರವೀರ್ ರಂಜನ್, ಟೂಲ್​ಕಿಟ್ ರಚನೆಯ ಹಿಂದೆ ಖಲಿಸ್ತಾನಿ ಪರವಾಗಿರುವ ‘ಪೊಯೆಟಿಕ್ ಜಸ್ಟೀಸ್ ಫೌಂಡೇಷನ್’ ಕೈವಾಡ ಇರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ವ್ಯಕ್ತಿಗಳು ರೈತರ ಪ್ರತಿಭಟನೆಯ ಪರವಾಗಿ ಟ್ವೀಟ್ ಮಾಡಿದ್ದರು. ಪಾಪ್ ತಾರೆ ರಿಹಾನ್ನಾ, ನ್ಯಾಯವಾದಿ-ಬರಹಗಾರ್ತಿ ಮೀನಾ ಹ್ಯಾರಿಸ್, ಗ್ರೆಟಾ ಥನ್​ಬರ್ಗ್ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು. ಬಳಿಕ, ಭಾರತೀಯ ವಿದೇಶಾಂಗ ಸಚಿವಾಲಯ ಈ ಬಗ್ಗೆ ಕಟುವಾಗಿ ಪ್ರತಿಕ್ರಿಯಿಸಿತ್ತು. ಅವರ ಟ್ವೀಟ್​ಗಳನ್ನು ಸ್ಪಷ್ಟವೂ ಅಲ್ಲದ, ಜವಾಬ್ದಾರಿಯುತವಲ್ಲದ ಹೇಳಿಕೆ ಎಂದು ತಿಳಿಸಿತ್ತು.

ಪ್ರತಿಭಟನೆ ನಿರತ ರೈತರಿಗೆ ಬೆಂಬಲ ಸೂಚಿಸಿದ ಪಾಪ್ ತಾರೆ ರಿಹಾನ್ನಾ, ಪರಿಸರ ಹೋರಾಟಗಾರ್ತಿ ಗ್ರೇಟಾ ಥುನ್​ಬರ್ಗ್

ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಗ್ರೇಟಾ ಥುನ್​ಬರ್ಗ್​​ ವಿರುದ್ಧ FIR ದಾಖಲಿಸಿದ​ ದೆಹಲಿ ಪೊಲೀಸರು

Published On - 1:46 pm, Sun, 7 February 21

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ