AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಕಾಯ್ದೆಗಳನ್ನು ಹಿಂಪಡೆದ ಕೇಂದ್ರ ಸರ್ಕಾರ: ಹೋರಾಟ ನಿಲ್ಲದು ಎಂದು ರೈತ ಸಂಘಟನೆಗಳು

ನ.26ರಂದು ರೈತರ ಹೋರಾಟ ಆರಂಭವಾಗಿ ಒಂದು ವರ್ಷ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ರೈತರ‌ ಹೋರಾಟದ ವಾರ್ಷಿಕೋತ್ಸವದ ಸಭೆಗಳು ನಡೆಯಲಿವೆ. ನ.29ರಂದು ದೆಹಲಿಯ ಸಂಸತ್ತಿಗೆ ರೈತರು ಟ್ರ್ಯಾಕ್ಟರ್ ಱಲಿ ನಡೆಸಲಿದ್ದಾರೆ ಎಂದು ರೈತ ಸಂಘಟನೆಗಳು ಘೋಷಿಸಿವೆ.

ಕೃಷಿ ಕಾಯ್ದೆಗಳನ್ನು ಹಿಂಪಡೆದ ಕೇಂದ್ರ ಸರ್ಕಾರ: ಹೋರಾಟ ನಿಲ್ಲದು ಎಂದು ರೈತ ಸಂಘಟನೆಗಳು
ರೈತರ ಪ್ರತಿಭಟನೆ (ಸಂಗ್ರಹ ಚಿತ್ರ)
TV9 Web
| Edited By: |

Updated on: Nov 20, 2021 | 5:28 PM

Share

ಲಖನೌ: ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ನಿರ್ಧಾರ ಪ್ರಕಟಿಸಿದ್ದರೂ ರೈತ ಸಂಘಟನೆಗಳು ತಮ್ಮ ಹೋರಾಟ ಕೈಬಿಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿವೆ. ಪಟ್ಟು ಸಡಿಲಿಸದ ರೈತ ಸಂಘಟನೆಗಳು ನ.22, 26 ಮತ್ತು 29ರಂದು ಈ ಮೊದಲು ಘೋಷಣೆಯಾಗಿದ್ದಂತೆಯೇ ಕಾರ್ಯಕ್ರಮಗಳು ನಡೆಯಲಿವೆ ಎಂದು ಘೋಷಿಸಿವೆ. ನ.22ರಂದು ರೈತ ಸಂಘಟನೆಗಳು ಲಖನೌದಲ್ಲಿ ಱಲಿ ನಡೆಸಲಿವೆ. ನ.26ರಂದು ರೈತರ ಹೋರಾಟ ಆರಂಭವಾಗಿ ಒಂದು ವರ್ಷ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ರೈತರ‌ ಹೋರಾಟದ ವಾರ್ಷಿಕೋತ್ಸವದ ಸಭೆಗಳು ನಡೆಯಲಿವೆ. ನ.29ರಂದು ದೆಹಲಿಯ ಸಂಸತ್ತಿಗೆ ರೈತರು ಟ್ರ್ಯಾಕ್ಟರ್ ಜಾಥಾ ನಡೆಸಲಿದ್ದಾರೆ ಎಂದು ರೈತ ಸಂಘಟನೆಗಳು ಘೋಷಿಸಿವೆ.

ನಮ್ಮ ಎಲ್ಲ ಬೇಡಿಕೆಗಳು ಈಡೇರುವವರೆಗೂ ರೈತರ ಹೋರಾಟ ಮುಂದುವರಿಯಲಿದೆ. ರೈತರ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ನೀಡಬೇಕು. ಕೃಷಿ ವಿರೋಧಿಸಿ ನಡೆದ ಹೋರಾಟದಲ್ಲಿ ಹುತಾತ್ಮರಾದ ಮೃತ ರೈತರ ಕುಟುಂಬಕ್ಕೆ ಸೂಕ್ತ ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿರುವ ಸಂಘಟನೆಗಳು ವಿದ್ಯುತ್ ಖಾಸಗೀಕರಣ, ಮಾಲಿನ್ಯಕ್ಕೆ ರೈತರ ಹೊಣೆಯಾಗಿಸುವ ಮಸೂದೆಗಳನ್ನೂ ಹಿಂಪಡೆಯಬೇಕು ಎಂದು ಒತ್ತಾಯಿಸಿದವು.

ಕೃಷಿಕಾಯ್ದೆ ವಿರೋಧಿ ಹೋರಾಡುತ್ತಿದ್ದ 40 ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾದ ಪ್ರಮುಖ ನಾಯಕರು ಹೋರಾಟದ ಮುಂದಿನ ರೂಪುರೇಷೆ ಚರ್ಚಿಸಲು ಶನಿವಾರ ಸಭೆ ನಡೆಸಿದರು. ಲಖನೌ ಮಹಾಪಂಚಾಯತ್ ಮತ್ತು ಟ್ರ್ಯಾಕ್ಟರ್ ಜಾಥಾವನ್ನು ಈ ಹಿಂದೆ ನಿಗದಿಯಾಗಿರುವಂತೆಯೇ ಮುಂದುವರಿಸಬೇಕು ಎಂಬ ಅಭಿಪ್ರಾಯ ಸಭೆಯಲ್ಲಿ ಕೇಳಿ ಬಂತು.

ಸಂಯುಕ್ತ ಕಿಸಾನ್ ಮೋರ್ಚಾದ ಸಭೆ ಭಾನುವಾರವೂ ನಡೆಯಲಿದೆ. ರೈತರ ಮೇಲೆ ಹೂಡಿರುವ ಪ್ರಕರಣಗಳನ್ನು ಹಿಂಪಡೆಯುವುದು ಮತ್ತು ಪರಿಹಾರ ಘೋಷಿಸುವ ವಿಚಾರವನ್ನು ಈ ಸಭೆಯಲ್ಲಿಯೂ ಚರ್ಚಿಸಲಾಗುವುದು ಎಂದು ಮೋರ್ಚಾದ ನಾಯಕ ಗುರ್ಣಾಮ್ ಸಿಂಗ್ ಚಾರುಣಿ ಹೇಳಿದ್ದಾರೆ.

ಇದನ್ನೂ ಓದಿ: ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ: ಮುಂದೇನು? ಇದನ್ನೂ ಓದಿ: Farm Laws Timeline ಕೃಷಿ ಕಾನೂನು ಅಂಗೀಕಾರದಿಂದ ರದ್ದತಿ ನಿರ್ಧಾರವರೆಗೆ ಏನೆಲ್ಲಾ ನಡೆಯಿತು?

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ