AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಕಾಯ್ದೆಗಳ ಪ್ರತಿಯನ್ನು ಸುಟ್ಟು ಲೋಹ್ರಿ ಹಬ್ಬ ಆಚರಿಸಿದ ಪಂಜಾಬ್ ರೈತರು

ಪಂಜಾಬ್​ನ ಜಾನಪದ ಹಬ್ಬ ಲೋಹ್ರಿ. ಕೃಷಿ ಕಾಯ್ದೆಗಳ ಪ್ರತಿಯನ್ನು ಸುಟ್ಟು ಲೋಹ್ರಿ ಹಬ್ಬವನ್ನು ಪಂಜಾಬ್ ರೈತರು ಆಚರಿಸಿದ್ದಾರೆ. ಇತ್ತ, ರಾಹುಲ್ ಗಾಂಧಿ ಟ್ರ್ಯಾಕ್ಟರ್ ಮೆರವಣಿಗೆಯ ಪರ ಟ್ವೀಟ್ ಮಾಡಿದ್ದು. ಮಥುರಾ ಸಂಸದೆ ಹೇಮಮಾಲಿನಿ ಉದ್ದೇಶವಿಲ್ಲದೇ ರೈತರು ಚಳುವಳಿ ನಡೆಸುತ್ತಿದ್ದಾರೆ ಎಂದಿದ್ದಾರೆ.

ಕೃಷಿ ಕಾಯ್ದೆಗಳ ಪ್ರತಿಯನ್ನು ಸುಟ್ಟು ಲೋಹ್ರಿ ಹಬ್ಬ ಆಚರಿಸಿದ ಪಂಜಾಬ್ ರೈತರು
ಪ್ರತಿ ಸುಟ್ಟು ಹಾಕಿದ ರೈತರು
guruganesh bhat
| Updated By: Lakshmi Hegde|

Updated on:Jan 13, 2021 | 3:29 PM

Share

ದೆಹಲಿ: ಪಂಜಾಬ್ ರೈತರು ತಮ್ಮ ಜಾನಪದ ಹಬ್ಬ ‘ಲೋಹ್ರಿ’ ಆಚರಣೆಯ ನಿಮಿತ್ತ ಸಿಂಘು ಗಡಿಯಲ್ಲಿ ಮೂರು ಕೃಷಿ ಕಾಯ್ದೆಗಳ ಪ್ರತಿಗಳನ್ನು ಬೆಂಕಿಯಲ್ಲಿ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಂಜಾಬ್​ನ ವಕೀಲರು ಸಹ ಈ ಲೋಹ್ರಿ ಆಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಇನ್ನು ಲುಧಿಯಾನದಲ್ಲಿ ಆಮ್​ಆದ್ಮಿ ಪಕ್ಷದ ಭಗ್ವಂತ್ ಮನ್ ಸಹ ಕೃಷಿ ಕಾಯ್ದೆಗಳ ಪ್ರತಿಯನ್ನು  ಸುಟ್ಟು ರೈತರ ಜತೆ ಪ್ರತಿಭಟನೆ ನಡೆಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ರೈತರ ಟ್ರ್ಯಾಕ್ಟರ್ ಮೆರವಣಿಗೆ ಪರ ಮಾತನಾಡಿದ್ದಾರೆ. ದೆಹಲಿ ಚಲೋ ಚಳುವಳಿಯಲ್ಲಿ ಈವರೆಗೆ 60 ರೈತರು ಮೃತಪಟ್ಟಿದ್ದಾರೆ. ಈ ಕುರಿತು ಸಂತಾಪ ಸೂಚಿಸದ ಕೇಂದ್ರ ಸರ್ಕಾರ, ಟ್ರ್ಯಾಕ್ಟರ್ ಮೆರವಣಿಗೆ ಮುಜುಗರದ ಸಂಗತಿ ಎಂದು ಭಾವಿಸುವುದು ತರವಲ್ಲ ಎಂದು ಅವರು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ರೈತರಿಗೆ ಹೋರಾಟದ ಉದ್ದೇಶವೇ ತಿಳಿದಿಲ್ಲ: ಹೇಮಮಾಲಿನಿ

ಪಂಜಾಬ್ ರೈತರಿಗೆ ತಾವು ಕೈಗೊಳ್ಳುತ್ತಿರುವ ಚಳುವಳಿಯ ಉದ್ದೇಶವೇ ತಿಳಿದಿಲ್ಲ ಎಂದು ಮಥುರಾ ಸಂಸದೆ, ಬಿಜೆಪಿ ನಾಯಕಿ ಹೇಮಮಾಲಿನಿ  ಹೇಳಿದ್ದಾರೆ. ಸರ್ವೋಚ್ಛ ನ್ಯಾಯಾಲಯದ ಆದೇಶವನ್ನು ಸ್ವಾಗತಿಸಿರುವ ಅವರು, ರೈತರಿಗೆ ಕೃಷಿ ಕಾಯ್ದೆಗಳ ಒಳ ಹೊರಗಿನ ಪರಿಚಯವೇ ಇಲ್ಲದೆ  ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಣದ ಕೈಗಳು ಪಂಜಾಬ್ ರೈತರನ್ನು ಮುನ್ನಡೆಸುತ್ತಿವೆ ಎಂದಿದ್ದಾರೆ.

3 ಕೃಷಿ ಕಾಯ್ದೆಗಳ ಅನುಷ್ಠಾನಕ್ಕೆ ಸುಪ್ರೀಂಕೋರ್ಟ್​ನಿಂದ ತಡೆ; ನಾಲ್ವರು ತಜ್ಞರನ್ನೊಳಗೊಂಡ ಸಮಿತಿ ರಚನೆ

Published On - 3:29 pm, Wed, 13 January 21

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ