AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಕಾಯ್ದೆಗಳ ಪ್ರತಿಯನ್ನು ಸುಟ್ಟು ಲೋಹ್ರಿ ಹಬ್ಬ ಆಚರಿಸಿದ ಪಂಜಾಬ್ ರೈತರು

ಪಂಜಾಬ್​ನ ಜಾನಪದ ಹಬ್ಬ ಲೋಹ್ರಿ. ಕೃಷಿ ಕಾಯ್ದೆಗಳ ಪ್ರತಿಯನ್ನು ಸುಟ್ಟು ಲೋಹ್ರಿ ಹಬ್ಬವನ್ನು ಪಂಜಾಬ್ ರೈತರು ಆಚರಿಸಿದ್ದಾರೆ. ಇತ್ತ, ರಾಹುಲ್ ಗಾಂಧಿ ಟ್ರ್ಯಾಕ್ಟರ್ ಮೆರವಣಿಗೆಯ ಪರ ಟ್ವೀಟ್ ಮಾಡಿದ್ದು. ಮಥುರಾ ಸಂಸದೆ ಹೇಮಮಾಲಿನಿ ಉದ್ದೇಶವಿಲ್ಲದೇ ರೈತರು ಚಳುವಳಿ ನಡೆಸುತ್ತಿದ್ದಾರೆ ಎಂದಿದ್ದಾರೆ.

ಕೃಷಿ ಕಾಯ್ದೆಗಳ ಪ್ರತಿಯನ್ನು ಸುಟ್ಟು ಲೋಹ್ರಿ ಹಬ್ಬ ಆಚರಿಸಿದ ಪಂಜಾಬ್ ರೈತರು
ಪ್ರತಿ ಸುಟ್ಟು ಹಾಕಿದ ರೈತರು
guruganesh bhat
| Edited By: |

Updated on:Jan 13, 2021 | 3:29 PM

Share

ದೆಹಲಿ: ಪಂಜಾಬ್ ರೈತರು ತಮ್ಮ ಜಾನಪದ ಹಬ್ಬ ‘ಲೋಹ್ರಿ’ ಆಚರಣೆಯ ನಿಮಿತ್ತ ಸಿಂಘು ಗಡಿಯಲ್ಲಿ ಮೂರು ಕೃಷಿ ಕಾಯ್ದೆಗಳ ಪ್ರತಿಗಳನ್ನು ಬೆಂಕಿಯಲ್ಲಿ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಂಜಾಬ್​ನ ವಕೀಲರು ಸಹ ಈ ಲೋಹ್ರಿ ಆಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಇನ್ನು ಲುಧಿಯಾನದಲ್ಲಿ ಆಮ್​ಆದ್ಮಿ ಪಕ್ಷದ ಭಗ್ವಂತ್ ಮನ್ ಸಹ ಕೃಷಿ ಕಾಯ್ದೆಗಳ ಪ್ರತಿಯನ್ನು  ಸುಟ್ಟು ರೈತರ ಜತೆ ಪ್ರತಿಭಟನೆ ನಡೆಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ರೈತರ ಟ್ರ್ಯಾಕ್ಟರ್ ಮೆರವಣಿಗೆ ಪರ ಮಾತನಾಡಿದ್ದಾರೆ. ದೆಹಲಿ ಚಲೋ ಚಳುವಳಿಯಲ್ಲಿ ಈವರೆಗೆ 60 ರೈತರು ಮೃತಪಟ್ಟಿದ್ದಾರೆ. ಈ ಕುರಿತು ಸಂತಾಪ ಸೂಚಿಸದ ಕೇಂದ್ರ ಸರ್ಕಾರ, ಟ್ರ್ಯಾಕ್ಟರ್ ಮೆರವಣಿಗೆ ಮುಜುಗರದ ಸಂಗತಿ ಎಂದು ಭಾವಿಸುವುದು ತರವಲ್ಲ ಎಂದು ಅವರು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ರೈತರಿಗೆ ಹೋರಾಟದ ಉದ್ದೇಶವೇ ತಿಳಿದಿಲ್ಲ: ಹೇಮಮಾಲಿನಿ

ಪಂಜಾಬ್ ರೈತರಿಗೆ ತಾವು ಕೈಗೊಳ್ಳುತ್ತಿರುವ ಚಳುವಳಿಯ ಉದ್ದೇಶವೇ ತಿಳಿದಿಲ್ಲ ಎಂದು ಮಥುರಾ ಸಂಸದೆ, ಬಿಜೆಪಿ ನಾಯಕಿ ಹೇಮಮಾಲಿನಿ  ಹೇಳಿದ್ದಾರೆ. ಸರ್ವೋಚ್ಛ ನ್ಯಾಯಾಲಯದ ಆದೇಶವನ್ನು ಸ್ವಾಗತಿಸಿರುವ ಅವರು, ರೈತರಿಗೆ ಕೃಷಿ ಕಾಯ್ದೆಗಳ ಒಳ ಹೊರಗಿನ ಪರಿಚಯವೇ ಇಲ್ಲದೆ  ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಣದ ಕೈಗಳು ಪಂಜಾಬ್ ರೈತರನ್ನು ಮುನ್ನಡೆಸುತ್ತಿವೆ ಎಂದಿದ್ದಾರೆ.

3 ಕೃಷಿ ಕಾಯ್ದೆಗಳ ಅನುಷ್ಠಾನಕ್ಕೆ ಸುಪ್ರೀಂಕೋರ್ಟ್​ನಿಂದ ತಡೆ; ನಾಲ್ವರು ತಜ್ಞರನ್ನೊಳಗೊಂಡ ಸಮಿತಿ ರಚನೆ

Published On - 3:29 pm, Wed, 13 January 21

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!