AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮದಲ್ಲದ ಕ್ಷೇತ್ರದ ಬಗ್ಗೆ ಮಾತಾಡುವಾಗ ಎಚ್ಚರಿಕೆ ಇರಬೇಕು: ಸಚಿನ್ ಟ್ವೀಟ್​ಗೆ ಶರದ್ ಪವಾರ್ ಪ್ರತಿಕ್ರಿಯೆ

ಪ್ರತಿಭಟನಾ ನಿರತ ರೈತರನ್ನು ಖಲಿಸ್ತಾನಿಗಳು ಹಾಗೂ ಭಯೋತ್ಪಾದಕರು ಎಂದು ಕೇಂದ್ರ ಸರ್ಕಾರ ಹೇಳುತ್ತಿರುವ ಬಗ್ಗೆಯೂ ಪವಾರ್ ಅಸಮಧಾನ ವ್ಯಕ್ತಪಡಿಸಿದ್ದಾರೆ.

ನಮ್ಮದಲ್ಲದ ಕ್ಷೇತ್ರದ ಬಗ್ಗೆ ಮಾತಾಡುವಾಗ ಎಚ್ಚರಿಕೆ ಇರಬೇಕು: ಸಚಿನ್ ಟ್ವೀಟ್​ಗೆ ಶರದ್ ಪವಾರ್ ಪ್ರತಿಕ್ರಿಯೆ
ಶರದ್ ಪವಾರ್ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on:Apr 06, 2022 | 8:13 PM

ಮುಂಬೈ: ನಮ್ಮದಲ್ಲದ ಇತರ ಕ್ಷೇತ್ರದ ವಿದ್ಯಾಮಾನಗಳ ಕುರಿತು ಪ್ರತಿಕ್ರಿಯಿಸುವಾಗ ಜಾಗ್ರತೆಯಿಂದ ಇರಬೇಕು ಎಂದು ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್, ಸಚಿನ್ ತೆಂಡೂಲ್ಕರ್ ಟ್ವೀಟ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಪಾಪ್ ತಾರೆ ರಿಹಾನ್ನಾ, ಭಾರತದಲ್ಲಿ ನಡೆಯುತ್ತಿರುವ ರೈತ ಹೋರಾಟದ ಪರ ವಹಿಸಿ ಟ್ವೀಟ್ ಮಾಡಿದ್ದರು. ಅದಕ್ಕೆ ವಿರುದ್ಧವಾಗಿ ಸಚಿನ್ ತೆಂಡೂಲ್ಕರ್, ಅಕ್ಷಯ್ ಕುಮಾರ್ ಸಹಿತ ಹಲವು ಭಾರತೀಯ ಸೆಲೆಬ್ರಿಟಿಗಳು ಟ್ವೀಟ್ ಮಾಡಿ ಪ್ರತ್ಯುತ್ತರ ನೀಡಿದ್ದರು.

‘‘ಹಲವಾರು ಭಾರತೀಯರು ತಮ್ಮ ನಿಲುವಿನ ಬಗ್ಗೆ ಟ್ವೀಟ್ ಮಾಡಿದ್ದರು. ಆದರೆ, ತಮ್ಮದಲ್ಲದ ಇತರ ಕ್ಷೇತ್ರದ ಬಗ್ಗೆ ಮಾತನಾಡುವಾಗ ಜಾಗರೂಕರಾಗಿರಬೇಕು. ಹೀಗೆಂದು ನಾನು ಸಚಿನ್ ತೆಂಡೂಲ್ಕರ್​ಗೆ ಸಲಹೆ ನೀಡಲು ಬಯಸುತ್ತೇನೆ’’ ಎಂದು ಶರದ್ ಪವಾರ್ ANIಗೆ ಹೇಳಿಕೆ ನೀಡಿದ್ದಾರೆ.

ಸಚಿನ್ ತೆಂಡೂಲ್ಕರ್ ಟ್ವೀಟ್ ಮಾಡಿದ ಘಟನೆ ನಡೆದ ಕೆಲವು ದಿನಗಳ ಬಳಿಕ, ಶರದ್ ಪವಾರ್ ಹೀಗೆ ಪ್ರತಿಕ್ರಿಯಿಸಿದ್ದಾರೆ. ಪ್ರತಿಭಟನಾ ನಿರತ ರೈತರನ್ನು ಖಲಿಸ್ತಾನಿಗಳು ಹಾಗೂ ಭಯೋತ್ಪಾದಕರು ಎಂದು ಕೇಂದ್ರ ಸರ್ಕಾರ ಹೇಳುತ್ತಿರುವ ಬಗ್ಗೆಯೂ ಪವಾರ್ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಕೃಷಿ ಸಚಿವರಾಗಿದ್ದ ಪವಾರ್, ಚಳುವಳಿಯಲ್ಲಿ ಭಾಗಿಯಾಗಿರುವವರು ನಮ್ಮ ದೇಶದ ಜನತೆಗೆ ಅನ್ನ ನೀಡುತ್ತಿರುವ ರೈತರು. ಅವರನ್ನು ಖಲಿಸ್ತಾನಿ ಅಥವಾ ಭಯೋತ್ಪಾದಕರು ಎಂದು ಕರೆಯುವ ಹಕ್ಕಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರತಿಭಟನೆ ನಿರತ ರೈತರಿಗೆ ಬೆಂಬಲ ಸೂಚಿಸಿದ ಪಾಪ್ ತಾರೆ ರಿಹಾನ್ನಾ, ಪರಿಸರ ಹೋರಾಟಗಾರ್ತಿ ಗ್ರೇಟಾ ಥುನ್​ಬರ್ಗ್

Farmers Protest | ವ್ಯಂಗ್ಯವಾಡಿದ ಟ್ರೋಲಿಗರಿಗೆ ತಕ್ಕ ಉತ್ತರ ನೀಡಿದ ಮಿಯಾ ಖಲೀಫಾ

ಶರದ್ ಪವಾರ್ ನೀಡಿರುವ ಹೇಳಿಕೆಗೆ ಸಂಬಂಧಿಸಿ, ಬಿಜೆಪಿ ಲೋಕಸಭಾ ಸದಸ್ಯ ಮೀನಾಕ್ಷಿ ಲೇಖಿ ಪ್ರತಿಕ್ರಿಯಿಸಿದ್ದಾರೆ. ಈ ಸಲಹೆಯನ್ನು ಮಿಯಾ ಖಲೀಫಾ, ರಿಹಾನ್ನಾ ಹಾಗೂ  ಗ್ರೇಟಾ ಥುನ್​ಬರ್ಗ್​ಗೆ ನೀಡಬೇಕು ಎಂದು ಅನಿಸುತ್ತಿದೆ. ಮಾಜಿ ಕೃಷಿ ಸಚಿವರಾದ ಪವಾರ್, APMC ಜೊತೆ ಬದಲಾವಣೆಗಾಗಿ ಕೆಲಸ ಮಾಡಿ ಈಗ ನಿಜ ತಿಳಿದೂ ಸುಮ್ಮನಿರುವುದು ಹೇಗೆ ಎಂದು ಟ್ವೀಟ್ ಮಾಡಿದ್ದಾರೆ.

ಮೀನಾಕ್ಷಿ ಲೇಖಿ ಟ್ವೀಟ್ ಮೂಲಕ ಪ್ರತಿಕ್ರಿಯೆ

ಶರದ್ ಪವಾರ್ ಕೃಷಿ ಸಚಿವರಾಗಿದ್ದ ಸಂದರ್ಭ, ಕೃಷಿ ವಲಯದಲ್ಲಿ ಖಾಸಗಿ ಭಾಗವಹಿಸುವಿಕೆಗೆ ಪ್ರೋತ್ಸಾಹ ನೀಡುವ ವಿಚಾರದಲ್ಲಿ ಒಲವು ತೋರಿದ್ದರು. ಕೃಷಿ ವಿಭಾಗಕ್ಕೆ ಬದಲಾವಣೆ ತರಲು ಯೋಚಿಸಿದ್ದರು. ಆಗ ಪವಾರ್ ಬರೆದಿದ್ದ ಪತ್ರವೊಂದನ್ನು ಕಳೆದ ಡಿಸೆಂಬರ್​ನಲ್ಲಿ, ಬಿಜೆಪಿ ಹೊರಹಾಕಿತ್ತು. ಶರದ್ ಪವಾರ್ ದ್ವಂದ್ವ ನಿಲುವಿನ ಬಗ್ಗೆ ಟೀಕಿಸಿತ್ತು. ಕಳೆದ ವಾರ ನರೇಂದ್ರ ಸಿಂಗ್ ತೋಮರ್, ಶರದ್ ಪವಾರ್ ಜೊತೆಗೆ ನೇರಾನೇರ ಟ್ವೀಟ್ ಟೀಕೆ ಮಾಡಿದ್ದರು.

Fact Check | ಪಾಪ್ ತಾರೆ ರಿಹಾನ್ನಾ ಕೈಯಲ್ಲಿ ಪಾಕ್ ಧ್ವಜ; ಫೋಟೊಶಾಪ್ ಫೋಟೊ ವೈರಲ್

Rihanna controversy ವಿವಾದಿತ ಗಾಯಕಿ ರಿಹಾನ್ನಾ ಮಾತೃದೇಶಕ್ಕೆ ಭಾರತದ ಕೊರೊನಾ ಲಸಿಕೆ ಸರಬರಾಜಾಯ್ತು!

Published On - 11:30 am, Sun, 7 February 21

VIDEO: ನಿಜಕ್ಕೂ ಇದು ನೋ ಬಾಲಾ? ಇಲ್ಲಿದೆ ಉತ್ತರ 
VIDEO: ನಿಜಕ್ಕೂ ಇದು ನೋ ಬಾಲಾ? ಇಲ್ಲಿದೆ ಉತ್ತರ 
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ