Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಕಾಯ್ದೆಗಳ ಪ್ರತಿಯನ್ನು ಸುಟ್ಟು ಲೋಹ್ರಿ ಹಬ್ಬ ಆಚರಿಸಿದ ಪಂಜಾಬ್ ರೈತರು

ಪಂಜಾಬ್​ನ ಜಾನಪದ ಹಬ್ಬ ಲೋಹ್ರಿ. ಕೃಷಿ ಕಾಯ್ದೆಗಳ ಪ್ರತಿಯನ್ನು ಸುಟ್ಟು ಲೋಹ್ರಿ ಹಬ್ಬವನ್ನು ಪಂಜಾಬ್ ರೈತರು ಆಚರಿಸಿದ್ದಾರೆ. ಇತ್ತ, ರಾಹುಲ್ ಗಾಂಧಿ ಟ್ರ್ಯಾಕ್ಟರ್ ಮೆರವಣಿಗೆಯ ಪರ ಟ್ವೀಟ್ ಮಾಡಿದ್ದು. ಮಥುರಾ ಸಂಸದೆ ಹೇಮಮಾಲಿನಿ ಉದ್ದೇಶವಿಲ್ಲದೇ ರೈತರು ಚಳುವಳಿ ನಡೆಸುತ್ತಿದ್ದಾರೆ ಎಂದಿದ್ದಾರೆ.

ಕೃಷಿ ಕಾಯ್ದೆಗಳ ಪ್ರತಿಯನ್ನು ಸುಟ್ಟು ಲೋಹ್ರಿ ಹಬ್ಬ ಆಚರಿಸಿದ ಪಂಜಾಬ್ ರೈತರು
ಪ್ರತಿ ಸುಟ್ಟು ಹಾಕಿದ ರೈತರು
Follow us
guruganesh bhat
| Updated By: Lakshmi Hegde

Updated on:Jan 13, 2021 | 3:29 PM

ದೆಹಲಿ: ಪಂಜಾಬ್ ರೈತರು ತಮ್ಮ ಜಾನಪದ ಹಬ್ಬ ‘ಲೋಹ್ರಿ’ ಆಚರಣೆಯ ನಿಮಿತ್ತ ಸಿಂಘು ಗಡಿಯಲ್ಲಿ ಮೂರು ಕೃಷಿ ಕಾಯ್ದೆಗಳ ಪ್ರತಿಗಳನ್ನು ಬೆಂಕಿಯಲ್ಲಿ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಂಜಾಬ್​ನ ವಕೀಲರು ಸಹ ಈ ಲೋಹ್ರಿ ಆಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಇನ್ನು ಲುಧಿಯಾನದಲ್ಲಿ ಆಮ್​ಆದ್ಮಿ ಪಕ್ಷದ ಭಗ್ವಂತ್ ಮನ್ ಸಹ ಕೃಷಿ ಕಾಯ್ದೆಗಳ ಪ್ರತಿಯನ್ನು  ಸುಟ್ಟು ರೈತರ ಜತೆ ಪ್ರತಿಭಟನೆ ನಡೆಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ರೈತರ ಟ್ರ್ಯಾಕ್ಟರ್ ಮೆರವಣಿಗೆ ಪರ ಮಾತನಾಡಿದ್ದಾರೆ. ದೆಹಲಿ ಚಲೋ ಚಳುವಳಿಯಲ್ಲಿ ಈವರೆಗೆ 60 ರೈತರು ಮೃತಪಟ್ಟಿದ್ದಾರೆ. ಈ ಕುರಿತು ಸಂತಾಪ ಸೂಚಿಸದ ಕೇಂದ್ರ ಸರ್ಕಾರ, ಟ್ರ್ಯಾಕ್ಟರ್ ಮೆರವಣಿಗೆ ಮುಜುಗರದ ಸಂಗತಿ ಎಂದು ಭಾವಿಸುವುದು ತರವಲ್ಲ ಎಂದು ಅವರು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ರೈತರಿಗೆ ಹೋರಾಟದ ಉದ್ದೇಶವೇ ತಿಳಿದಿಲ್ಲ: ಹೇಮಮಾಲಿನಿ

ಪಂಜಾಬ್ ರೈತರಿಗೆ ತಾವು ಕೈಗೊಳ್ಳುತ್ತಿರುವ ಚಳುವಳಿಯ ಉದ್ದೇಶವೇ ತಿಳಿದಿಲ್ಲ ಎಂದು ಮಥುರಾ ಸಂಸದೆ, ಬಿಜೆಪಿ ನಾಯಕಿ ಹೇಮಮಾಲಿನಿ  ಹೇಳಿದ್ದಾರೆ. ಸರ್ವೋಚ್ಛ ನ್ಯಾಯಾಲಯದ ಆದೇಶವನ್ನು ಸ್ವಾಗತಿಸಿರುವ ಅವರು, ರೈತರಿಗೆ ಕೃಷಿ ಕಾಯ್ದೆಗಳ ಒಳ ಹೊರಗಿನ ಪರಿಚಯವೇ ಇಲ್ಲದೆ  ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಣದ ಕೈಗಳು ಪಂಜಾಬ್ ರೈತರನ್ನು ಮುನ್ನಡೆಸುತ್ತಿವೆ ಎಂದಿದ್ದಾರೆ.

3 ಕೃಷಿ ಕಾಯ್ದೆಗಳ ಅನುಷ್ಠಾನಕ್ಕೆ ಸುಪ್ರೀಂಕೋರ್ಟ್​ನಿಂದ ತಡೆ; ನಾಲ್ವರು ತಜ್ಞರನ್ನೊಳಗೊಂಡ ಸಮಿತಿ ರಚನೆ

Published On - 3:29 pm, Wed, 13 January 21

ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ