AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವುದೇ ಕಾರಣಕ್ಕೂ ಪ್ರತಿಭಟನಾ ಸ್ಥಳದಿಂದ ತೆರಳುವುದಿಲ್ಲ: ಯೋಗೇಂದ್ರ ಯಾದವ್ ಘೋಷಣೆ

ಮೋದಿಜೀ, ಯೋಗಿಜೀ ಹಾಗೂ ಎಲ್ಲರೂ ಜಾಗೃತರಾಗಿ ಕೇಳಿರಿ. ಪ್ರತಿಭಟನಾ ನಿರತ ರೈತರು ಅವಮಾನ ಮತ್ತು ಮಾನಹಾನಿಗೊಂಡು ಈ ಚಳುವಳಿಯಿಂದ ಹಿಂದೆ ಸರಿಯುವುದಿಲ್ಲ.

ಯಾವುದೇ ಕಾರಣಕ್ಕೂ ಪ್ರತಿಭಟನಾ ಸ್ಥಳದಿಂದ ತೆರಳುವುದಿಲ್ಲ: ಯೋಗೇಂದ್ರ ಯಾದವ್ ಘೋಷಣೆ
ಯೋಗೇಂದ್ರ ಯಾದವ್
TV9 Web
| Edited By: |

Updated on:Apr 06, 2022 | 8:31 PM

Share

ದೆಹಲಿ: ಮೋದಿಜೀ, ಯೋಗಿಜೀ ಹಾಗೂ ಎಲ್ಲರೂ ಜಾಗೃತರಾಗಿ ಕೇಳಿರಿ.. ಪ್ರತಿಭಟನಾ ನಿರತ ರೈತರು ಅವಮಾನ ಮತ್ತು ಮಾನಹಾನಿಗೊಂಡು ಈ ಚಳುವಳಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ವರಾಜ್ ಪಕ್ಷದ ನಾಯಕ ಯೋಗೇಂದ್ರ ಯಾದವ್ ಎಚ್ಚರಿಕೆ ನೀಡಿದ್ದಾರೆ. ರೈತ ಹೋರಾಟವನ್ನು ಉದ್ದೇಶಿಸಿ, ದೆಹಲಿ-ಉತ್ತರ ಪ್ರದೇಶ ಗಡಿಭಾಗದಲ್ಲಿ ಯಾದವ್ ಮಾತನಾಡಿದ್ದಾರೆ. ಯಾವುದೇ ಕಾರಣಕ್ಕೂ ಪ್ರತಿಭಟನಾ ಸ್ಥಳದಿಂದ ತೆರಳುವುದಿಲ್ಲ ಎಂದು ಹೇಳಿದ್ದಾರೆ.

ಇಂದು ಸಿಂಘು ಗಡಿಭಾಗದಲ್ಲಿ ಪ್ರತಿಭಟನಾ ನಿರತರಾಗಿದ್ದ ರೈತರನ್ನು ಚದುರಿಸಲು ಹಾಗೂ ಪರಿಸ್ಥಿತಿಯನ್ನು ತಿಳಿಗೊಳಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದರು. ಸ್ಥಳೀಯರು ಎಂದು ಗುರುತಿಸಲ್ಪಟ್ಟ ಅನೇಕರು ಕೂಡ ರೈತರು ಜಾಗ ಖಾಲಿ ಮಾಡಬೇಕು ಎಂದು ಆಗ್ರಹಿಸಿದ್ದರು.

ಇಂದು ಮುಂಜಾನೆ ವೇಳೆ, ಭಾರತೀಯ ಕಿಸಾನ್ ಯೂನಿಯನ್ (BKU) ಸದಸ್ಯರು ಕೂಡ ದೆಹಲಿ-ಮೀರತ್ ಹೆದ್ದಾರಿಯಲ್ಲಿ ನೆಲೆಯೂರಿದ್ದರು. ಗಾಜಿಬಾದ್ ಆಡಳಿತವು ಉತ್ತರ ಪ್ರದೇಶ ಪ್ರತಿಭಟನಾ ಸ್ಥಳದಿಂದ ಜಾಗ ಖಾಲಿ ಮಾಡುವಂತೆ ಸೂಚನೆ ನೀಡಿತ್ತು. ಗುರುವಾರದ ಬಳಿಕ, ನೂರಾರು ಪೊಲೀಸರು ಕೂಡ ಸ್ಥಳದಲ್ಲಿ ನಿಯೋಜನೆಗೊಂಡಿದ್ದರು. ಜಿಲ್ಲಾ ಮ್ಯಾಜಿಸ್ಟ್ರೇಟ್ ಅಜಯ್ ಶಂಕರ್ ಪಾಂಡೆ ಹಾಗೂ ಹಿರಿಯ ಪೊಲೀಸ್ ಅಧಿಕಾರಿ ಕಲಾನಿಧಿ ನೈತಾನಿ ಪ್ರತಿಭಟನಾ ನಿರತ ಸ್ಥಳಕ್ಕೆ ಭೇಟಿ ನೀಡಿದ್ದರು.

ಕೃಷಿಗೆ ಸಂಬಂಧಿಸಿದ ಮೂರು ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳ ಮುಖಂಡರ ಮೇಲೆ ಎಫ್​ಐಆರ್ ದಾಖಲಾಗಿತ್ತು. ಇದೀಗ ಪ್ರತಿಭಟನೆಯಲ್ಲಿ ತೊಡಗಿದ ಯೋಗೇಂದ್ರ ಯಾದವ್, ಮೇಧಾ ಪಾಟ್ಕರ್, ಲಖಾ ಸಿಧಾನ, ನಟ ದೀಪು ಸಿಧು ವಿರುದ್ಧ ಲುಕ್ ಔಟ್ ನೋಟೀಸ್ ಜಾರಿ ಮಾಡಲಾಗಿದೆ. ಎಫ್​ಐಆರ್​ನಲ್ಲಿ ಹೆಸರಿರುವ ಎಲ್ಲಾ ರೈತಮುಖಂಡರು ಈ ಮೂಲಕ ತಮ್ಮ ಪಾಸ್​ಪೋರ್ಟ್ ಒಪ್ಪಿಸಬೇಕಾಗಿದೆ. ಎಫ್​ಐಆರ್ ಜಾರಿಯಾಗಿರುವ ಪ್ರತಿಭಟನಾಕಾರರು ದೇಶ ತೊರೆಯದಂತೆ ನೋಡಿಕೊಳ್ಳಲು ಇದರಿಂದ ಸಾಧ್ಯವಾಗಿದೆ.

ರೈತರೇ ಹೋರಾಟ ಮುಂದುವರಿಸಿ, ನಿಮ್ಮ ಜತೆ ನಾವಿದ್ದೇವೆ: ರಾಹುಲ್ ಗಾಂಧಿ ಅಭಯ‘ಹಸ್ತ‘

Published On - 6:22 pm, Fri, 29 January 21

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು