AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪುಕೋಟೆ ಅಹಿತಕರ ಘಟನೆಗಳಿಂದ ಬೇಸತ್ತು ಚಳುವಳಿಯಿಂದ ಹಿಂದೆ ಸರಿದ 2 ರೈತ ಸಂಘಟನೆಗಳು

ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ಮತ್ತು ಭಾರತೀಯ ಕಿಸಾನ್​ ಯೂನಿಯನ್​ ಭಾನುಪ್ರತಾಪ್ ಬಣ ನಡೆಯುತ್ತಿರುವ ಹೋರಾಟದಿಂದ ಹಿಂದೆ ಸರಿದಿವೆ.

ಕೆಂಪುಕೋಟೆ ಅಹಿತಕರ ಘಟನೆಗಳಿಂದ ಬೇಸತ್ತು ಚಳುವಳಿಯಿಂದ ಹಿಂದೆ ಸರಿದ 2 ರೈತ ಸಂಘಟನೆಗಳು
ಪೊಲೀಸ್ ಬ್ಯಾರಿಕೇಡ್​ಗಳು ಧ್ವಂಸವಾದವು.
TV9 Web
| Edited By: |

Updated on:Apr 06, 2022 | 8:36 PM

Share

ದೆಹಲಿ: ನಿನ್ನೆ ನಡೆದ ಅಹಿತಕರ ಘಟನೆಗಳು, ಹಿಂಸಾತ್ಮಕ ಕೃತ್ಯಗಳಿಂದ ಮನನೊಂದ ಎರಡು ರೈತಪರ ಸಂಘಟನೆಗಳು ಕಿಸಾನ್ ಆಂದೋಲನದಿಂದ ಹಿಂದೆ ಸರಿಯುತ್ತಿರುವುದಾಗಿ ಇಂದು (ಜ.27) ಘೋಷಿಸಿಕೊಂಡಿವೆ. ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ಮತ್ತು ಭಾರತೀಯ ಕಿಸಾನ್​ ಯೂನಿಯನ್​ ಬಾನುಪ್ರತಾಪ್ ಬಣ ಕೇಂದ್ರದ ನೂತನ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟದಿಂದ ಹಿಂದೆ ಸರಿದಿವೆ.

ಈ ಕುರಿತು ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯ ರೈತ ಮುಖಂಡ ವಿ.ಎಂ.ಸಿಂಗ್ ಮಾತನಾಡಿದ್ದಾರೆ. ನಾವು ತಕ್ಷಣದಿಂದ ರೈತರ ಪ್ರತಿಭಟನೆ ಹಿಂಪಡೆಯುತ್ತೇವೆ. ಪ್ರತಿಭಟನೆಯಿಂದ ತಕ್ಷಣ ಹಿಂದೆ ಸರಿಯುತ್ತೇವೆ. ಬೇರೆಯವರ ನಿರ್ದೇಶನದ ಮೇರೆಗೆ ಪ್ರತಿಭಟನೆ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ. ಸಮಿತಿಯು ಧರಣಿಯಿಂದ ತಕ್ಷಣವೇ ಹಿಂದೆ ಸರಿಯುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ.

ಕನಿಷ್ಠ ಬೆಂಬಲ ಬೆಲೆ ನೀಡುವ ಖಚಿತತೆ ನೀಡುವವರೆಗೂ ಹೋರಾಟ ಮಾಡುತ್ತೇವೆ. ಆದರೆ, ಇಂತಹ ಚಳುವಳಿಯನ್ನು ಮಾಡಲು ಹೋಗುವುದಿಲ್ಲ. ನಾವು ಪ್ರಾಣ ಕಳೆದುಕೊಳ್ಳುವುದಕ್ಕೆ ಇಲ್ಲಿಗೆ ಬಂದಿಲ್ಲ ಎಂದು ರೈತ ಮುಖಂಡ ವಿ.ಎಂ.ಸಿಂಗ್ ತಿಳಿಸಿದ್ದಾರೆ. ನಿನ್ನೆ ನಡೆದಿರುವ ಘಟನೆಗಳಿಂದ ನಾನು ಮನನೊಂದಿದ್ದೇನೆ. ಆದ್ದರಿಂದ, 58 ದಿನಗಳಿಂದ ನಡೆಸುತ್ತಿರುವ ಈ ಚಳುವಳಿಯಿಂದ ಹಿಂದೆ ಸರಿಯುತ್ತೇವೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಭಾನು ಪ್ರತಾಪ್ ಬಣ) ಅಧ್ಯಕ್ಷ ಠಾಕೂರ್ ಭಾನು ಪ್ರತಾಪ್ ಸಿಂಗ್ ಚಿಲ್ಲಾ ಗಡಿಭಾಗದಲ್ಲಿ ಹೇಳಿಕೆ ನೀಡಿದ್ದಾರೆ.

ಬಜೆಟ್ ದಿನ ರೈತರ ಸಂಸತ್ ಮುತ್ತಿಗೆ ಯೋಜನೆ ಕೈಬಿಡುವ ಸಾಧ್ಯತೆ; ನಿನ್ನೆಯ ಹಿಂಸಾಚಾರದ ಬಳಿಕ ಚಿಂತನೆ

Published On - 6:14 pm, Wed, 27 January 21

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ