AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವುದೇ ಕಾರಣಕ್ಕೂ ಪ್ರತಿಭಟನಾ ಸ್ಥಳದಿಂದ ತೆರಳುವುದಿಲ್ಲ: ಯೋಗೇಂದ್ರ ಯಾದವ್ ಘೋಷಣೆ

ಮೋದಿಜೀ, ಯೋಗಿಜೀ ಹಾಗೂ ಎಲ್ಲರೂ ಜಾಗೃತರಾಗಿ ಕೇಳಿರಿ. ಪ್ರತಿಭಟನಾ ನಿರತ ರೈತರು ಅವಮಾನ ಮತ್ತು ಮಾನಹಾನಿಗೊಂಡು ಈ ಚಳುವಳಿಯಿಂದ ಹಿಂದೆ ಸರಿಯುವುದಿಲ್ಲ.

ಯಾವುದೇ ಕಾರಣಕ್ಕೂ ಪ್ರತಿಭಟನಾ ಸ್ಥಳದಿಂದ ತೆರಳುವುದಿಲ್ಲ: ಯೋಗೇಂದ್ರ ಯಾದವ್ ಘೋಷಣೆ
ಯೋಗೇಂದ್ರ ಯಾದವ್
TV9 Web
| Edited By: |

Updated on:Apr 06, 2022 | 8:31 PM

Share

ದೆಹಲಿ: ಮೋದಿಜೀ, ಯೋಗಿಜೀ ಹಾಗೂ ಎಲ್ಲರೂ ಜಾಗೃತರಾಗಿ ಕೇಳಿರಿ.. ಪ್ರತಿಭಟನಾ ನಿರತ ರೈತರು ಅವಮಾನ ಮತ್ತು ಮಾನಹಾನಿಗೊಂಡು ಈ ಚಳುವಳಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ವರಾಜ್ ಪಕ್ಷದ ನಾಯಕ ಯೋಗೇಂದ್ರ ಯಾದವ್ ಎಚ್ಚರಿಕೆ ನೀಡಿದ್ದಾರೆ. ರೈತ ಹೋರಾಟವನ್ನು ಉದ್ದೇಶಿಸಿ, ದೆಹಲಿ-ಉತ್ತರ ಪ್ರದೇಶ ಗಡಿಭಾಗದಲ್ಲಿ ಯಾದವ್ ಮಾತನಾಡಿದ್ದಾರೆ. ಯಾವುದೇ ಕಾರಣಕ್ಕೂ ಪ್ರತಿಭಟನಾ ಸ್ಥಳದಿಂದ ತೆರಳುವುದಿಲ್ಲ ಎಂದು ಹೇಳಿದ್ದಾರೆ.

ಇಂದು ಸಿಂಘು ಗಡಿಭಾಗದಲ್ಲಿ ಪ್ರತಿಭಟನಾ ನಿರತರಾಗಿದ್ದ ರೈತರನ್ನು ಚದುರಿಸಲು ಹಾಗೂ ಪರಿಸ್ಥಿತಿಯನ್ನು ತಿಳಿಗೊಳಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದರು. ಸ್ಥಳೀಯರು ಎಂದು ಗುರುತಿಸಲ್ಪಟ್ಟ ಅನೇಕರು ಕೂಡ ರೈತರು ಜಾಗ ಖಾಲಿ ಮಾಡಬೇಕು ಎಂದು ಆಗ್ರಹಿಸಿದ್ದರು.

ಇಂದು ಮುಂಜಾನೆ ವೇಳೆ, ಭಾರತೀಯ ಕಿಸಾನ್ ಯೂನಿಯನ್ (BKU) ಸದಸ್ಯರು ಕೂಡ ದೆಹಲಿ-ಮೀರತ್ ಹೆದ್ದಾರಿಯಲ್ಲಿ ನೆಲೆಯೂರಿದ್ದರು. ಗಾಜಿಬಾದ್ ಆಡಳಿತವು ಉತ್ತರ ಪ್ರದೇಶ ಪ್ರತಿಭಟನಾ ಸ್ಥಳದಿಂದ ಜಾಗ ಖಾಲಿ ಮಾಡುವಂತೆ ಸೂಚನೆ ನೀಡಿತ್ತು. ಗುರುವಾರದ ಬಳಿಕ, ನೂರಾರು ಪೊಲೀಸರು ಕೂಡ ಸ್ಥಳದಲ್ಲಿ ನಿಯೋಜನೆಗೊಂಡಿದ್ದರು. ಜಿಲ್ಲಾ ಮ್ಯಾಜಿಸ್ಟ್ರೇಟ್ ಅಜಯ್ ಶಂಕರ್ ಪಾಂಡೆ ಹಾಗೂ ಹಿರಿಯ ಪೊಲೀಸ್ ಅಧಿಕಾರಿ ಕಲಾನಿಧಿ ನೈತಾನಿ ಪ್ರತಿಭಟನಾ ನಿರತ ಸ್ಥಳಕ್ಕೆ ಭೇಟಿ ನೀಡಿದ್ದರು.

ಕೃಷಿಗೆ ಸಂಬಂಧಿಸಿದ ಮೂರು ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳ ಮುಖಂಡರ ಮೇಲೆ ಎಫ್​ಐಆರ್ ದಾಖಲಾಗಿತ್ತು. ಇದೀಗ ಪ್ರತಿಭಟನೆಯಲ್ಲಿ ತೊಡಗಿದ ಯೋಗೇಂದ್ರ ಯಾದವ್, ಮೇಧಾ ಪಾಟ್ಕರ್, ಲಖಾ ಸಿಧಾನ, ನಟ ದೀಪು ಸಿಧು ವಿರುದ್ಧ ಲುಕ್ ಔಟ್ ನೋಟೀಸ್ ಜಾರಿ ಮಾಡಲಾಗಿದೆ. ಎಫ್​ಐಆರ್​ನಲ್ಲಿ ಹೆಸರಿರುವ ಎಲ್ಲಾ ರೈತಮುಖಂಡರು ಈ ಮೂಲಕ ತಮ್ಮ ಪಾಸ್​ಪೋರ್ಟ್ ಒಪ್ಪಿಸಬೇಕಾಗಿದೆ. ಎಫ್​ಐಆರ್ ಜಾರಿಯಾಗಿರುವ ಪ್ರತಿಭಟನಾಕಾರರು ದೇಶ ತೊರೆಯದಂತೆ ನೋಡಿಕೊಳ್ಳಲು ಇದರಿಂದ ಸಾಧ್ಯವಾಗಿದೆ.

ರೈತರೇ ಹೋರಾಟ ಮುಂದುವರಿಸಿ, ನಿಮ್ಮ ಜತೆ ನಾವಿದ್ದೇವೆ: ರಾಹುಲ್ ಗಾಂಧಿ ಅಭಯ‘ಹಸ್ತ‘

Published On - 6:22 pm, Fri, 29 January 21

Follow Us
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ
ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!