AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜೆಟ್ ದಿನ ರೈತರ ಸಂಸತ್ ಮುತ್ತಿಗೆ ಯೋಜನೆ ಕೈಬಿಡುವ ಸಾಧ್ಯತೆ; ನಿನ್ನೆಯ ಹಿಂಸಾಚಾರದ ಬಳಿಕ ಚಿಂತನೆ

ರೈತರ ಹೋರಾಟ ಹೇಗೆ ಮುಂದುವರಿಸಬೇಕು ಎಂಬ ಬಗ್ಗೆ ಚರ್ಚಿಸಲು ಇಂದು ಮಧ್ಯಾಹ್ನ 2 ಗಂಟೆಗೆ ಸಂಯುಕ್ತ ಕಿಸಾನ್ ಮೋರ್ಚಾ ಸಭೆ‌ ನಡೆಸಲಿದೆ.

ಬಜೆಟ್ ದಿನ ರೈತರ ಸಂಸತ್ ಮುತ್ತಿಗೆ ಯೋಜನೆ ಕೈಬಿಡುವ ಸಾಧ್ಯತೆ; ನಿನ್ನೆಯ ಹಿಂಸಾಚಾರದ ಬಳಿಕ ಚಿಂತನೆ
TV9 Web
| Edited By: |

Updated on:Apr 06, 2022 | 8:38 PM

Share

ದೆಹಲಿ: ಬಜೆಟ್ ದಿನ ಸಂಸತ್ ಭವನಕ್ಕೆ ಮುತ್ತಿಗೆ ಹಾಕುವ ಬಗ್ಗೆ ಹಾಕಿಕೊಂಡಿದ್ದ ಯೋಜನೆಯನ್ನು ರೈತರು ಕೈಬಿಡುವ ಸಾಧ್ಯತೆ ಅಂದಾಜಿಸಲಾಗಿದೆ. ಈ ಮೊದಲು, ರೈತರು ಸಂಸತ್​ವರೆಗೆ ಮೆರವಣಿಗೆ ತೆರಳಿ ಮುತ್ತಿಗೆ ಹಾಕಲು ನಿರ್ಧರಿಸಿದ್ದರು. ಆದರೆ, ದೆಹಲಿಯಲ್ಲಿ ನಿನ್ನೆಯ ಹಿಂಸಾಚಾರ ಘಟನೆಯ ಬಳಿಕ ಈ ಯೋಜನೆಯನ್ನು ಕೈಬಿಡಲು ಚಿಂತನೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಎರಡು ತಿಂಗಳಿನಿಂದ ಕೇಂದ್ರದ ನೂತನ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ನಿನ್ನೆ ಟ್ರಾಕ್ಟರ್ ರ್ಯಾಲಿ ನಡೆಸಲು ಉದ್ದೇಶಿಸಿದ್ದರು. ಅದರಂತೆ ಆರಂಭವಾದ ಟ್ರಾಕ್ಟರ್ ಪರೇಡ್ ಬಳಿಕ ಅತಿರೇಕದ ಘಟನಾವಳಿಗಳಿಗೆ ಸಾಕ್ಷಿಯಾಯಿತು. ಹಿಂಸಾತ್ಮಕ ಕೃತ್ಯಗಳು ರಾಷ್ಟ್ರ ರಾಜಧಾನಿಯಲ್ಲಿ ನಿನ್ನೆ ನಡೆದವು. ಇದೀಗ ರೈತ ಹೋರಾಟ ದಿಕ್ಕು ತಪ್ಪಿದಂತಾಗಿದ್ದು, ಹೋರಾಟವನ್ನು ಮತ್ತೆ ಸುಸೂತ್ರವಾಗಿ ರೂಪಿಸಲು ಕಿಸಾನ್ ಮೋರ್ಚಾ ಉದ್ದೇಶಿಸಿದೆ.

ಮಧ್ಯಾಹ್ನ 2 ಗಂಟೆಗೆ ಸಂಯುಕ್ತ ಕಿಸಾನ್ ಮೋರ್ಚಾ ಸಭೆ ಕಿಸಾನ್ ಮೋರ್ಚಾ ಇಂದು ಮಧ್ಯಾಹ್ನ 2 ಗಂಟೆಗೆ ಸಂಯುಕ್ತ ಕಿಸಾನ್ ಮೋರ್ಚಾ ಸಭೆ‌ ಕರೆದಿದೆ. ದೆಹಲಿಯ ಗಡಿ ಭಾಗದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಸಭೆ ನಡೆಸಲಿದೆ. ರೈತರ ಹೋರಾಟ ಹೇಗೆ ಮುಂದುವರಿಸಬೇಕು ಎಂಬ ಬಗ್ಗೆ ಈ ವೇಳೆ ಚರ್ಚೆಯಾಗಲಿದೆ.

65 ದಿನದಿಂದ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ್ದ ರೈತರು ಮತ್ತೆ ಶಾಂತಿಯುತ ಹೋರಾಟ ಮುಂದುವರಿಸುವ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಸಿಂಘು ಗಡಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಸಭೆ ನಡೆಯಲಿದೆ. 39 ರೈತ ಸಂಘಟನೆಗಳ ಸಂಯುಕ್ತ ಕಿಸಾನ್ ಮೋರ್ಚಾ ಸಭೆಯಲ್ಲಿ ಭಾಗಿಯಾಗಲಿದೆ.

ಕೆಂಪುಕೋಟೆ ಘಟನೆ ಬಗ್ಗೆ ಉನ್ನತ ಮಟ್ಟದ ಸಭೆ, ಕೆಂಪುಕೋಟೆ ಸ್ಥಳ ಪರಿಶೀಲನೆ ಮಾಡಿದ ಪ್ರವಾಸೋದ್ಯಮ ಸಚಿವ ಪ್ರಹ್ಲಾದ್

Published On - 2:39 pm, Wed, 27 January 21

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್